ಪ್ರಜೆಗಳಿಗೆ ರಾಜಭವನ ಮುಕ್ತ


Team Udayavani, Aug 17, 2018, 6:15 AM IST

16bnp-24.jpg

ಬೆಂಗಳೂರು: ಹದಿನೈದು ದಿನಗಳ ಮಟ್ಟಿಗೆ “ಪ್ರಜೆ’ಗಳಿಗೆ “ರಾಜ’ಭವನ ಮುಕ್ತವಾಗಲಿದೆ. ಹೌದು! ಆ.16ರಿಂದ 31ರವರೆಗೆ ರಾಜಭವನಕ್ಕೆ ಭೇಟಿ ನೀಡಲು ಸಾರ್ವಜನಿಕರಿಗೆ ಮುಕ್ತ ಅವಕಾಶ ಮಾಡಿಕೊಡಲಾಗಿದೆ.

ರಾಜ್ಯ ಸರ್ಕಾರದ ಸಂವಿಧಾನ ಮುಖ್ಯಸ್ಥರಾದ ರಾಜ್ಯಪಾಲರ ಕಾರ್ಯ ಮತ್ತು ಆವಾಸ ಸ್ಥಾನ ಆಗಿರುವ ರಾಜಭವನ “ಹೈ ಸೆಕ್ಯೂರಿಟಿ’ ಪ್ರದೇಶಗಳಲ್ಲೊಂದು. ಸಾರ್ವಜನಿಕರ ಪ್ರವೇಶ, ಭೇಟಿ ಮತ್ತು ಸಂದರ್ಶನಕ್ಕೆ ಇಲ್ಲಿ ಮುಕ್ತ ಅವಕಾಶ ಇರುವುದಿಲ್ಲ.
ಆದರೆ, ಸಾಮಾನ್ಯ ಜನರಲ್ಲಿ ರಾಜಭವನದ ಕುರಿತು ಇರುವ ಕುತೂಹಲ ತಣಿಸಲು, ಶತಮಾನಕ್ಕೂ ಹೆಚ್ಚು ಇತಿಹಾಸವಿರುವ ಈ ರಾಜಭವನ ಎಂಬ ಪಾರಂಪರಿಕ ಕಟ್ಟಡ ವೈಭವ ಕಣ್ಣಾರೆ ಕಂಡು ಸಂಭ್ರಮಪಟ್ಟುಕೊಳ್ಳಲು ಅವಕಾಶ ಮಾಡಿಕೊಡಲು ಈಗಿನ ರಾಜ್ಯಪಾಲ ವಜುಭಾಯಿ ವಾಲಾ ಮುಂದಾಗಿದ್ದಾರೆ. ಕೆಲವು ವಿಶೇಷ ಸಂದರ್ಭಗಳನ್ನು ಹೊರತುಪಡಿಸಿ, ಸಾರ್ವಜನಿಕ ಪ್ರವೇಶಕ್ಕೆ ಮುಕ್ತ ಅವಕಾಶ ಮಾಡಿಕೊಡುತ್ತಿರುವುದು ರಾಜಭವನದ ಇತಿಹಾಸದಲ್ಲಿ ಇದೇ ಮೊದಲು ಎನ್ನಲಾಗಿದೆ.

ಗುರುವಾರ ರಾಜಭವನದ ಗಾಜಿನಮನೆಯಲ್ಲಿ ವಿಶೇಷ ಪತ್ರಿಕಾಗೋಷ್ಠಿ ನಡೆಸಿದ ರಾಜ್ಯಪಾಲ ವಜುಭಾಯಿ ವಾಲಾ, ರಾಜಭವನ ದರ್ಶನಕ್ಕೆ ಹದಿನೈದು ದಿನಗಳ ಸಾರ್ವಜನಿಕರಿಗೆ ಮುಕ್ತ ಅವಕಾಶ ಮಾಡಿಕೊಡಲಾಗುತ್ತಿದೆ. ಇದೊಂದು ವಿನೂತನ ಪ್ರಯತ್ನವಾಗಿದ್ದು, ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಬೆಂಗಳೂರಿನಗ ನಾಗರಿಕರಲ್ಲಿ ಮನವಿ ಮಾಡಿದರು.

ಆ.16ರಿಂದ 31ರವರೆಗೆ ಒಟ್ಟು 15 ದಿನಗಳ ಕಾಲ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಇರಲಿದೆ. ಈ ಅವಧಿಯಲ್ಲಿ ಸಂಜೆ 4ರಿಂದ 7.30ರ ತನಕ ರಾಜಭವನಕ್ಕೆ ಭೇಟಿ ಕೊಡಬಹುದು. ಆನ್‌ಲೈನ್‌ನಲ್ಲಿ ನೊಂದಾಯಿಸಿಕೊಂಡವರ ಪೈಕಿ ಪ್ರತಿ ದಿನ 350ರಿಂದ 400 ಮಂದಿಗೆ ಮಾತ್ರ ಅವಕಾಶ ಮಾಡಿಕೊಡಲಾಗುವುದು. 20 ಮಂದಿಯ ಒಂದು ಗುಂಪು ಮಾಡಿ ಇಡೀ ರಾಜಭವನ ಸುತ್ತಾಡಿಸಲಾಗುವುದು. ಇದಕ್ಕಾಗಿ ಮಾಗದರ್ಶಕರನ್ನು (ಗೈಡ್‌) ನೇಮಕ ಮಾಡಲಾಗಿದೆ. ಜನರಿಂದ ಬೇಡಿಕೆ ವ್ಯಕ್ತವಾದರೆ ಭೇಟಿಯ ದಿನಗಳನ್ನು ವಿಸ್ತರಿಸುವ ಬಗ್ಗೆ ಚಿಂತಿಸಲಾಗುವುದು. ಜತೆಗೆ ಸದ್ಯ ವರ್ಷದಲ್ಲಿ ಒಂದು ಬಾರಿ ಈ ಅವಕಾಶ ಮಾಡಿಕೊಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಅವಶ್ಯಕತೆ ಕಂಡು ಬಂದಲ್ಲಿ ವರ್ಷದಲ್ಲಿ 2 ಬಾರಿ ಈ ರೀತಿಯ ವ್ಯವಸ್ಥೆ ಮಾಡಲು ರಾಜಭವನ ಸಿದ್ಧವಿದೆ ಎಂದು ವಾಲಾ ತಿಳಿಸಿದರು.

ಟಾಪ್ ನ್ಯೂಸ್

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Shalini Rajneesh ನೂತನ ಸಿಎಸ್‌; ಪತಿ ರಜನೀಶ್‌ ಗೋಯಲ್‌ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ

Shalini Rajneesh ನೂತನ ಸಿಎಸ್‌; ಪತಿ ರಜನೀಶ್‌ ಗೋಯಲ್‌ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ

Eshwara Khandre ಏಕಬಳಕೆ ಪ್ಲಾಸ್ಟಿಕ್‌ ವಿರುದ್ಧ ಕಾರ್ಯಪಡೆ ರಚನೆ

Eshwara Khandre ಏಕಬಳಕೆ ಪ್ಲಾಸ್ಟಿಕ್‌ ವಿರುದ್ಧ ಕಾರ್ಯಪಡೆ ರಚನೆ

train-track

Landslides; ಮಂಗಳೂರು – ಬೆಂಗಳೂರು ರೈಲುಗಳ ಸಂಚಾರ ರದ್ದು

ಸದನದಲ್ಲಿ ಬಿಜೆಪಿ ನಡೆಗೆ ಲಿಂಬಾವಳಿ ಅಸಮಾಧಾನ

Karnataka ಸದನದಲ್ಲಿ ಬಿಜೆಪಿ ನಡೆಗೆ ಲಿಂಬಾವಳಿ ಅಸಮಾಧಾನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.