ರಾಹುಲ್ ಪ್ರಧಾನಿಯಾಗಲು ಶ್ರಮಿಸಿ: ಈಶ್ವರ್ ಖಂಡ್ರೆ
Team Udayavani, Jan 6, 2019, 12:55 AM IST
ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆ ಸಂಬಂಧ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗಾಗಿ ಮುಂಚೂಣಿ ಘಟಕಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ಖಂಡ್ರೆ ಹೇಳಿದರು.
ನಗರದ ಕ್ವೀನ್ಸ್ ರಸ್ತೆಯ ಪಕ್ಷದಕಚೇರಿಯಲ್ಲಿ ಶನಿವಾರ ಕಿಸಾನ್, ಮಹಿಳಾ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರ, ಕಾರ್ಮಿಕ, ಯುವ ಹಾಗೂ ಎಸ್ಸಿ,ಎಸ್ಟಿ ಸೇರಿ ಹಲವು ಕೆಪಿಸಿಸಿಯ ಮುಂಚೂಣಿ ಘಟಕಗಳ ಅಧ್ಯಕ್ಷರೊಂದಿಗೆ ಸಭೆ ನಡೆಸಿದ ಅವರು, ಲೋಕಸಭೆ
ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲೇಬೇಕು ಮತ್ತು ಪಕ್ಷ ಅಧಿಕಾರಕ್ಕೆ ಬರಲೇಬೇಕು. ರಾಹುಲ್ ಗಾಂಧಿಯವರನ್ನು ಪ್ರಧಾನಿಯಾಗಿಸುವ ನಿಟ್ಟಿನಲ್ಲಿ ಅತಿ ಹೆಚ್ಚಿನ ಶ್ರಮವಹಿಸಬೇಕು ಎಂದರು.