ರಂಗಮಂದಿರ ಪುನರಾರಂಭಕ್ಕೆ ರ್ಯಾಲಿ
Team Udayavani, May 14, 2019, 3:04 AM IST
ಬೆಂಗಳೂರು: ಕಲಾಗ್ರಾಮದ ರಂಗಮಂದಿರ ಪುನರಾರಂಭಿಸಲು ಒತ್ತಾಯಿಸಿ ರಂಗವಸಂತ ಸಾಂಸ್ಕೃತಿಕ ಸೇವಾ ಟ್ರಸ್ಟ್ ವತಿಯಿಂದ ಪುರಭವನದ ಎದುರು ಸೋಮವಾರ ಬೈಕ್ರ್ಯಾಲಿ ನಡೆಸಿದರು.
ಈ ಕುರಿತು ಮಾಹಿತಿ ನೀಡಿದ ಟ್ರಸ್ಟ್ ಸದಸ್ಯರು, ಮಲ್ಲತ್ತಹಳ್ಳಿಯ ಕಲಾಗ್ರಾಮದಲ್ಲಿರುವ ರಂಗಮಂದಿರವು ಸುಮಾರು 5 ತಿಂಗಳ ಹಿಂದೆ ಬೆಂಕಿ ಅವಘಡದಿಂದ ಹಾನಿಗೊಳಗಾಗಿತ್ತು.
ಹೀಗಾಗಿ, ಕನ್ನಡ ಸಂಸ್ಕೃತಿ ಇಲಾಖೆಯು ಆ ರಂಗಮಂದಿರವನ್ನು ತಾತ್ಕಾಲಿಕವಾಗಿ ಮುಚ್ಚಿತ್ತು. ಆನಂತರ ಇಲಾಖೆಯು ಯಾವುದೇ ದುರಸ್ತಿಗೆ ಮುಂದಾಗದೇ ನಿರ್ಲಕ್ಷ್ಯ ತೋರಿದೆ. ರಂಗಭೂಮಿ ಮುಚ್ಚಿರುವುದರಿಂದ ರಂಗ ತಂಡಗಳಿಗೆ ಹಾಗೂ ಸ್ಥಳೀಯ ಪ್ರೇಕ್ಷಕರಿಗೆ ಸಾಕಷ್ಟು ತೊಂದರೆಯಾಗಿದೆ.
ಹೀಗಾಗಿ, ಕನ್ನಡ ಸಂಸ್ಕೃತಿ ಇಲಾಖೆಗೆ ರಂಗಮಂದಿರದ ಅವಶ್ಯಕತೆಯನ್ನು ಮನವರಿಕೆ ಮಾಡಿಕೊಡಲು “ರಂಗಭೂಮಿ ಉಳಿಸಿ, ಬೆಳೆಸಿ’ ಎಂಬ ಘೋಷಣೆಯೊಂದಿಗೆ ನಗರದ ವಿವಿಧೆಡೆ ಬೈಕ್ ರ್ಯಾಲಿ ನಡೆಸಿ ಆನಂತರ ಕನ್ನಡ ಸಂಸ್ಕೃತಿ ಇಲಾಖೆ ನಿರ್ದೇಶಕರಿಗೆ ಮನವಿ ಪತ್ರಸಲ್ಲಿಸಲಾಯಿತು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ