ಇನ್ನೂ ಎರಡು ದಿನ ರಾಜ್ಯದಲ್ಲಿ ಮಳೆ ಸಾಧ್ಯತೆ
Team Udayavani, May 19, 2018, 6:05 AM IST
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಶುಕ್ರವಾರ ಮತ್ತೆ ಗುಡುಗು ಸಹಿತ ಮಳೆಯಾಗಿದ್ದು, ಇನ್ನೂ ಎರಡು-ಮೂರು ದಿನಗಳು ಇದೇ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.
ಉತ್ತರ ಭಾರತದಿಂದ ರಾಜ್ಯದ ಉತ್ತರ ಒಳನಾಡಿನವರೆಗೂ “ಕಡಿಮೆ ಒತ್ತಡದ ತಗ್ಗು'(ಟ್ರಫ್) ಕಂಡು ಬಂದ ಹಿನ್ನೆಲೆಯಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ. ಪೂರ್ವಮುಂಗಾರಿನಲ್ಲಿ ಈ ಬೆಳವಣಿಗೆಗಳು ಸಾಮಾನ್ಯವಾಗಿದ್ದು, ಇನ್ನೂ ಎರಡು-ಮೂರು ದಿನ ಮಳೆಯಾಗುವ ನಿರೀಕ್ಷೆ ಇದೆ.
ಅದರಲ್ಲೂ ದಕ್ಷಿಣ ಒಳನಾಡು ಮತ್ತು ಮಲೆನಾಡಿನಲ್ಲಿ ಸಾಧಾರಣ ಹಾಗೂ ಉತ್ತರ ಒಳನಾಡಿನ ಆಯ್ದ ಭಾಗಗಳಲ್ಲಿ ತುಂತುರು ಹನಿಯಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ (ಕೆಎಸ್ಎನ್ಡಿಎಂಸಿ)
ತಜ್ಞರು ತಿಳಿಸಿದ್ದಾರೆ. ಸತತ 2-3 ದಿನಗಳು ಮಳೆ ಆಗುತ್ತಿರುವುದ ರಿಂದ ಉಷ್ಣಾಂಶ ಏಕಾಏಕಿ ಇಳಿಕೆಯಾಗಿದೆ. ವಿಶೇಷವಾಗಿ ಉತ್ತರ ಒಳನಾಡಿನ ಬಹುಭಾಗಗಳಲ್ಲಿ ಕನಿಷ್ಠ 1ರಿಂದ ಗರಿಷ್ಠ 5 ಡಿಗ್ರಿ ಸೆಲ್ಸಿಯಸ್ನಷ್ಟು ತಾಪಮಾನ ಕುಸಿದಿದೆ. ಬಿಸಿಲಿನ ಧಗೆಗೆ ಕಂಗೆಟ್ಟಿದ್ದ ಜನ ಮಳೆಯಿಂದ ತುಸು ನಿಟ್ಟುಸಿರು ಬಿಡುವಂತಾಗಿದೆ.
ಬೆಂಗಳೂರು ನಗರದಲ್ಲಿ ಗರಿಷ್ಠ ಮಳೆ: ಈ ಮಧ್ಯೆ, ಶುಕ್ರವಾರ ಬೆಂಗಳೂರು ನಗರ ಮತ್ತು ಹಾಸನದಲ್ಲಿ ಗರಿಷ್ಠ 32 ಮಿ.ಮೀ.ಮಳೆಯಾಗಿದೆ.
ಚಿಕ್ಕಬಳ್ಳಾಪುರದಲ್ಲಿ 20.5 ಮಿ.ಮೀ., ಮೈಸೂರು 26.5, ಮಂಡ್ಯ 18.5, ಕೋಲಾರ 25.5, ತುಮಕೂರು 15.5, ಉಡುಪಿ 8.6, ಬೀದರ್ 10.5, ಬೆಂಗಳೂರು ಗ್ರಾಮಾಂತರದಲ್ಲಿ 17 ಮಿ.ಮೀ. ಮಳೆ ದಾಖಲಾಗಿದೆ. ಚಿತ್ರದುರ್ಗದಲ್ಲಿ
ಸಾಮಾನ್ಯಕ್ಕಿಂತ 5 ಡಿಗ್ರಿ ಮತ್ತು ಬೆಳಗಾವಿ ವಿಮಾನ ನಿಲ್ದಾಣದಲ್ಲಿ 4 ಡಿಗ್ರಿ ಕಡಿಮೆ ತಾಪಮಾನ ದಾಖಲಾಗಿದೆ. ಉಳಿದಂತೆ ಗದಗ ಮತ್ತು ರಾಯಚೂರಿನಲ್ಲಿ 3, ಬೆಂಗಳೂರು 2,ಮೈಸೂರು, ಕಲಬುರಗಿ, ವಿಜಯಪುರ, ಬಳ್ಳಾರಿ,
ಮಂಡ್ಯದಲ್ಲಿ ಉಷ್ಣಾಂಶ ತಲಾ 1 ಡಿಗ್ರಿ ಸೆಲ್ಸಿಯಸ್ ಕಡಿಮೆ ಇತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ
Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ
Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ
PM Modi: ಕಲಬುರಗಿಗೆ ಇಂದು ಪ್ರಧಾನಿ ನರೇಂದ್ರ ಮೋದಿ
Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ
MUST WATCH
ಹೊಸ ಸೇರ್ಪಡೆ
Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ
Dhruva Sarja ಮಾರ್ಟಿನ್ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್ ಮೆಹ್ತಾ
Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…
Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು
Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ