ಅಂಡರ್ಪಾಸ್ಗಳಲ್ಲಿ ಅಡಿಗಟ್ಟಲೇ ಮಳೆನೀರು
ಅಹಿತಕರ ಘಟನೆಗಳ ಬಳಿಕವೂ ಎಚ್ಚರವಾಗದ ಬಿಬಿಎಂಪಿ | ನೀರು ಹರಿವಿಗೆ ಸೂಕ್ತ ವ್ಯವಸ್ಥೆ ಇಲ್ಲ
Team Udayavani, May 31, 2019, 9:44 AM IST
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಅಂಡರ್ಪಾಸ್ಗಳಲ್ಲಿ ಮಳೆನೀರು ನಿಂತು ಬಸ್ಗಳು ಮುಳುಗಿದಂತಹ ಘಟನೆಗಳು ಸಂಭವಿಸಿದ ಬಳಿಕವೂ, ಪಾಲಿಕೆಯಿಂದ ನಿರ್ಮಿಸಿದ ಕೆಳಸೇತುವೆಗಳಲ್ಲಿ ಮಳೆನೀರು ಹರಿಯಲು ಸೂಕ್ತ ವ್ಯವಸ್ಥೆ ಮಾಡದ ಹಿನ್ನೆಲೆಯಲ್ಲಿ ಸವಾರರು ತೊಂದರೆ ಅನುಭವಿಸುವಂತಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಮಳೆಯಾದರೆ ಅಂಡರ್ಪಾಸ್ಗಳಲ್ಲಿ ಸಂಚರಿಸಲು ಸವಾರರು ಭಯಪಡುವಂತಹ ಪರಿಸ್ಥಿತಿಯಿತ್ತು. ನಗರದ ಕೀನೋ ಚಿತ್ರಮಂದಿರದ ಬಳಿಯ ಅಂಡರ್ಪಾಸ್ನಲ್ಲಿ ಮಳೆನೀರಿನಲ್ಲಿ ಬಸ್, ಕಾರುಗಳು ಮುಳುಗಿದಂತಹ ಘಟನೆಗಳು ಅದಕ್ಕೆ ಸಾಕ್ಷಿಯಾಗಿತ್ತು. ಕಳೆದ ಎರಡು ಮೂರು ವರ್ಷಗಳಲ್ಲಿ ಪಾಲಿಕೆಯಿಂದ ನಿರ್ಮಿಸಿರುವ ಅಂಡರ್ಪಾಸ್ಗಳಲ್ಲಿಯೂ ಅದೇ ಸಮಸ್ಯೆ ಮರುಕಳಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಗ್ರೇಡ್ ಸಪರೇಟರ್ ಹಾಗೂ ಕೆಳಸೇತುವೆಗಳ ನಿರ್ಮಾಣಕ್ಕಾಗಿ ಕೋಟ್ಯಂತರ ರೂ. ವೆಚ್ಚ ಮಾಡುವ ಬಿಬಿಎಂಪಿ, ಮಳೆನೀರು ಸರಾಗವಾಗಿ ಹರಿದು ಹೋಗಲು ಸೂಕ್ತ ಕಾಲುವೆ ವ್ಯವಸ್ಥೆ ಮಾಡುವಲ್ಲಿ ವಿಫಲವಾಗಿವೆ. ಪರಿಣಾಮ ನಗರದಲ್ಲಿರುವ ಬಹುತೇಕ ಅಂಡರ್ಪಾಸ್ಗಳಲ್ಲಿ ಮಳೆ ಬಂದಾಗ ಅಡಿಗಟ್ಟಲೇ ನೀರು ನಿಂತು ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದಾರೆ.
ಮೆಜೆಸ್ಟಿಕ್ ಸುತ್ತಮುತ್ತಲಿನ ಭಾಗಗಳಲ್ಲಿ ಉಂಟಾಗುತ್ತಿರುವ ಸಂಚಾರ ದಟ್ಟಣೆ ನಿವಾರಣೆಗಾಗಿ ಪಾಲಿಕೆಯಿಂದ ಓಕಳಿಪುರದ ಬಳಿ ಅಷ್ಟಪಥ ಕಾರಿಡಾರ್ನ ಅಂಡರ್ಪಾಸ್ನಲ್ಲಿ ನೀರು ನಿಂತು ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಪ್ರತಿಬಾರಿ ಮಳೆಯಾದಾಗಲೂ ಮೊಣಕಾಲಿನವರೆಗೆ ಮಳೆನೀರು ನಿಲ್ಲುತ್ತಿದ್ದು, ಸಾರ್ವಜನಿಕರು ಸಮಸ್ಯೆ ಎದುರಿಸುತ್ತಿದ್ದಾರೆ.
ಓಕಳಿಪುರ ಜಂಕ್ಷನ್ನಲ್ಲಿ ದಟ್ಟಣೆ ತಪ್ಪಿಸುವ ಉದ್ದೇಶದಿಂದ ನಿರ್ಮಿಸುತ್ತಿರು ಅಷ್ಟಪಥ ಕಾರಿಡಾರ್ಗಳ ಪೈಕಿ ಈಗಾಗಲೇ ಮಲ್ಲೇಶ್ವರದಿಂದ ರಾಜಾಜಿನಗರ ಸಂಪರ್ಕಿಸುವ ಅಂಡರ್ಪಾಸ್ ಸೇರಿ ನಾಲ್ಕು ಪಥಗಳನ್ನು ಸಾರ್ವಜನಿಕರ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಆದರೆ, ಅಂಡರ್ಪಾಸ್ನಲ್ಲಿ ಮಳೆನೀರು ಹರಿಯಲು ಸಮರ್ಪಕ ವ್ಯವಸ್ಥೆ ಮಾಡದಿರುವುದು ವಾಹನ ಸವಾರರು ಆಕ್ರೋಶಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ