ಬಿಜೆಪಿಗೆ ರಾಜು ಕಾಗೆ ಗುಡ್ ಬೈ : ಕಾಂಗ್ರೆಸ್ ಕಡೆ ಒಲವು
Team Udayavani, Nov 11, 2019, 1:12 PM IST
ಬೆಂಗಳೂರು: ನಾನು ಬಿಜೆಪಿಯಿಂದ ಹೊರ ಬಂದಿದ್ದೇನೆ. ಬಿಜೆಪಿಗೆ ರಾಜೀನಾಮೆ ನೀಡಿದ್ದೇನೆ, ರಾಜ್ಯ ಕಚೇರಿಗೇ ರಾಜೀನಾಮೆ ಪತ್ರ ಕಳಿಸಿದ್ದೇನೆ . ನಾನು ನ.13 ಕ್ಕೆ ಕಾಂಗ್ರೆಸ್ ಪಕ್ಷ ಸೇರಿಕೊಳ್ಳುತ್ತೇನೆ ಎಂದು ಮಾಜಿ ಶಾಸಕ ರಾಜು ಕಾಗೆ ಹೇಳಿದರು.
ನಗರದಲ್ಲಿ ಸುದ್ಧಿಗಾರರೊಂದಿಗೆ ಮಾತಾನಾಡಿದ ಅವರು ಈಗಾಗಲೇ ಸಿದ್ದರಾಮಯ್ಯ, ಡಿಕೆಶಿ ಹಾಗೂ ದಿನೇಶ್ ಗುಂಡೂರಾವ್ ಭೇಟಿ ಮಾಡಿ ಮಾತಾಕತೆ ನಡೆಸಿದ್ದೇನೆ. ನನಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ಕೊಡುವ ಭರವಸೆ ನೀಡಿದ್ದಾರೆ.
ಕುಮಾರಸ್ವಾಮಿಯನ್ನು ಇನ್ನೂ ಭೇಟಿಮಾಡಿಲ್ಲ, ಮುಂದೆ ಭೇಟಿ ಮಾಡುತ್ತೇನೆ, ಕುಮಾರಸ್ವಾಮಿ ನನ್ನ ಉತ್ತಮ ಸ್ನೇಹಿತರು. ಅವರೂ ಬೆಂಬಲ ಕೊಡುತ್ತಾರೆ ಅನ್ನುವ ಭರವಸೆ ಇದೆ ಎಂದರು.
ಮತ್ತೆ ನಾನು ಬಿಜೆಪಿಗೆ ಹೋಗುವ ಪ್ರಶ್ನೆಯೇ ಇಲ್ಲ. ಇದು ನನ್ನ ರಾಜಕೀಯ ಭವಿಷ್ಯದ ಪ್ರಶ್ನೆ. ಈಗ ನಾನು ಮನೆಯಲ್ಲಿ ಕೂತರೆ, ಜೀವನಪರ್ಯಂತ ಮನೆಯಲ್ಲಿ ಕೂರಬೇಕು. ಯಡಿಯೂರಪ್ಪ ಒಮ್ಮೆ ಮಾತುಕತೆ ಮಾಡಿದರು, ಈಗ ನೀನು ಸುಮ್ಮನಿರು, ನಿನಗೆ ನಿಗಮ ಮಂಡಳಿಕೊಡುತ್ತೇನೆ ಅಂದಿದ್ದರು. ಯಡಿಯೂರಪ್ಪ ಮಾತು ಕೇಳಿ ಸುಮ್ಮನಾದೆ. ಆದರೆ ಈಗ ಶ್ರೀಮಂತ ಪಾಟೀಲ್ ಗೆಲ್ಲಿಸಿಕೊಂಡು ಬನ್ನಿ ಅನ್ನುತ್ತಿದ್ದಾರೆ. ಇದು ನನ್ನಿಂದ ಆಗದ ಮಾತು ಅಂದೆ. ಈಗ ಎಲ್ಲವೂ ಮುಗಿದ ಅಧ್ಯಾಯ. ನನಗೆ ಮುಖ್ಯಮಂತ್ರಿ ಪದವಿ ಕೊಟ್ಟರೂ ನಾನು ಬಿಜೆಪಿ ಹೋಗಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ