ರಾಹುಲ್ ಮಹದಾಯಿ ಬಗ್ಗೆ ಮಾತಾಡ್ತಾರೆ: ಪರಂ
Team Udayavani, Feb 23, 2018, 6:20 AM IST
ಬೆಂಗಳೂರು: ಫೆಬ್ರವರಿ 24 ರಿಂದ 26ರ ವರೆಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮುಂಬೈ ಕರ್ನಾಟಕ ಭಾಗದಲ್ಲಿ ಜನಾಶೀರ್ವಾದ ಯಾತ್ರೆ ನಡೆಸಲಿದ್ದು, ಈ ಸಂದರ್ಭದಲ್ಲಿ ಮಹದಾಯಿ ವಿವಾದದ ಕುರಿತಂತೆಯೂ ಮಾತನಾಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ. ಜಿ.ಪರಮೇಶ್ವರ್ ಹೇಳಿದ್ದಾರೆ.
ರಾಹುಲ್ ಗಾಂಧಿ ರಾಜ್ಯ ಪ್ರವಾಸದ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೈದರಾಬಾದ್ ಕರ್ನಾಟಕದಲ್ಲಿ ಪ್ರವಾಸ ಮಾಡುವಾಗ ರಾಹುಲ್ ಗಾಂಧಿ ಸಂವಿಧಾನದ ಅನುಚ್ಛೇಧ 371ಜೆ ತಿದ್ದುಪಡಿ ಮಾಡುವ ಕುರಿತು ಆ ಭಾಗದ ಜನರಿಗೆ ಭರವಸೆ ನೀಡಿದ್ದರು. ಅದರಂತೆ ಯುಪಿಎ ಸರ್ಕಾರದ ಅವಧಿಯಲ್ಲಿ 371ಜೆ ತಿದ್ದುಪಡಿ ಮಾಡಿ ಅನುಕೂಲ ಮಾಡಿಕೊಟ್ಟಿದ್ದರು. ರಾಜ್ಯ ಸರ್ಕಾರ ಮಹದಾಯಿ ವಿವಾದ ಬಗೆ ಹರಿಸುವಂತೆ ಹಲವಾರು ಬಾರಿ ಮನವಿ ಮಾಡಿದ್ದರೂ ಪ್ರಧಾನಿ ಮೋದಿ ಪ್ರತಿಕ್ರಿಯೆ ನೀಡದೇ ರಾಜ್ಯಕ್ಕೆ ಬಂದಾಗಲೆಲ್ಲ ಸುಳ್ಳು ಹೇಳಿ ಹೋಗುತ್ತಿದ್ದಾರೆ. ಆದರೆ ರಾಹುಲ್ಗಾಂಧಿಯವರು ಮುಂಬೈ ಕರ್ನಾಟಕ ಭಾಗದ ಪ್ರವಾಸದಲ್ಲಿ ಮಹದಾಯಿ ವಿವಾದದ ಬಗ್ಗೆ ರಾಹುಲ್ಗಾಂಧಿ ಮಾತನಾಡಲಿದ್ದಾರೆ ಎಂದು ಹೇಳಿದರು.
ರಾಹುಲ್ ಗಾಂಧಿ ಪ್ರವಾಸದ ಸಂದರ್ಭದಲ್ಲಿ ಮಹಿಳಾ ಸಂಘಟನೆಗಳು,ರೈತರೊಂದಿಗೆ ಸಂವಾದ, ಪಕ್ಷದ ಮುಖಂಡರೊಂದಿಗೆ ಸಭೆಗಳನ್ನು ಮಾಡಲಿದ್ದಾರೆ. ಫೆ.26ರಂದು ಹುಬ್ಬಳ್ಳಿ ನೆಹರೂ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದೆ.
ಈ ಬಾರಿಯ ಪ್ರವಾಸದಲ್ಲಿ ಮಠ ಹಾಗೂ ದೇವಸ್ಥಾನಗಳಿಗೆ ಅಧಿಕೃತ ಭೇಟಿ ನೀಡುವ ಕಾರ್ಯಕ್ರಮ ಇಲ್ಲದಿದ್ದರೂ, ದಾರಿಯಲ್ಲಿ ಐತಿಹಾಸಿಕ ಮತ್ತು ಪಾರಂಪರಿಕ ದೇವಸ್ಥಾನ ಮಠಗಳು ಕಂಡರೆ ರಾಹುಲ್ ಗಾಂಧಿ ಭೇಟಿ ಮಾಡುವ ಸಾಧ್ಯತೆಯಿದೆ ಎಂದರು.
ಈ ಚುನಾವಣೆಯಲ್ಲಿ ಬಿಜೆಪಿ ಹಿಂದುತ್ವ ಅಜೆಂಡಾ ಮುಂದಿಟ್ಟುಕೊಂಡು ಹೋದರೂ ಕಾಂಗ್ರೆಸ್ ಅಭಿವೃದಿಟಛಿ ಬಗ್ಗೆ ಮಾತ್ರ ಚರ್ಚೆ ಮಾಡುತ್ತದೆ. ಕಾಂಗ್ರೆಸ್ನದ್ದು ಸಾಫ್ಟ್ ಹಿಂದುತ್ತ ಎನ್ನುವ ಬಿಜೆಪಿಯವರು ಹಾರ್ಡ್ ಹಿಂದುತ್ವ ಎಂದರೆ ಗಲಾಟೆ ಮಾಡುವುದು, ಸಮಾಜ ಒಡೆಯುವ ಕೆಲಸ ಮಾಡುವುದೇ ಎಂದು ಪ್ರಶ್ನಿಸಿದರು.
ಯಾರೇ ತಪ್ಪು ಮಾಡಿದರೂ ಕ್ಷಮಿಸಲ್ಲ: ಶಾಸಕ ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್ ಹಲ್ಲೆ ಪ್ರಕರಣದಲ್ಲಿ ಪಕ್ಷ ತಕ್ಷಣವೇ ಕ್ರಮ ಕೈಗೊಂಡಿದ್ದು, ಆತನನ್ನು ಆರು ವರ್ಷ ಪಕ್ಷದಿಂದ ಉಚ್ಚಾಟಿಸಲಾಗಿದೆ. ಅದೇ ರೀತಿ ಕೆ.ಆರ್.ಪುರ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ನಾರಾಯಣಸ್ವಾಮಿ ವಿರುದಟಛಿವೂ ಪಕ್ಷ ಕ್ರಮ ಕೈಗೊಂಡಿದೆ. ಸರ್ಕಾರ ಕೂಡ ನಲಪಾಡ್ ವಿರುದ್ಧ ಪ್ರಕರಣ ದಾಖಲಿಸಿದೆ. ಕೋರ್ಟ್ ಆತನನ್ನು ಜೈಲಿಗೆ ಕಳುಹಿಸಿದೆ. ಪಕ್ಷದಲ್ಲಿ ಯಾರೇ ಅಶಿಸ್ತಿನಿಂದ ವರ್ತಿಸಿದರೂ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಬಿಜೆಪಿಯವರು ಅನಗತ್ಯವಾಗಿ ವಿವಾದ ಸೃಷ್ಟಿಸುವ ಅಗತ್ಯವಿಲ್ಲ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಪಿಎಫ್ಐ ಸಂಘಟನೆ ನಿಷೇಧ ಮಾಡುವ ಕುರಿತಂತೆ ಸರ್ಕಾರ ತೀರ್ಮಾನ ತೆಗೆದುಕೊಳ್ಳಲಿದೆ. ಆ ಸಂಸ್ಥೆಯ ಬಗ್ಗೆ ಯಾವ ರೀತಿಯ ವರದಿ ಇದೆ ಎನ್ನುವುದನ್ನು ಸರ್ಕಾರ ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಿದೆ.
ಪ್ರಜಾಪ್ರಭುತ್ವದಲ್ಲಿ ಎಲ್ಲ ಸಂಘಟನೆಗಳಿಗೂ ಸ್ವಾತಂತ್ರ್ಯ ಇದೆ ಎಂದು ಪರಮೇಶ್ವರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ