ಮಲೆನಾಡಲ್ಲಿ ಮತ್ತೆ ಮಳೆ
Team Udayavani, Aug 30, 2018, 6:40 AM IST
ಬೆಂಗಳೂರು: ಮಲೆನಾಡು, ಕರಾವಳಿ, ಕೊಡಗಿನಲ್ಲಿ ಮಳೆ ಮುಂದುವರಿದಿದೆ. ಬುಧವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ಸುಬ್ರಹ್ಮಣ್ಯದಲ್ಲಿ ರಾಜ್ಯದಲ್ಲಿಯೇ ಅಧಿಕ, 9 ಸೆಂ.ಮೀ. ಮಳೆ ಸುರಿಯಿತು.
ಕಳೆದ ಒಂದು ವಾರದಿಂದ ಬಿಡುವು ನೀಡಿದ್ದ ಮಳೆ ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ಮಲೆನಾಡು ಭಾಗದಲ್ಲಿ ಪುನ: ಆರಂಭಗೊಂಡಿದ್ದು, ಮಂಗಳವಾರ ರಾತ್ರಿಯಿಂದ ಸಾಧಾರಣ ಮಳೆಯಾಗುತ್ತಿದೆ. ಇದರಿಂದಾಗಿ ತುಂಗಾ, ಶರಾವತಿ,ನೇತ್ರಾವತಿ, ಅಘನಾಶಿನಿ ಸೇರಿದಂತೆ ಪ್ರಮುಖ ನದಿಗಳ ನೀರಿನ ಮಟ್ಟದಲ್ಲಿ ಏರಿಕೆಯಾಗುತ್ತಿದೆ. ತರೀಕೆರೆ ತಾಲೂಕು ಸೀತಾಪುರ ಕಾವಲ್ನಲ್ಲಿ ಮಳೆಯಿಂದಾಗಿ 5 ಮನೆಗಳಿಗೆ ಹಾನಿಯಾಗಿದೆ. ನಾರಾಯಣಪುರ
ಜಲಾಶಯದಿಂದ ಏಕಾಏಕಿ ಕೃಷ್ಣಾ ನದಿಗೆ ನೀರು ಬಿಟ್ಟ ಪರಿಣಾಮ ರಾಯಚೂರು ಜಿಲ್ಲೆ ಚಿಂಚೋಡಿ ಬಳಿ ನದಿಯ ನಡುಗಡ್ಡೆಯಲ್ಲಿ ಸುಮಾರು 15 ಜನ ಸಿಲುಕಿಕೊಂಡರು. ಈ ಪೈಕಿ 12 ಜನರನ್ನು ರಕ್ಷಿಸಲಾಗಿದ್ದು, ಇನ್ನೂ ಮೂವರು ನಡುಗಡ್ಡೆಯಲ್ಲಿ ಸಿಲುಕಿದ್ದಾರೆ. ಈ ಮಧ್ಯೆ, ಜಲಾನಯನ ಪ್ರದೇಶವ್ಯಾಪ್ತಿಯಲ್ಲಿ ಮಳೆಯಾದ ಕಾರಣ ಸೂಫಾ ಅಣೆಕಟ್ಟಿನಿಂದ 3 ಕ್ರಸ್ಟ್ಗೇಟ್ಗಳ ಮೂಲಕ ನೀರು ಬಿಡುಗಡೆ ಮಾಡಲಾಗಿದೆ.
ಈ ಮಧ್ಯೆ, ಶುಕ್ರವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ರಾಜ್ಯದ ಕರಾವಳಿಯ ಬಹುತೇಕ ಎಲ್ಲೆಡೆ ಮತ್ತು ಒಳನಾಡಿನ ಹಲವೆಡೆ ಉತ್ತಮ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಭಾರೀ ಮಳೆ
ಸುರಿಯುವ ಸಂಭವವಿದೆ ಎಂದು ಹವಾಮಾನ ಕಚೇರಿಯ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Bangaluru cafe ಸ್ಫೋಟದ ಸಂಚುಕೋರ ಎನ್ಐಎ ಬಲೆಗೆ: ಯಾರಿದು ಷರೀಫ್?
Lok Sabha Election: ಬಿಜೆಪಿ-ಜೆಡಿಎಸ್ “ಜಂಟಿ ಸಮರಾಭ್ಯಾಸ’
Congress; ಕೋಲಾರಕ್ಕೆ ಗೌತಮ್ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!
Politics: ಟಿಕೆಟ್ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು