ರಾಮಾಯಣ ಕೇವಲ ಕವಿ ಕಲ್ಪನೆ


Team Udayavani, Aug 25, 2018, 12:52 PM IST

ramayana.jpg

ಬೆಂಗಳೂರು: “ರಾಮಾಯಣ ಕವಿ ಕಲ್ಪನೆ ಅಷ್ಟೇ.ಅದು,ನಮ್ಮ ಬದುಕಿಗೆ ಅತಿ ಹತ್ತಿರವಾಗಲಿ ಎಂಬ ದೃಷ್ಟಿಯಿಂದ ಪಾತ್ರಗಳನ್ನು ಸೃಷ್ಟಿ ಮಾಡಲಾಗಿದೆ’ಎಂದು ರಾಷ್ಟ್ರೀಯ ನಾಟಕ ಶಾಲೆ ಬೆಂಗಳೂರು ಕೇಂದ್ರದ ನಿರ್ದೇಶಕ ಸಿ.ಬಸವಲಿಂಗಯ್ಯ ಅಭಿಪ್ರಾಯಪಟ್ಟಿದ್ದಾರೆ. 

ಲಹರಿ ಅಡ್ವೊಕೇಟ್‌ ಫೋರಂ ರವೀಂದ್ರ ಕಲಾಕ್ಷೇತ್ರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ “ಲಹರಿ ಲಾಯರ್ಸ್‌ ಆ್ಯಕ್ಟ್ -2018′, ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಮಾಯಣಕ್ಕೆ ಒಂದೊಂದು ದೇಶದಲ್ಲಿ ಒಂದೊಂದು ರೀತಿಯ ಕಲ್ಪನೆ ನೀಡಲಾಗಿದೆ. ಥೈಲ್ಯಾಂಡ್‌ನ‌ಲ್ಲಿ ರಾಮ, ಲಕ್ಷ್ಮಣ, ಸೀತೆಯರನ್ನು ಸಹೋದರ ಸಹೋದರಿ ರೀತಿಯಲ್ಲಿ ನೋಡಲಾಗುತ್ತಿದೆ. ಆದರೆ ಭಾರತದಲ್ಲಿ ವಾಲ್ಮೀಕಿ ಒಂದು ಗಂಡಿಗೆ ಒಂದೇ ಹೆಣ್ಣು ಎಂಬ ಕಲ್ಪನೆಯಲ್ಲಿ ರಾಮಾಯಣ ಹೆಣೆದಿದ್ದಾರೆ ಎಂದು ಇತಿಹಾಸ ಬಿಚ್ಚಿಟ್ಟರು.

12ನೇ ಶತಮಾನದಲ್ಲಿ ವಚನ ಚಳುವಳಿಕಾರ ಬಸವಣ್ಣನವರು ಮಾನವತ್ವದ‌ ಮಹಾಕ್ರಾಂತಿ ಮಾಡಿದರು. ಆದರೆ, ಇಂದು ಮಾನವೀಯತೆ ಇಲ್ಲದ ರೀತಿಯಲ್ಲಿ ಬದುಕು ಸಾಗಿಸಲಾಗುತ್ತದೆ. ಹೀಗಾಗಿ ಮೊದಲು, ನಾವು ಮಾನವೀಯ ಗುಣಗಳನ್ನು ರೂಢಿಸಿಕೊಳ್ಳುವುದರ ಜತೆಗೆ ಅದನ್ನು ಬಿತ್ತುವ ಕೆಲಸವನ್ನು ಮಾಡಬೇಕು ಎಂದು ಸಲಹೆ ನೀಡಿದರು.

ನಾವೇ ಸೃಷ್ಟಿಸಿಕೊಂಡ ಆಪತ್ತು: ಕೊಡಗು ಮತ್ತು ಕೇರಳದಲ್ಲಿ ಉಂಟಾಗಿರುವ ವಿಪತ್ತು ಮನುಷ್ಯರೇ ಸೃಷ್ಟಿಸಿಕೊಂಡಿರುವುದಾಗಿದೆ. ಕಸ್ತೂರಿರಂಗನ್‌ ವರದಿ ಅನುಷ್ಠಾನ ಮಾಡದೇ ಮೂಲೆಗುಂಪು ಮಾಡಿರುವುದು ಕೂಡ ಇದರಲ್ಲಿ ಸೇರಿದೆ. ಭೂಮಿ ಕೇವಲ ಮನುಷ್ಯ ಸಂಕುಲಕಷ್ಟೇ ಸೀಮಿತವಲ್ಲ ಎಂಬುವುದನ್ನು ಮಾನವ ಸಂಕುಲ ಮೊದಲು ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿ ಹೇಳಿದರು.

ಬೆಂಗಳೂರಿನಲ್ಲೂ ಕೂಡ ಕೆರೆ ಹಾಗೂ ರಾಜಕಾಲುವೆ ಒತ್ತುವರಿಯಾಗಿದೆ. ಹೀಗಾಗಿ ಕೊಡಗು ಮತ್ತು ಕೇರಳದಲ್ಲಿ ಕಾಣಿಸಿಕೊಂಡಿರುವ ಪರಿಸ್ಥಿತಿ ಮುಂದೊಂದು ದಿನ ಸಿಲಿಕಾನ್‌ಸಿಟಿ ಬೆಂಗಳೂರಿಗೂ ಬರಬಹುದು ಎಂದು ಎಚ್ಚರಿಸಿದರು.

ಕೋರ್ಟ್‌ನಲ್ಲಿ ದಿನಲೂ ವಾದ ಮಂಡನೆ ಮಾಡುವ ವಕೀಲರಲ್ಲೂ ನಾಟಕದ ಅಭಿರುಚಿ ಇದೆ ಎಂಬುವುದನ್ನು ಮರೆಯಲಾಗದು.ರಂಗಭೂಮಿ ಬೆಳವಣಿಗೆ ದೃಷ್ಟಿಯಿಂದ ಈ ಪ್ರಯತ್ನ ಖಷಿ ಕೊಟ್ಟಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಕಾರ್ಯಕ್ರಮಗಳು ಹೀಗೆ ನಡೆಯಲಿ ಎಂದು ಆಶಿಸಿದರು.

ವಕೀಲರಿಗೆ ಡ್ರಾಮಾ ಹೊಸದಲ್ಲ: ಅಡ್ವೊಕೇಟ್‌ ಜನರಲ್‌ ಉದಯ ಹೊಳ್ಳ ಮಾತನಾಡಿ, ವಕೀಲರಿಗೆ ಡ್ರಾಮಾ ಹೊಸದೇನು ಅಲ್ಲ.ನ್ಯಾಯಾಲದಲ್ಲಿ ತಮ್ಮ ಕಕ್ಷಿದಾರರ ಜತೆ ಮಾತನಾಡುವಾಗ ಸೇರಿದಂತೆ ಹಲವು ಸನ್ನಿವೇಶಗಳಲ್ಲಿ ವಕೀಲರು ಆಗಾಗ ನಾಟಕ ಮಾಡುತ್ತಲೇ ಇರುತ್ತಾರೆ ಎಂದು ನಗೆ ಚಟಾಕಿಯನ್ನು ಹಾರಿಸಿದರು.

ಬಿಡುವಿಲ್ಲದ ತಮ್ಮ ವಕೀಲ ವೃತ್ತಿಯ ನಡುವೆಯೂ, ರಾಜ್ಯದಲ್ಲಿರುವ ವಕೀಲರನ್ನು ಸಂಘಟಿಸಿ ಎರಡು ದಿನಗಳ ನಾಟಕೋತ್ಸವ ಸ್ಪರ್ಧೆಯನ್ನು ಹಮ್ಮಿಕೊಳ್ಳುವುದು ಸಾಮಾನ್ಯದ ಕೆಲಸವೇನು ಅಲ್ಲ. ಇದೊಂದು ಉತ್ತಮವಾದ ಕೆಲಸವಾಗಿದ್ದು ವಯಕ್ತಿಕವಾಗಿ ನನಗೆ ಸಂತಸ ನೀಡಿದೆ ಎಂದು ಹೇಳಿದರು. ಲಹರಿ ಅಡ್ವೊಕೇಟ್‌ ಫೋರಂನ ಅಧ್ಯಕ್ಷೆ ಪಿ.ಅನು ಚಂಗಪ್ಪ, ಕಾರ್ಯದರ್ಶಿ ಆರ್‌.ಜಿ.ಚೌವ್ಹಾಣ್‌, ಶ್ರೀಕಾಂತ್‌ ಪಾಟೀಲ್‌ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸಂತ್ರಸ್ತರಿಗೆ ನಿಧಿಸಂಗ್ರಹ: ಎರಡು ದಿನಗಳ ಈ ನಾಟಕೋತ್ಸವ ಸ್ಪರ್ಧೆಯಲ್ಲಿ ಶಿವಮೊಗ್ಗ, ಧಾರವಾಡ, ಮೈಸೂರು ಮತು ಬೆಂಗಳೂರು ಸೇರಿದಂತೆ ಒಟ್ಟು ಐದು ತಂಡಗಳು ಭಾಗವಹಿಸಿವೆ. ವಿಜೇತ ತಂಡಕ್ಕೆ ಪ್ರಥಮ ಬಹುಮಾನ 72, ಸಾವಿರ ರೂ. ದ್ವಿತೀಯ ಬಹುಮಾನ 50, ಸಾವಿರ ರೂ.ಹಾಗೂ ತೃತೀಯ ಬಹುಮಾನ 25 ಸಾವಿರ ರೂ.ನೀಡಲಾಗುವುದು. ಟಿಕೆಟ್‌ ಸಂಗ್ರಹದ ಹಣವನ್ನು ಕೊಡಗು ಸಂತ್ರಸ್ತರಿಗೆ ನೀಡಲು ಲಹರಿ ಅಡ್ವೋಕೆಟ್‌ ಫೋರಂ ನಿರ್ಧರಿಸಿದೆ.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.