ರಾಹುಲ್‌ ಗಾಂಧಿ ಪ್ರತಿಭಟನೆ ರದ್ದು


Team Udayavani, Oct 12, 2018, 9:32 AM IST

rahul-gandhi-700.jpg

ಬೆಂಗಳೂರು: ರಫೇಲ್‌ ಯುದ್ದ ವಿಮಾನ ಖರೀದಿಯಲ್ಲಿ ಅವ್ಯವಹಾರವಾಗಿದೆ ಎಂದು ಆರೋಪಿಸಿ ಕೇಂದ್ರ ಸರ್ಕಾರದ ವಿರುದ್ಧ ನಗರದಲ್ಲಿ ಅ.13 ರಂದು ಎಐಸಿಸಿ ಅಧ್ಯಕ್ಷ ರಾಹುಲ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದ ಕಾಂಗ್ರೆಸ್‌ ದಿಢೀರ್‌ ನಿರ್ಧಾರ ಬದಲಿಸಿದೆ. ಎಚ್‌ಎಎಲ್‌ ನಿವೃತ್ತ ಸಿಬ್ಬಂದಿ ಜೊತೆ ಅವರು ಸಂವಾದ ನಡೆಸಲಿದ್ದಾರೆ.

ನಗರದ ಹೊರ ವಲಯದ ಹೊರಮಾವು ಬಳಿಯ ಆಗರ ಮೈದಾನದಲ್ಲಿ ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳಲು ಕಾಂಗ್ರೆಸ್‌ ನಾಯಕರು ನಿರ್ಧರಿಸಿದ್ದರು. ಆದರೆ, ಆ ಪ್ರದೇಶ ಭದ್ರತಾ ದೃಷ್ಠಿಯಿಂದ ಅನುಕೂಲಕರವಾಗಿಲ್ಲ ಎಂದು ಎಸ್‌ಪಿಜಿ ಅನುಮತಿ ನಿರಾಕರಿಸಿದೆ ಎಂದು ತಿಳಿದು ಬಂದಿದೆ.

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ರಾಹುಲ್‌ ಗಾಂಧಿ ಬೇರೆ ಕಾರ್ಯಕ್ರಮಗಳು ಇರುವುದರಿಂದ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಬೃಹತ್‌ ಪ್ರತಿಭಟನಾ ಸಮಾವೇಶ ರದ್ದುಗೊಳಿಸಲಾಗಿದೆ. ಆದರೆ, ಎಚ್‌ಎಎಲ್‌ ನಿವೃತ್ತ ನೌಕರರ ಜೊತೆ ರಫೇಲ್‌ ಯುದ್ಧ ವಿಮಾನದ ಕುರಿತು ಸಂವಾದ ನಡೆಸಲಿದ್ದಾರೆ ಎಂದು ಹೇಳಿದರು.

ಎಚ್‌ಎಎಲ್‌ನಲ್ಲಿ ಸಂವಾದ ನಡೆಸಲು ಅವಕಾಶ ನಿರಾಕರಿಸಲಾಗಿದೆ ಎಂಬುದನ್ನು ಅಲ್ಲಗಳೆದ ದಿನೇಶ್‌ ಗುಂಡೂರಾವ್‌, ಎಚ್‌ಎಎಲ್‌ ಕ್ಯಾಂಪಸ್‌ನಲ್ಲಿ ಸಂವಾದ ನಡೆಸಲು ಅನುಮತಿ ನೀಡುವಂತೆ ಕೆಪಿಸಿಸಿ ಯಾವುದೇ ಪತ್ರ ಬರೆದಿಲ್ಲ. ಎಚ್‌ಎಎಲ್‌ನ ನಿವೃತ್ತ ಸಿಬ್ಬಂದಿ ಈ ಸಂವಾದ ಏರ್ಪಡಿಸಿದ್ದು, ಎಚ್‌ಎಎಲ್‌ನ ಸಾಮಾರ್ಥ್ಯದ ಬಗ್ಗೆ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವಹೇಳನಕಾರಿಯಾಗಿ ಮಾತನಾಡಿರುವುದರಿಂದ ಬೇಸರಗೊಂಡಿರುವ ಕೆಲವು ಎಚ್‌ಎಎಲ್‌ ಸಿಬ್ಬಂದಿ ಈ ಸಂವಾದ ಕಾರ್ಯಕ್ರಮ ಏರ್ಪಡಿಸಿದ್ದಾರೆ.

ಎಚ್‌ಎಎಲ್‌ನ ಇತಿಹಾಸ, ದೇಶದ ರಕ್ಷಣಾ ಕ್ಷೇತ್ರಕ್ಕೆ ಎಚ್‌ಎಎಲ್‌ ಕೊಡುಗೆ ಏನು ಎನ್ನುವುದನ್ನು ದೇಶದ ಜನತೆಗೆ ಬಹಿರಂಗ ಪಡೆಸಲು ಸಂವಾದ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿಯನ್ನು ಆಹ್ವಾನಿಸಿದ್ದಾರೆ. ಅಕ್ಟೋಬರ್‌ 13 ರಂದು ರಾಹುಲ್‌ ಗಾಂಧಿ ಸಂವಾದ ಕಾರ್ಯಕ್ರಮ ಪಾಲ್ಗೊಂಡು ವಾಪಸ್‌ ದೆಹಲಿಗೆ ತೆರಳಲಿದ್ದಾರೆ ಎಂದು ಹೇಳಿದರು.

ಸರ್ಕಾರಿ ಕಂಪನಿಯ ಬಗ್ಗೆ ನಮ್ಮ ಸರ್ಕಾರದವರೇ ತೇಜೋವಧೆ ಮಾಡಿದರೆ, ಅಲ್ಲಿ ಕೆಲಸ ಮಾಡಿರುವ ನೌಕರರಿಗೆ ನೋವಾಗಿದೆ. ಯಾವುದೇ ಅನುಭವ ಇಲ್ಲದಿರುವ ರಿಲಾಯನ್ಸ್‌ ಕಂಪನಿಗೆ ಎಚ್‌ಎಎಲ್‌ನ ಹೊಲಿಕೆ ಮಾಡಿರುವುದರಿಂದ ಬೇಸರಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಂವಾದ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ ಎಂದು ತಿಳಿಸಿದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.