ಸಿ.ಡಿ ಪ್ರಕರಣದ ಹಿಂದೆ ಪ್ರಭಾವಿ ರಾಜಕಾರಣಿಯೊಬ್ಬರ ಕೈವಾಡ ಇದೆ: ಬಾಲಚಂದ್ರ ಜಾರಕಿಹೊಳಿ
Team Udayavani, Mar 3, 2021, 10:09 AM IST
ಬೆಂಗಳೂರು: ಸಿ.ಡಿ ಪ್ರಕರಣದ ಬಗ್ಗೆ ಸಿಐಡಿ, ಸಿಬಿಐ ತನಿಖೆ ಆಗಬೇಕು. ಈ ವೀಡಿಯೋ ಬಹಿರಂಗದ ಹಿಂದೆ ಪ್ರಭಾವಿ ರಾಜಕಾರಣಿಯೊಬ್ಬರ ಕೈವಾಡ ಇದೆ ಎಂದು ಬಾಲಚಂದ್ರ ಜಾರಕಿಹೊಳಿ ಆರೋಪಿಸಿದ್ದಾರೆ.
ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ ವಿಚಾರವಾಗಿ ಮಾತನಾಡಿದ ಅವರು, ಘಟನೆಯ ಕುರಿತು ಸಿಎಂ ಬಳಿ ತನಿಖೆ ಆಗಬೇಕು ಎಂದು ಒತ್ತಾಯ ಮಾಡಿದ್ದೇನೆ. ಇದರ ಹಿಂದೆ ಪ್ರಭಾವಿ ರಾಜಕಾರಣಿಯೊಬ್ಬರ ಕೈವಾಡ ಇದೆ. ಆದರೆ ಆ ರಾಜಕಾರಣಿ ಬಿಜೆಪಿಯವರಲ್ಲ. ಬೇರೆ ಪಕ್ಷದ ರಾಜಕಾರಣಿಯಾಗಿದ್ದಾರೆ.
ಹೀಗಾಗಿ ಈ ಬಗ್ಗೆ ಸಮಗ್ರವಾಗಿ ತನಿಖೆ ಆಗಬೇಕು. ಸಿಎಂ ಕೂಡ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.
ಇದನ್ನೂ ಓದಿ: ಚೀನದಿಂದ ಸೈಬರ್ ದಾಳಿ ಯತ್ನ: ನಿಗಾ ಅನಿವಾರ್ಯ
ಸಿ.ಡಿ ಪ್ರಕರಣದ ಕುರಿತಾಗಿ ಬಸವರಾಜ್ ಬೊಮ್ಮಾಯಿ ಮಾತನಾಡಿ, ಈ ವಿಚಾರವಾಗಿ ನಾನು ಸಿಎಂ ಭೇಟಿಯಾಗಿಲ್ಲ. ಈಗಾಗಲೇ ಒಂದು ದೂರು ಕಬ್ಬನ್ ಪಾರ್ಕ್ ಸ್ಟೇಷನ್ನಲ್ಲಿ ದಾಖಲಾಗಿದೆ. ಈ ಬಗ್ಗೆ ವಿಸ್ತೃತ ತನಿಖೆ ಮಾಡಲಿದ್ದೇವೆ ಎಂದರು.
ಪಕ್ಷದ ನಿಲುವಾಗ್ಲಿ, ಹಿರಿಯರ ನಿಲುವು ಅವರೇ ಪ್ರಕಟ ಮಾಡ್ತಾರೆ. ಅದರ ಬಗ್ಗೆ ಮಾತನಾಡುವ ಅಧಿಕಾರ ನನಗಿಲ್ಲ ನಿಪ್ಪಕ್ಷಪಾತವಾಗಿ ತನಿಖೆ ನಡೆಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಇಂದಿರಾಗಾಂಧಿ ತುರ್ತುಪರಿಸ್ಥಿತಿ ಹೇರಿಕೆ ತಪ್ಪುನಿರ್ಧಾರ; ಆದರೆ RSS ಇಂದು.. :ರಾಹುಲ್ ಗಾಂಧಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು