ನಗರದಲ್ಲಿ ಅವಾಂತರ ಸೃಷ್ಟಿಸಿದ ವರ್ಷಧಾರೆ
Team Udayavani, Apr 4, 2018, 12:31 PM IST
ಬೆಂಗಳೂರು: ನಗರದಲ್ಲಿ ಸತತ ನಾಲ್ಕೈದು ದಿನಗಳಿಂದ ಸುರಿಯುತ್ತಿದ್ದ ಮಳೆ, ಮಂಗಳವಾರ ವಿರಾಮ ನೀಡಿತು. ಆದರೆ, ಹಿಂದಿನ ದಿನದ ಮಳೆ ಅವಾಂತರದ ಬಿಸಿ ಜನರಿಗೆ ಬೆಳಗ್ಗೆ ಕೂಡ ತಟ್ಟಿತು. ಮಳೆ ರಭಸಕ್ಕೆ ಆರ್.ಟಿ.ನಗರ, ಸಹಕಾರನಗರ, ರಾಜಾಜಿನಗರ 5ನೇ ಬ್ಲಾಕ್, ಸುಲ್ತಾನ್ಪಾಳ್ಯದಲ್ಲಿ ಮರ ನೆಲಕಚ್ಚಿದವು. ಒಂದೆರಡು ಕಡೆ ಮರಗಳ ತೆರವುಗೊಳಿ ಸುವಲ್ಲಿ ತಡವಾಗಿದ್ದರಿಂದ ಸಂಚಾರ ದಟ್ಟಣೆ ಜತೆಗೆ ವಿದ್ಯುತ್ ವ್ಯತ್ಯಯ ಉಂಟಾಗಿ ಜನ ಪರದಾಡಿದರು.
ಆರ್.ಟಿ.ನಗರದ 5ನೇ ಮುಖ್ಯರಸ್ತೆಯಲ್ಲಿ ಧರೆಗುರುಳಿದ ಬೃಹದಾಕಾರದ ಮರವನ್ನು ಮಂಗಳವಾರ ಬೆಳಿಗ್ಗೆವರೆಗೂ
ತೆರವುಗೊಳಿಸಿರಲಿಲ್ಲ. ಈ ಮರವು ವಿದ್ಯುತ್ ಲೈನ್ ಮೇಲೆ ಬಿದ್ದಿದ್ದರಿಂದ ಬಡಾವಣೆಯಲ್ಲಿ ಗಂಟೆಗಟ್ಟಲೆ ವಿದ್ಯುತ್ ಸಂಪರ್ಕ ಇರಲಿಲ್ಲ. ಸ್ಥಳೀಯರು ದೂರು ನೀಡಿದ ತುಸು ಹೊತ್ತಿನ ನಂತರ ಬೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ
ದುರಸ್ತಿಗೊಳಿಸಿದರು. ಈ ಮಧ್ಯೆ ನಗರದಲ್ಲಿ ಇನ್ನೂ ನಾಲ್ಕು ದಿನ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಏಪ್ರಿಲ್ 4 ಮತ್ತು 5ರಂದು ಗುಡುಗುಸಹಿತ ಹಾಗೂ 6ರಿಂದ 8ರವರೆಗೆ ಹಗುರವಾದ ಮಳೆ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಪ್ರಕಟಣೆ ತಿಳಿಸಿದೆ.
ಆಲಿಕಲ್ಲು ಮಳೆಗೆ 77ಹೆಕ್ಟೇರ್ ಬೆಳೆ ನಾಶ
ಕೋಲಾರ: ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ 77 ಹೆಕ್ಟೇರ್ ತೋಟಗಾರಿಕೆ ಹಾಗೂ ತರಕಾರಿ ಬೆಳೆಗಳು ನಾಶವಾಗಿದ್ದು, ಸುಮಾರು 40 ಲಕ್ಷ ರೂ. ನಷ್ಟ ಸಂಭವಿಸಿದೆ. ಮಾ. 30 ರಂದು ಕೋಲಾರ ಜಿಲ್ಲೆಯಲ್ಲಿ ಅಕಾಲಿಕವಾಗಿ ಸುರಿದ ಆಲಿಕಲ್ಲು ಸಹಿತ ಬಿರುಗಾಳಿ ಮಳೆಯಿಂದಾಗಿ ಕೋಲಾರ, ಮಾಲೂರು ಹಾಗೂ ಶ್ರೀನಿವಾಸಪುರ ತಾಲೂಕು ಗಳಲ್ಲಿ ಬೆಳೆಗಳಿಗೆ ಹಾನಿ ಸಂಭವಿಸಿದ್ದು, ಬೆಳೆ ಹಾನಿಯಿಂದ 94 ರೈತರು ನಷ್ಟ ಅನುಭವಿಸಿದ್ದಾರೆ. ಮಾಲೂರು ತಾಲೂಕಿನ ಕಸಬಾ ಹೋಬಳಿ ಸೊಣ್ಣಹಳ್ಳಿ, ಪಿಚ್ಚಗುಂಟ್ರಹಳ್ಳಿ, ಗುಂಡನಹಳ್ಳಿ, ಮಾದನಹಳ್ಳಿ ಸುತ್ತಮುತ್ತಲ ಪ್ರದೇಶಗಳಲ್ಲಿ ಆಲಿಕಲ್ಲು ಮಳೆಗೆ ಭಾರಿ ಹಾನಿಯಾಗಿದೆ.
ತಾಲೂಕಿನ 10 ಮಂದಿ ರೈತರು, ಮಾಲೂರು ತಾಲೂಕಿನ 46 ಮಂದಿ ರೈತರು ಹಾಗೂ ಶ್ರೀನಿವಾಸಪುರ ತಾಲೂಕಿನ 38 ರೈತರು ಸೇರಿದಂತೆ ಒಟ್ಟು 94 ಮಂದಿ ರೈತರ ಬೆಳೆ ಹಾನಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?