ಪಕ್ಷೇತರ ಸದಸ್ಯರ ಒಲಿಸಿಕೊಳ್ಳಲು ರಾಮಲಿಂಗಾರೆಡ್ಡಿ ಮಾತುಕತೆ
Team Udayavani, Sep 12, 2018, 12:28 PM IST
ಬೆಂಗಳೂರು: ಬಿಬಿಎಂಪಿಯಲ್ಲಿ ಮೇಯರ್ -ಉಪ ಮೇಯರ್ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸಿರುವ ಪಕ್ಷೇತರ ಸದಸ್ಯರನ್ನು ಬಿಜೆಪಿಯತ್ತ ಸೆಳೆಯಲು ಮಾಜಿ ಉಪ ಮುಖ್ಯಮಂತ್ರಿ ಆರ್.ಆಶೋಕ್ ಮಾತುಕತೆ ನಡೆಸಿದ ಬೆನ್ನಲ್ಲೇ ಮಂಗಳವಾರ ಕೆಪಿಸಿಸಿ ಅಧ್ಯಕ್ಷ ದಿನೇಶ್ಗುಂಡೂರಾವ್ ಹಾಗೂ ಮಾಜಿ ಸಚಿವ ರಾಮಲಿಂಗಾರೆಡ್ಡಿ ಪಕ್ಷೇತರ ಪಾಲಿಕೆ ಸದಸ್ಯರ ಜತೆ ಖಾಸಗಿ ಹೊಟೇಲ್ನಲ್ಲಿ ಸಭೆ ನಡೆಸಿದರು.
ಜಯನಗರ ವಾರ್ಡ್ನ ಗಂಗಾಬಿಕೆಯನ್ನು ಮೇಯರ್ ಮಾಡಲು ರಾಮಲಿಂಗಾ ರೆಡ್ಡಿ ಪ್ರಯತ್ನ ನಡೆಸಿದ್ದು, ಈ ಬಾರಿಯೂ ತಮ್ಮ ಪಕ್ಷದ ಅಭ್ಯರ್ಥಿ ಪರವಾಗಿರುವಂತೆ ಪಕ್ಷೇತರ ಸದಸ್ಯರಿಗೆ ಮನವಿ ಮಾಡಿದರು.
ಕಳೆದ ಮೂರು ಅವಧಿಗೆ ಕಾಂಗ್ರೆಸ್ ಮೇಯರ್ ಆಯ್ಕೆಯಾಗಲು ಪಕ್ಷೇತರ ಸದಸ್ಯರು ಸಹಕಾರ ನೀಡಿದ್ದು, ಕಾಂಗ್ರೆಸ್ ಕೂಡ ಪಕ್ಷೇತರರ ಹಿತ ಕಾಯಲು ಬದ್ಧವಾಗಿದೆ. ಇದುವರೆಗೂ ಪಕ್ಷ ನಿಮ್ಮೊಂದಿಗೆ ಉತ್ತಮ ಸಂಬಂಧ ಇಟ್ಟುಕೊಂಡಿದೆ. ಈ ಬಾರಿಯೂ ಅದೇ ಮುಂದುವರೆಸಿಕೊಂಡು ಹೋಗಲು ಕಾಂಗ್ರೆಸ್ ಮೇಯರ್ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಕೋರಿದರು.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರೂ ಸಹ ಪಕ್ಷೇತರ ಸದಸ್ಯರಿಗೆ ಕಾಂಗ್ರೆಸ್ ಪರವಾಗಿರುವಂತೆ ಮನವಿ ಮಾಡಿದರು ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ