ಬೈಕ್‌ ರ್ಯಾಲಿಗೆ ಅನುಮತಿ ನಿರಾಕರಣೆ: ರಾಮಲಿಂಗಾ ರೆಡ್ಡಿ ಸಮರ್ಥನೆ


Team Udayavani, Sep 6, 2017, 9:30 AM IST

Ramalinga-Reddy-2-600.jpg

ಬೆಂಗಳೂರು: ಮಂಗಳೂರು ಚಲೋ ಬೈಕ್‌ ರ್ಯಾಲಿಗೆ ಸಂಬಂಧಿಸಿದಂತೆ ಪೊಲೀಸ್‌ ಇಲಾಖೆ ಕೇಳಿದ ಮಾಹಿತಿಯನ್ನು ಬಿಜೆಪಿ ಒದಗಿಸದ ಕಾರಣ ಅನುಮತಿ ನಿರಾಕರಿಸಲಾಗಿದೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಮಂಗಳೂರು ಚಲೋ ಬೈಕ್‌ ರ್ಯಾಲಿ ಶಾಂತಿ ಕದಡುವ ಉದ್ದೇಶ ಹೊಂದಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ ಸರಕಾರದ ಮೇಲಿದೆ. ಹೀಗಾಗಿಯೇ 800ಕ್ಕೂ ಹೆಚ್ಚು ಜನರನ್ನು ಮುನ್ನೆಚ್ಚರಿಕೆ ಕ್ರಮವಾಗಿ ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

ಮೂರು  ಆಯುಕ್ತಾಲಯ ಹಾಗೂ ಮೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ವ್ಯಾಪ್ತಿಯಲ್ಲಿ ಬಿಜೆಪಿ ನಾಯಕರು ಮಂಗಳೂರು ಚಲೋ ಬೈಕ್‌ ರ್ಯಾಲಿಗೆ ಸಂಬಂಧಿಸಿದಂತೆ ಪೊಲೀಸ್‌ ಇಲಾಖೆ ಕೇಳಿದ್ದ ಮಾಹಿತಿ ಕೊಟ್ಟಿಲ್ಲ. ಹೀಗಾಗಿ, ಅನುಮತಿ ನಿರಾಕರಿಸಲಾಗಿದೆ ಎಂದು ತಿಳಿಸಿದರು. ರಾಜ್ಯದ 5 ಭಾಗಗಳಿಂದ ಬೈಕ್‌ಗಳಲ್ಲಿ ರ್ಯಾಲಿ ಹೊರಟರೆ ಎಷ್ಟು ಜನ, ಎಲ್ಲಿಂದ ಹೊರಡುತ್ತಾರೆ ಎಂಬಿತ್ಯಾದಿ ಮಾಹಿತಿ ಬೇಡವೇ? ಅದನ್ನು ಪೊಲೀಸರಿಗೆ ಕೊಡದಿದ್ದರೆ ಹೇಗೆ ಎಂದು ಪ್ರಶ್ನಿಸಿದರು. ಇಷ್ಟೊಂದು ದೊಡ್ಡ ರ್ಯಾಲಿ 400 ಕಿ.ಮೀ. ವರೆಗೆ ಮಾಡಬೇಕಾದರೆ ಪೊಲೀಸ್‌ ಇಲಾಖೆ ಕೇಳಿದ ಮಾಹಿತಿ ಕೊಡಬೇಕಲ್ಲವೇ ಎಂದರು. ಹಿಂದೆ ಬಿಜೆಪಿ ಸರಕಾರದ ಅವಧಿಯಲ್ಲಿ ಕಾಂಗ್ರೆಸ್‌ ರ್ಯಾಲಿಗೆ ಭದ್ರತೆ ಒದಗಿಸಿದ್ದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಆಗ ಭ್ರಷ್ಟಾಚಾರದ ವಿರುದ್ಧ ನಾವು ಹೋರಾಟ ಮಾಡಿದ್ದೆವು. ಎಲ್ಲೂ ಶಾಂತಿಗೆ ಭಂಗ ತರಲಿಲ್ಲ. ಆದರೆ, ಈಗ ಬಿಜೆಪಿಯವರ ಉದ್ದೇಶ ಸರಿಯಿಲ್ಲ ಎಂದರು.

ಶಾಂತಿ ಕದಡುವ ಯತ್ನ : ಹೆದ್ದಾರಿಗಳಲ್ಲಿ ರ್ಯಾಲಿ ಹೋದರೆ ಸಂಚಾರ ದಟ್ಟಣೆ ಸಹಿತ ಬೇರೆ ಬೇರೆ ರೀತಿಯ ಸಮಸ್ಯೆಗಳು ಉದ್ಭವಿಸುತ್ತವೆ. ಜತೆಗೆ ದಕ್ಷಿಣ ಕನ್ನಡ ಜಿಲ್ಲೆ ಶಾಂತವಾಗಿದ್ದು ಮತ್ತೆ ಅಲ್ಲಿ ಶಾಂತಿ ಕದಡುವ ಪ್ರಯತ್ನ ಬಿಜೆಪಿಯದು ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ದೂರಿದ್ದಾರೆ.

ರಾಮಲಿಂಗಾ ರೆಡ್ಡಿಗೆ ತಲೆ ಬಿಸಿ
ಬೆಂಗಳೂರು:
ರಾಮಲಿಂಗಾ ರೆಡ್ಡಿ ಅವರು ಗೃಹ ಇಲಾಖೆ ಹೊಣೆಗಾರಿಕೆ ವಹಿಸಿಕೊಂಡ ಮರುದಿನವೇ ಬಿಜೆಪಿ ಮಂಗಳೂರು ಚಲೋ ಬೈಕ್‌ ರ್ಯಾಲಿ, ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ, ಸಚಿವ ವಿನಯ ಕುಲಕರ್ಣಿಗೆ ಬೆದರಿಕೆ ಪ್ರಕರಣಗಳು ಸವಾಲಾಗಿ ಪರಿಣಮಿಸಿವೆ. ಡಾ| ಜಿ. ಪರಮೇಶ್ವರ್‌ ರಾಜೀನಾಮೆ ಅನಂತರ ಕೆಲವು ದಿನ ಮುಖ್ಯಮಂತ್ರಿಯವರ ಬಳಿಯೇ ಇದ್ದ ಗೃಹ ಖಾತೆಯನ್ನು ಶುಕ್ರವಾರ ನಡೆದ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಸಾರಿಗೆ ಸಚಿವರಾಗಿದ್ದ ರಾಮಲಿಂಗಾ ರೆಡ್ಡಿಯವರಿಗೆ ಗೃಹ ಖಾತೆ ವಹಿಸಲಾಗಿತ್ತು.

ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಮಂಗಳೂರು ಚಲೋ ಬೈಕ್‌ ರ್ಯಾಲಿ ತಲೆಬಿಸಿ ಉಂಟುಮಾಡಿತ್ತು. ಅನಂತರ ಸಚಿವ ವಿನಯ ಕುಲಕರ್ಣಿಗೆ ಬೆದರಿಕೆ ಹಾಗೂ ಇದೀಗ ಗೌರಿ ಲಂಕೇಶ್‌ ಹತ್ಯೆ ಪ್ರಕರಣಗಳು ತಲೆನೋವಾಗಿ ಪರಿಣಮಿಸಿವೆ.

ಟಾಪ್ ನ್ಯೂಸ್

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.