ನಾಳೆ ರಾಹುಲ್ ಕೋಲಾರ ಚಿಕ್ಕಬಳ್ಳಾಪುರ ಪ್ರವಾಸ
Team Udayavani, Apr 6, 2018, 6:40 AM IST
ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಏಪ್ರಿಲ್ 7 ರಂದು ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಜನಾಶೀರ್ವಾದ ಯಾತ್ರೆಯ ಕೊನೆಯ ಪ್ರವಾಸ ಕೈಗೊಳ್ಳಲಿದ್ದಾರೆ.
ಅಂದು ಬೆಳಗ್ಗೆ ಹೆಲಿಕ್ಯಾಪ್ಟರ್ ಮೂಲಕ ಮುಳಬಾಗಿಲಿಗೆ ತೆರಳಲಿದ್ದಾರೆ. ಮುಳಬಾಗಿಲಿನಿಂದ ಕುರುಡುಮಲೆ ಗಣೇಶ ದೇವಸ್ಥಾನಕ್ಕೆ ಆಗಮಿಸಿ, ಅಲ್ಲಿಂದ ರೋಡ್ ಶೋ ಆರಂಭಿಸಲಿದ್ದಾರೆ. ಮುಳಬಾಗಿಲಿನಿಂದ ಕೆಜಿಎಫ್, ಬಂಗಾರಪೇಟೆ, ಕೋಲಾರದಲ್ಲಿ ರೋಡ್ ಶೋ ನಡೆಸಿ, ಸಂಜೆ ಕೋಲಾರದಿಂದ ಚಿಕ್ಕಬಳ್ಳಾಪುರಕ್ಕೆ ತೆರಳಿ ಚಿಕ್ಕಬಳ್ಳಾಪುರದಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಏ.8ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಜನಾಶೀರ್ವಾದ ಯಾತ್ರೆಯ ಸಮಾರೋಪದಲ್ಲಿ ಪಾಲ್ಗೊಳ್ಳಲಿದ್ದಾರೆ.