ಎಇಇಗಳ ಹೆಗಲಿಗೆ ಮಳೆ ಅನಾಹುತ ನಿರ್ವಹಣೆ ಹೊಣೆ


Team Udayavani, May 10, 2019, 10:55 AM IST

blore-3

ಬೆಂಗಳೂರು: ನಗರದಲ್ಲಿ ಮಳೆಯಿಂದ ಉಂಟಾಗುವ ಅನಾಹುತಗಳನ್ನು ತಪ್ಪಿಸುವ ಹೊಣೆ ಸಹಾಯಕ ಕಾರ್ಯನಿರ್ವಾಹಕ ಎಂಜನಿಯರುಗಳದ್ದಾಗಿದೆ. ಈ ಸಂಬಂಧ 24 ತಂಡಗಳನ್ನು ರಚಿಸಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್‌ ತಿಳಿಸಿದರು.

ಮಳೆಗಾಲ ಎದುರಿಸುವುದಕ್ಕೆ ಈ ವರ್ಷ ಹಲವಾರು ನೂತನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮುಖ್ಯವಾಗಿ ರಾಜಕಾಲುವೆ ಹೂಳು ತೆಗೆಯುವುದಕ್ಕೆ ವಾರ್ಷಿಕ ಗುತ್ತಿಗೆ ನೀಡಲಾಗಿದೆ. ನಗರದಲ್ಲಿ 1,900 ಕಿ.ಮೀ ಮುಖ್ಯರಸ್ತೆ ಇದ್ದು, 24 ಸಹಾಯಕ ಎಂಜಿನಿಯರ್‌ಗಳಿಗೆ ಪ್ರತ್ಯೇಕವಾಗಿ ಒಂದು ತಂಡ ರಚನೆ ಮಾಡಿಕೊಂಡು ರಸ್ತೆ ನಿರ್ವಹಣೆಗೆ ಸೂಚನೆ ನೀಡಲಾಗಿದೆ. ಪ್ರತಿ ಎಂಜಿನಿಯರ್‌ಗೆ ಸುಮಾರು 50 ಕಿ.ಮೀ. ನಂತೆ ಹಂಚಿಕೆ ಮಾಡಲಾಗುವುದು. ಆಯಾ ವ್ಯಾಪ್ತಿಯ ರಸ್ತೆಯಲ್ಲಿನ ಹೂಳು ಮತ್ತು ಕಸ ತೆಗೆಯುವುದು, ಗುಂಡಿ ಮುಚ್ಚುವ ಜವಾಬ್ದಾರಿಯನ್ನು ಈ ತಂಡಗಳು ನಿರ್ವಹಿಸಲಿವೆ. ಯಾವುದೇ ಸಮಸ್ಯೆ ಉಂಟಾದರೂ ಸಂಬಂದಪಟ್ಟ ಎಂಜಿನಿಯರ್‌ ಅನ್ನು ಹೊಣೆ ಮಾಡಲಾಗುವುದು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದರು.

ಈ ಮೊದಲು ಮಳೆ ಅನಾಹುತಗಳನ್ನು ವಾರ್ಡ್‌ ಎಂಜಿನಿಯರ್‌ಗಳು ನೋಡುತ್ತಿದ್ದರು. ಆದರೆ, ಆ ಎಂಜಿನಿಯರ್‌ಗಳ ವ್ಯಾಪ್ತಿ ಚಿಕ್ಕದಾಗಿದ್ದರಿಂದ ಅವರೆಲ್ಲಾ ಇತರೆ ವಾರ್ಡ್‌ಗಳತ್ತ ನೋಡುತ್ತಿರಲಿಲ್ಲ. ಹಾಗಾಗಿ, ಬೃಹತ್‌ ಕಾಮಗಾರಿ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ಗಳಿಗೆ ಈ ಜವಾಬ್ದಾರಿ ವಹಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಶೀಘ್ರ ಮತ್ತಷ್ಟು ಕಸ ಗುಡಿಸುವ ಯಂತ್ರ: ಪ್ರತಿ ಎಂಜಿನಿಯರ್‌ಗೆ ಶೀಘ್ರದಲ್ಲೇ ಒಂದೊಂದು ಕಸ ಗುಡಿಸುವ ಯಂತ್ರ ನೀಡಲಾಗುವುದು. ಸದ್ಯ ಪಾಲಿಕೆಯಲ್ಲಿ 9 ಕಸ ಗುಡಿಸುವ ಯಂತ್ರಗಳಿದ್ದು, 17 ಯಂತ್ರಗಳ ಖರೀದಿಗೆ ಕ್ರಮ ಕೈಗೊಳ್ಳಲಾಗಿದ್ದು, ತಂಡದಲ್ಲಿರುವ ತಲಾ ಹತ್ತು ಮಂದಿ ಸಿಬ್ಬಂದಿ ರಸ್ತೆ ನಿರ್ವಹಣೆ ಮಾಡಲಿದ್ದಾರೆ ಎಂದ ಅವರು, ಈಗಾಗಲೇ ಧರೆಗುರುಳಿದ ಮರಗಳ ತೆರವು ಕಾರ್ಯ ಪೂರ್ಣಗೊಂಡಿದೆ. ಬೇರು ಸಡಿಲಗೊಂಡ ಮರಗಳ ಪರೀಕ್ಷೆ ಕಾರ್ಯ ಕೂಡ ನಡೆದಿದೆ ಎಂದು ಹೇಳಿದರು.

ಬಿದ್ದ ಮಗರಗಳ ತೆರವು ಮಾಡುವುದಕ್ಕೆ ಒಟ್ಟು 21 ತಂಡಗಳಿದ್ದು, ಇನ್ನು 7 ತಂಡಗಳ ಅವಶ್ಯಕವಿದೆ ಎಂದು ಬಿಬಿಎಂಪಿ ಅರಣ್ಯ ವಿಭಾಗದಿಂದ ಮನವಿ ಬಂದಿದೆ. ಹೆಚ್ಚುವರಿ ತಂಡ ನೇಮಕಕ್ಕೆ ಅನುಮತಿ ನೀಡಲಾಗಿದೆ. ಇದರಿಂದ 28 ವಿಧಾನಸಭಾ ಕ್ಷೇತ್ರಕ್ಕೆ ತಲಾ ಒಂದರಂತೆ ತಂಡ ಕಾರ್ಯನಿರ್ವಹಿಸಲಿವೆ. ಅಗತ್ಯಬಿದ್ದರೆ ಒಂದು ವಿಧಾನ‌ಸಭಾ ಕ್ಷೇತ್ರದ ತಂಡವನ್ನು ಮತ್ತೂಂದು ಕ್ಷೇತ್ರಕ್ಕೆ ಬಳಸಿಕೊಳ್ಳಲು ಅಧಿಕಾರಿಗಳಿಗೆ ಅವಕಾಶ ಇರುತ್ತದೆ ಎಂದರು.

ನಗರದಲ್ಲಿ ಮೇ 7ರಂದು ಸುರಿದ ಮಳೆಯಿಂದಾಗಿ ಸುಮಾರು 70 ಮರಳಗಳು ಧರೆಗುರುಳಿದ್ದು, 160 ಕೊಂಬೆಗಳು ನೆಲಕಚ್ಚಿವೆ. ಅಲ್ಲಲ್ಲಿ ತಗ್ಗುಪ್ರದೇಶಗಳ ಮನೆಗಳಿಗೆ ನೀರು ನುಗ್ಗಿದ್ದು, ಬಿಟಿಎಂ ಮತ್ತು ಎಚ್ಎಸ್‌ಆರ್‌ ಬಡಾವOೆಗ‌ಳಲ್ಲಿ ಅತಿ ಹೆಚ್ಚು ಮರಗಳು ಉರುಳಿವೆ. ಈ ಹಿನ್ನೆಲೆಯಲ್ಲಿ ಮಳೆಯಿಂದಾಗುವ ಅವಘಡಗಳನ್ನು ನಿಯಂತ್ರಿಸಲು 24 ತಂಡಗಳನ್ನು ರಚಿಸಲಾಗಿದ್ದು, ಪ್ರತಿ ತಂಡದಲ್ಲಿ ತಲಾ ಹತ್ತು ಜನ ಕಾರ್ಮಿಕರಿದ್ದು, ಮಳೆ ಅನಾಹುತಗಳು ಸಂಭವಿಸಿದ ತಕ್ಷಣ ಕಾರ್ಯಪ್ರವೃತ್ತರಾಗಲಿದ್ದಾರೆ ಎಂದು ವಿವರಿಸಿದರು.

ಟಾಪ್ ನ್ಯೂಸ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.