ರಕ್ಷಾ ಬಂಧನ ಜ್ಯಾತ್ಯತೀತ ಆಚರಣೆಯಾಗಲಿ


Team Udayavani, Aug 8, 2017, 11:58 AM IST

vishvanath-rakhshabandhan.jpg

ಬೆಂಗಳೂರು: ರಕ್ಷಾಬಂಧನ ಕೇವಲ ಒಡಹುಟ್ಟಿದವರ ನಡುವಿನ ಆಚರಣೆಗೆ ಸೀಮಿತವಾಗದೆ, ಸುತ್ತಲಿನ ಪರಿಸರದವರನ್ನು ಪ್ರೀತಿಯಿಂದ ನೋಡಿಕೊಳ್ಳುವ ಹಬ್ಬವಾಗಬೇಕು ಎಂದು ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ಅಭಿಪ್ರಾಯಪಟ್ಟರು.

ಶ್ರೀರಾಮಪುರದಲ್ಲಿರುವ ಭಾರತೀಯ ವಿದ್ಯಾಭವನ ಬಿಬಿಎಂಪಿ ಶಾಲೆಯಲ್ಲಿ ಸೋಮವಾರ ನಡೆದ ರಕ್ಷಾಬಂಧನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಕ್ಷಾ ಬಂಧನು ಜಾತಿ, ಮತ, ಧರ್ಮ ಭೇದವಿಲ್ಲದ ಆಚರಣೆಯಾಗಬೇಕು. ಸಮಾಜದಲ್ಲಿರುವ ಎಲ್ಲರೂ ಅಣ್ಣ ತಮ್ಮಂದಿರಾಗಿ ಒಂದು ಕುಟುಂಬದ ರೀತಿಯಲ್ಲಿ ಬದುಕು ನೆಡೆಸಲು ಈ ಹಬ್ಬ ಪ್ರೇರಣೆಯಾಗಲಿ ಎಂದರು.

ಅಣ್ಣ , ತಂಗಿಯನ್ನು ಸದಾ ಕಾಪಾಡುತ್ತಾನೆ ಎಂಬ ಸಂದೇಶವನ್ನು ರಕ್ಷಾಬಂಧನ ಸಾರುತ್ತದೆ. ವರ್ಷಕ್ಕೊಮ್ಮೆ ತಂಗಿ, ಅಣ್ಣನಿದ್ದಲ್ಲಿ ತೆರಳಿ ಬಾಂಧವ್ಯ ಪುನಃಚೇತನಗೊಳಿಸುವ ರಕ್ಷಾ ಬಂಧನದ ಆಚರಣೆ ನಾಡಿನುದ್ದಕ್ಕೂ ನಡೆಯಬೇಕು. ಉತ್ತರ ಭಾರತದಲ್ಲಿ ರಕ್ಷಾಬಂಧನವನ್ನು ಪ್ರಮುಖ ಹಬ್ಬದ ರೀತಿಯಲ್ಲಿ ಪ್ರತಿ ಮನೆಯಲ್ಲೂ ಆಚರಿಸುತ್ತಾರೆ. ಇತ್ತೀಚಿನ ವರ್ಷದಲ್ಲಿ ದಕ್ಷಿಣ ಭಾರತಕ್ಕೂ ಇದು ವ್ಯಾಪಿಸಿರುವುದು ಉತ್ತಮ ಬೆಳವಣಿಗೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

ಹಿಂದು, ಮುಸ್ಲಿಂ, ಕ್ರೈಸ್ತ ಹೀಗೆ ಎಲ್ಲಾ ಸಮುದಾಯದವರು ಆಚರಿಸುವ ಪ್ರತಿಯೊಂದು ಹಬ್ಬದಲ್ಲೂ ಒಂದೊಂದು ವಿಶೇಷ ಸಂದೇಶ ಇದ್ದೇ ಇರುತ್ತದೆ. ಹಾಗೆಯೇ ಒಳ್ಳೆಯ ವಿಚಾರವು ತುಂಬಿಕೊಂಡಿದೆ. ಪ್ರತಿಯೊಬ್ಬರೂ ಉತ್ತಮ ಸಮಾಜ ನಿರ್ಮಾಣದ ನಿಟ್ಟಿನಲ್ಲಿ ಸಾಗಬೇಕು ಎಂಬ ಸಲಹೆ ನೀಡಿದರು.

ನಿವೃತ್ತ ರಾಜ್ಯಪಾಲ ಎಂ.ರಾಮಾಜೋಯಿಸ್‌ ಮಾತನಾಡಿ, ರಕ್ಷಾಬಂಧನವು ಮತ ನಿರಪೇಕ್ಷ ಹಬ್ಬವಾಗಿದೆ. ಜಾತಿ, ಧರ್ಮ, ಪಂಥ, ಪಂಗಡ ಮೀರಿ ಎಲ್ಲರೂ ನಮ್ಮವರು ಎಂಬ ಭಾವನೆಯನ್ನು ಸಾರುತ್ತಿದೆ. ಭಾರತ ಮಾತೆಯು ದೇಶದ 130 ಕೋಟಿ ಮಕ್ಕಳನ್ನು ಪರಸ್ಪರ ಸಮಾನತೆಯಿಂದ ಕಾಣುವಂತೆ ನಾವೆಲ್ಲರೂ ಅದೇ ಭಾವದೊಂದಿಗೆ ಸಾಮರಸ್ಯದಿಂದ ಬದುಕಬೇಕು. ನಾವೆಲ್ಲರೂ ಒಂದು ಎಂಬ ಸಹೋದರತ್ವದ ಗುಣ ರೂಢಿಸಿಕೊಳ್ಳಬೇಕು ಎಂದರು.

ಸಮಾಜದಲ್ಲಿ ಸದ್ಯ ನಡೆಯುತ್ತಿರುವ ನೀರಿನ ಜಗಳ, ಭಾಷಾ ಜಗಳ, ಜಾತಿ ನಿಂದನೆ, ಅಸಮಾನತೆ ಮೊದಲಾದ ವಿಚಾರಗಳನ್ನು ನಿವಾರಿಸಲು ರಕ್ಷಾಬಂಧನ ರಾಮಬಾಣವಾಗಿದೆ. ಆತ್ಮೀಯತೆಯಿಂದ ರಕ್ಷೆ ಕಟ್ಟಿ ಬಂಧುತ್ವ ಭಾವನೆ ಬೆಳೆಸಿಕೊಳ್ಳಬೇಕು. ನಮ್ಮ ಸ್ವಯಂ ಕೃತ ಅಪರಾಧವನ್ನು ಕಡಿಮೆ ಮಾಡುತ್ತದೆ ಎಂಬ ಆಶಯ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಪುಟಾಣಿಗಳು ಪರಸ್ಪರ ರಕ್ಷೆಯನ್ನು ಕಟ್ಟಿಕೊಂಡರು. ಹಾಗೆಯೇ ಅತಿಥಿಗಳಿಗೂ ರಕ್ಷೆ ಕಟ್ಟಲಾಯಿತು. ಭಾರತೀಯ ವಿದ್ಯಾಭವನದ ನಿರ್ದೇಶಕ ಎಚ್‌.ಎನ್‌.ಸುರೇಶ್‌, ಭಾರತೀಯ ವಿಕಾಸ ಪರಿಷದ್‌ ಅಧ್ಯಕ್ಷ ಬಿ.ಪಿ.ಸ್ವಾಮಿ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.