ಫ್ಯಾಮಿಲಿ ಮೆಡಿಸಿನ್‌ ಸ್ನಾತಕೋತ್ತರ ಕೋರ್ಸ್‌ : ಕುಟುಂಬ ವೈದ್ಯ ಪರಿಕಲ್ಪನೆಗೆ ಹೊಸ ಸ್ಪರ್ಶ

ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ ಚಿಂತನೆ

Team Udayavani, Feb 7, 2020, 8:31 PM IST

Rajiv-Gandhi-University-of-Health-Sciences-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ವೈದ್ಯಕೀಯ ವಿಜ್ಞಾನ ವಿಭಾಗದಲ್ಲಿ ಫ್ಯಾಮಿಲಿ ಮೆಡಿಸಿನ್‌ ಸ್ನಾತಕೋತ್ತರ ಕೋರ್ಸ್‌ ಆರಂಭಿಸುವ ಮೂಲಕ ಕುಟುಂಬ ವೈದ್ಯ ಪರಿಕಲ್ಪನೆಗೆ ಹೊಸ ರೂಪ ನೀಡಲು ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ ಸಜ್ಜಾಗಿ ನಿಂತಿದೆ.

ವಿದೇಶಗಳಲ್ಲಿ ಕುಟುಂಬ ವೈದ್ಯ (ಫ್ಯಾಮಿಲಿ ಡಾಕ್ಟರ್‌) ಪರಿಕಲ್ಪನೆ ಸಾಕಷ್ಟು ಪ್ರಾಮುಖ್ಯತೆ ಪಡೆದಿದೆ. ಭಾರತದ ಸಹಿತ ಬಹುತೇಕ ರಾಷ್ಟ್ರಗಳಲ್ಲಿ ಇಂದಿಗೂ ಕುಟುಂಬ ವೈದ್ಯರು ಇರುವರಾದರೂ ಅಷ್ಟೊಂದು ವ್ಯವಸ್ಥಿತವಾಗಿ ಸಾಮಾನ್ಯ ಜನರಿಗೆ ಈ ಸೇವೆ ಲಭಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ರಾಜೀವ್‌ ಗಾಂಧಿ ಅರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯವು ವೈದ್ಯಕೀಯ ವಿಜ್ಞಾನ ವಿಭಾಗದಿಂದ ಫ್ಯಾಮಿಲಿ ಮೆಡಿಸಿನ್‌ ಸ್ನಾತಕೋತ್ತರ ಕೋರ್ಸ್‌ ಆರಂಭಿಸಿ, ಕುಟುಂಬ ವೈದ್ಯರ ಸೇವೆಯನ್ನು ಅತಿ ಸುಲಭವಾಗಿ ಸಾಮಾನ್ಯ ಜನರು ಪಡೆಯುವಂತೆ ಮಾಡಲು ಯೋಜನೆ ರೂಪಿಸಿದೆ.

2020-21ನೇ ಸಾಲಿನಿಂದ ವಿವಿಯು ತನ್ನ ವ್ಯಾಪ್ತಿಯ ಎಲ್ಲ ಕಾಲೇಜುಗಳ ಸ್ನಾತಕೋತ್ತರ ವಿಭಾಗದಲ್ಲಿ ಫ್ಯಾಮಿಲಿ ಮೆಡಿಸಿನ್‌ ಕೋರ್ಸ್‌ ಆರಂಭಿಸುವುದನ್ನು ಕಡ್ಡಾಯಗೊಳಿಸುವ ಸಾಧ್ಯತೆ ಇದೆ. ಸದ್ಯ ವಿವಿಯ ಅಧೀನದಲ್ಲಿರುವ ಕಾಲೇಜುಗಳ ಪೈಕಿ ಕೆಲವೇ ಕೆಲವು ಕಾಲೇಜುಗಳಲ್ಲಿ ಫ್ಯಾಮಿಲಿ ಮೆಡಿಸಿನ್‌ ಕೋರ್ಸ್‌ ಇದೆ. ಇದನ್ನು ತಮ್ಮ ವ್ಯಾಪ್ತಿಯ ಎಲ್ಲ ಕಾಲೇಜುಗಳ ಸ್ನಾತಕೋತ್ತರ ವಿಭಾಗದಲ್ಲಿ ಆರಂಭಿಸಲು ವಿವಿಯಿಂದ ನಿರ್ದೇಶ ನೀಡುವ ಸಾಧ್ಯತೆ ಇದೆ ಎಂದು ವಿವಿಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಕೋರ್ಸ್‌ನ ಉದ್ದೇಶವೇನು?
ಕುಟುಂಬ ವೈದ್ಯರಿಗೆ ಸಾಕಷ್ಟು ಬೇಡಿಕೆಯಿದೆ. ಆದರೆ ಬಹುತೇಕರಿಗೆ ಇದರ ಬಗ್ಗೆ ಸ್ಪಷ್ಟ ಕಲ್ಪನೆಯಿಲ್ಲ. ಸಣಪುಟ್ಟ ಅನಾರೋಗ್ಯಗಳು ಕಾಡಿದಾಗ ಜನರು ನೇರವಾಗಿ ತಜ್ಞ ವೈದ್ಯರನ್ನೇ ಸಂಪರ್ಕಿಸುತ್ತಾರೆ. ಇದನ್ನು ತಪ್ಪಿಸಿ, ಆರೋಗ್ಯಕ್ಕೆ ಸಂಬಂಧಿಸಿದ ಸಣ್ಣಪುಟ್ಟ ವಿಚಾರಗಳಿಗೆ ಫ್ಯಾಮಿಲಿ ಮೆಡಿಸಿನ್‌ ಕೋರ್ಸ್‌ ಪೂರೈಸಿದ ವೈದ್ಯರ ಸಲಹೆ ಪಡೆಯುವ ಉದ್ದೇಶದಿಂದ ಈ ಕೋರ್ಸ್‌ನ್ನು ಕಾರ್ಯರೂಪಕ್ಕೆ ತರಲಾಗುತ್ತಿದೆ.

ಕುಟುಂಬ ವೈದ್ಯನಿಗೆ ಒಂದು ಕುಟುಂಬದ ಪ್ರತಿ ಸದಸ್ಯನ ಆರೋಗ್ಯಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಮತ್ತು ಆರೋಗ್ಯ ಹಿನ್ನೆಲೆಯು ತಿಳಿದಿರುತ್ತದೆ. ಇದರಿಂದ ಗಂಭೀರ ಸಮಸ್ಯೆ ಅಥವಾ ಉನ್ನತ ಮಟ್ಟದ ಚಿಕಿತ್ಸೆಗೆ ಬೇಕಿರುವ ಅಗತ್ಯ ಸಲಹೆಯನ್ನು ಸುಲಭವಾಗಿ ಕುಟುಂಬಕ್ಕೆ ನೀಡಬಹುದಾಗಿದೆ. ಇಡೀ ಕುಟುಂಬದ ಆರೋಗ್ಯದ ಹಿತದೃಷ್ಟಿಯಿಂದ ಫ್ಯಾಮಿಲಿ ಮೆಡಿಸಿನ್‌ ಕೋರ್ಸ್‌ ತೆರೆಯಲು ವಿವಿ ಮುಂದಾಗಿದೆ.

ಕೋರ್ಸ್‌ ವಿನ್ಯಾಸ
ವಿವಿ ವ್ಯಾಪ್ತಿಯ ಕಾಲೇಜುಗಳು 2020-21ನೇ ಸಾಲಿಗೆ ಫ್ಯಾಮಿಲಿ ಮೆಡಿಸಿನ್‌ ಕೋರ್ಸ್‌ಗೆ ಅರ್ಜಿ ಆಹ್ವಾನಿಸಬೇಕು. ಪ್ರತಿ ಕಾಲೇಜಿಗೆ ವರ್ಷಕ್ಕೆ ನಾಲ್ಕು ಅಭ್ಯರ್ಥಿಗಳನ್ನು ದಾಖಲಿಸಿಕೊಳ್ಳುವ ಅವಕಾಶ ಸಿಗಲಿದೆ. ಎಂಬಿಬಿಎಸ್‌ ಪೂರೈಸಿದ ಅಭ್ಯರ್ಥಿಗಳು ಸ್ನಾತಕೋತ್ತರ ವಿಭಾಗದಲ್ಲಿ ಫ್ಯಾಮಿಲಿ ಮೆಡಿಸಿನ್‌ ಕೋರ್ಸ್‌ನ್ನು ಸ್ಪೆಷಲೈಸೇಷನ್‌ ಆಗಿ ಪಡೆದುಕೊಂಡು, ಮೂರು ವರ್ಷಗಳ ಕಾಲ ಅಧ್ಯಯನ ಮಾಡಬೇಕಾಗುತ್ತದೆ.

ಸಾಮಾನ್ಯ ಸ್ನಾತಕೋತ್ತರ ಪದವಿಯಂತೆ ಪ್ರಮಾಣಪತ್ರವನ್ನು ವಿವಿಯಿಂದ ನೀಡಲಾಗುತ್ತದೆ. ಪ್ರಮಾಣಪತ್ರ ಪಡೆದವರು ಫ್ಯಾಮಿಲಿ ವೈದ್ಯರಾಗಿ ಸೇವೆ ಸಲ್ಲಿಸಲು ಅರ್ಹರಾಗುತ್ತಾರೆ ಎಂದು ವಿವಿಯ ಉನ್ನತಾಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.