ರಾಹುಲ್ ತೇಜೋವಧೆಗೆ ದೊಡ್ಡ ತಂಡವೇ ಇದೆ’
Team Udayavani, Sep 14, 2017, 6:10 AM IST
ಬೆಂಗಳೂರು: “ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಯವರ ತೇಜೋವಧೆ ಮಾಡಲು, ಅಸಮರ್ಥರೆಂದು ಬಿಂಬಿಸಲು ಬಿಜೆಪಿಯಲ್ಲಿ ದೊಡ್ಡ ತಂಡವೇ ಕಾರ್ಯ ನಿರ್ವಹಿಸುತ್ತಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ದೂರಿದರು.
ಮುಖ್ಯಮಂತ್ರಿಗಳ ಗೃಹ ಕಚೇರಿ “ಕೃಷ್ಣಾ’ದಲ್ಲಿ ಬುಧವಾರ ಪ್ರತಿಕ್ರಿಯಿಸಿದ ಅವರು, “ಕ್ಯಾಲಿಫೋರ್ನಿಯಾದಲ್ಲಿ ನಡೆದ
ಸಂವಾದದಲ್ಲಿ ರಾಹುಲ್ ಗಾಂಧಿ ಅವರು ಮುಕ್ತವಾಗಿ ಮಾತನಾಡಿದ್ದಾರೆ. ಪಕ್ಷದವರು ತಾವೇ ಪ್ರಧಾನಿಯಾಗಬೇಕು ಎಂದು ತೀರ್ಮಾನಿಸಿದರೆ ತಾವು ಸಿದಟಛಿರಿರುವುದಾಗಿ ಹೇಳಿದ್ದಾರೆ. ಅವರು ಬಿಚ್ಚು ಮನಸ್ಸಿನಿಂದ ಮಾತನಾಡಿದ್ದು, ಅದರಲ್ಲಿ ತಪ್ಪೇನು?
ಮುಕ್ತವಾಗಿ ಮಾತನಾಡಿರುವುದನ್ನು ಸ್ವಾಗತಿಸುವ ಬದಲಿಗೆ ಟೀಕಿಸುವುದು ಸರಿಯಲ್ಲ. ಪ್ರಧಾನಿ ಮೋದಿ ಅವರ ಬಗ್ಗೆ ಟೀಕೆ ಮಾತ್ರವಲ್ಲದೆ, ಉತ್ತಮ ಸಂವಹನಕಾರರು ಎಂದೆಲ್ಲಾ ರಾಹುಲ್ ಗಾಂಧಿ ಮುಕ್ತವಾಗಿ ಉಲ್ಲೇಖೀಸಿರುವುದನ್ನು ಗಮನಿಸಬೇಕು ಎಂದು ಹೇಳಿದರು. ರಾಹುಲ್ ಗಾಂಧಿ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, “ಅದು ಯಡಿಯೂರಪ್ಪ ಅವರ ಅಭಿಪ್ರಾಯ. ಯಡಿಯೂರಪ್ಪ ಅವರಿಗೂ ಮುಖ್ಯಮಂತ್ರಿಯಾಗಬೇಕು ಎಂಬ ಕನಸು ಇದೆ.ಅವರು
ಕನಸು ಕಾಣಲಿ. ಎಲ್ಲ ರಾಜಕಾರಣಿಗಳಿಗೂ ಉನ್ನತ ಹುದ್ದೆಗೇರಬೇಕೆಂಬ ಕನಸಿರುವುದು ಸಹಜ. ಹಾಗೆಂದು ಇನ್ನೊಬ್ಬರ ಬಗ್ಗೆ ತಿರುಕನ ಕನಸು ಎಂದು ಹೇಳುವ ಅಗತ್ಯವಿಲ್ಲ ಎಂದು ತಿರುಗೇಟು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…