ರಾಜ್ಯದಲ್ಲಿ ಬಲ ಕಳೆದುಕೊಂಡ ರಾಹುಲ್‌ ಶಕ್ತಿ


Team Udayavani, Nov 17, 2018, 6:00 AM IST

rahul-gandhi-700.jpg

ಬೆಂಗಳೂರು: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ತಳ ಮಟ್ಟದ ಕಾರ್ಯಕರ್ತರು ಹಾಗೂ ಸಾರ್ವಜನಿಕರೊಂದಿಗೆ ನೇರ ಸಂಪರ್ಕ ಹೊಂದುವ ಉದ್ದೇಶದಿಂದ ಶುರು ಮಾಡಲಾಗಿದ್ದ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರ ಮಹತ್ವಾಕಾಂಕ್ಷಿ  ಶಕ್ತಿ  ಯೋಜನೆಗೆ ರಾಜ್ಯದಲ್ಲಿ ಹಿನ್ನಡೆಯಾಗಿದೆ.

ಐವತ್ತು ಲಕ್ಷ ಸದಸ್ಯತ್ವ ಗುರಿ ಇಟ್ಟುಕೊಂಡು ಜುಲೈನಲ್ಲಿ ಶಕ್ತಿ ಯೋಜನೆಗೆ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಚಾಲನೆ ನೀಡಿದ್ದರು. ಆದರೆ, ಮೂರು ತಿಂಗಳಲ್ಲಿ ಆಗಿರುವುದು ಒಂದೂವರೆ ಲಕ್ಷ ಸದಸ್ಯತ್ವ ಮಾತ್ರ. 

ಶಕ್ತಿ ಯೋಜನೆ ನಮ್ಮ ನಿರೀಕ್ಷೆಯಂತೆ ನಡೆಯುತ್ತಿದೆ. ನವೆಂಬರ್‌ 30 ರೊಳಗೆ ಯೋಜನೆ ಪೂರ್ಣಗೊಳಿಸುವ ಗುರಿಯಿದೆ. ಕೆಲವು ಕ್ಷೇತ್ರಗಳಲ್ಲಿ ಚುನಾವಣೆ ನಡೆದ ಹಿನ್ನೆಲೆಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಆಗಿಲ್ಲ. ಮೈಸೂರು ಭಾಗದಲ್ಲಿ ಸ್ವಲ್ಪ ಕಡಿಮೆಯಾಗಿದೆ. ಆ ಕ್ಷೇತ್ರಗಳಲ್ಲಿ ವೇಗ ಹೆಚ್ಚಿಸುತ್ತೇವೆ, ಎಂದು  ಶಕ್ತಿ ಯೋಜನೆ ರಾಜ್ಯ ಸಂಯೋಜಕ ಸೂರಜ್‌ ಹೆಗಡೆ ತಿಳಿಸಿದ್ದಾರೆ.

ರಾಜ್ಯದ ಮೂವತ್ತು ಜಿಲ್ಲೆಗಳ ಪೈಕಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಸ್ವಲ್ಪ ಮಟ್ಟಿಗೆ ಪ್ರಗತಿ ಕಂಡಿದ್ದು, ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್‌ ಅಸ್ತಿತ್ವವನ್ನೇ ಪ್ರಶ್ನಿಸುವಂತೆ ಮಾಡಿದೆ. ಬೆಂಗಳೂರು ಉತ್ತರ ಜಿಲ್ಲೆಯಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 2854 ಜನರು ಸದಸ್ಯರಾಗಿದ್ದರೆ, ಮಂಡ್ಯದಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕೇವಲ 98 ಜನ ಸದಸ್ಯರಾಗಿದ್ದಾರೆ. ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಅಂದರೆ 20 ಸಾವಿರ ಸದಸ್ಯತ್ವ ನೋಂದಣಿ ಮಾಡಲಾಗಿದ್ದು, ಮಂಡ್ಯದ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಕೇವಲ 20 ಜನ ನೋಂದಣಿಯಾಗಿದ್ದಾರೆ.

ಪಕ್ಷದ ಸಂಘಟನೆಯ ದೃಷ್ಟಿಯಿಂದ ಕಾಂಗ್ರೆಸ್‌ 37 ಜಿಲ್ಲೆಗಳನ್ನಾಗಿ ವಿಂಗಡಿಸಲಾಗಿದ್ದು, ಬೆಂಗಳೂರು ಉತ್ತರ, ಹುಬ್ಬಳ್ಳಿ-ಧಾರವಾಡ, ಬೀದರ್‌, ವಿಜಯಪುರ, ಗದಗ, ಬೆಂಗಳೂರು ಕೇಂದ್ರÅ, ಮೈಸೂರು ನಗರ, ಚಿಕ್ಕಬಳ್ಳಾಪುರ ಹಾಗೂ ಧಾರವಾಡ ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಸಾವಿರ ಸದಸ್ಯತ್ವವನ್ನು ದಾಟಿದ್ದು ಉಳಿದ ವಿಧಾನಸಭಾ ಕ್ಷೇತ್ರಗಳಲ್ಲಿ 104 ರಿಂದ 898 ರ ವರೆಗೆ ಸದಸ್ಯತ್ವ ಮಾಡಲಾಗಿದೆ.

ನಾಯಕರ ನಿರಾಸಕ್ತಿ
ಸ್ಥಳೀಯವಾಗಿ ಕೆಳ ಹಂತದ ಕಾರ್ಯಕರ್ತರು ನೇರವಾಗಿ ರಾಹುಲ್‌ ಗಾಂಧಿಯೊಂದಿಗೆ ಸಂಪರ್ಕ ಕಲ್ಪಸಲು ಶಕ್ತಿ ಯೋಜನೆ ಜಾರಿಗೆ ತಂದಿದ್ದು, ಕಾರ್ಯಕರ್ತರು ತಮ್ಮ ಮೊಬೈಲ್‌ ನಂಬರ್‌ನಿಂದ ತಮ್ಮ ಓಟರ್‌ ಐಡಿ ನಮೂದಿಸಿ ಸಂದೇಶ ರವಾನಿಸಿದರೆ ರಾಹುಲ್‌ ಗಾಂಧಿಯಿಂದ ಧನ್ಯವಾದದ ಧ್ವನಿ ಮುದ್ರಿತ ಮಾಹಿತಿ ಬರುತ್ತದೆ. ಕೆಳ ಹಂತದ ಕಾರ್ಯಕರ್ತರು ನೇರವಾಗಿ ರಾಹುಲ್‌ ಗಾಂಧಿಯೊಂದಿಗೆ ಸಂಪರ್ಕ ಹೊಂದಿದರೆ, ತಮ್ಮನ್ನು ನಿರ್ಲಕ್ಷ್ಯ ಮಾಡುತ್ತಾರೆ. ಅಲ್ಲದೇ ಕಾರ್ಯಕರ್ತರು ತಮ್ಮ ಮಾತಿಗೆ ಬೆಲೆ ಕೊಡುವುದಿಲ್ಲ ಎನ್ನುವ ಕಾರಣಕ್ಕೆ ಈ ಯೋಜನೆಯನ್ನು ಗಂಭೀರವಾಗಿ ಪರಿಗಣಿಸದೇ ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂಬ ಮಾತು ಕೇಳಿ ಬರುತ್ತಿವೆ. 

ರಾಜ್ಯ ನಾಯಕರ ಸಭೆ:
ನೋಂದಣಿ ಕುರಿತಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ವಿಭಾಗವಾರು ಸಭೆ ನಡೆಸುತ್ತಿದ್ದು, ಶುಕ್ರವಾರ ಮೈಸೂರು ವಿಭಾಗದ ಪದಾಧಿಕಾರಿಗಳ ಸಭೆ ನಡೆಸಿ ಯೋಜನೆಯ ವೇಗ ಹೆಚ್ಚಿಸುವಂತೆ ಸೂಚಿಸಿದ್ದಾರೆ. ಶನಿವಾರ ಬೆಳಗಾವಿ ಹಾಗೂ ಬೆಂಗಳೂರು ವಿಭಾಗದ ಪದಾಧಿಕಾರಿಗಳ ಸಭೆ ಹಾಗೂ ನವೆಂಬರ್‌ 20 ರಂದು ಕಲಬುರಗಿ ವಿಭಾಗದ ಜಿಲ್ಲಾಧ್ಯಕ್ಷರು ಹಾಗೂ ಉಸ್ತುವಾರಿ ಪದಾಧಿಕಾರಿಗಳ ಸಭೆ ನಡೆಸಲಿದ್ದಾರೆ. 

– ಶಂಕರ ಪಾಗೋಜಿ

ಟಾಪ್ ನ್ಯೂಸ್

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.