ಕೆಲಸ ಮಾಡದ್ದಕ್ಕೆ ಸಚಿವ ಸ್ಥಾನಕಳಕೊಂಡ ರಮೇಶ: ಸತೀಶ
Team Udayavani, Dec 27, 2018, 6:47 AM IST
ಬೆಳಗಾವಿ: ಸಹೋದರ ರಮೇಶ ಜಾರಕಿಹೊಳಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲಿಲ್ಲ. ಇದು ಅವರನ್ನು ಸಚಿವ ಸ್ಥಾನದಿಂದ
ಕೆಳಗಿಳಿಸಲು ಕಾರಣವಾಯಿತು ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಮೇಶ ಎಲ್ಲಿದ್ದಾರೆ ಎನ್ನುವುದು ನನಗೂ ಗೊತ್ತಿಲ್ಲ. ಹುಡುಕಿ ಅವರೊಂದಿಗೆ ಮಾತುಕತೆ ನಡೆಸಬೇಕಾಗಿದೆ. ಒಂದೆರಡು ದಿನಗಳಲ್ಲಿ ಭೇಟಿ ಮಾಡುತ್ತೇನೆ. ರಾಜಕೀಯವಾಗಿ ಅವರಿಗೆ ಏನು ಹೇಳಬೇಕೋ ಅದನ್ನು ಹೇಳುವ ಪ್ರಯತ್ನ ಮಾಡುತ್ತೇನೆ. ಅವರು ಸಹ ಯಾವುದೇ ಬೇಡಿಕೆ ಇಟ್ಟಿಲ್ಲ. ನನ್ನ ಮೇಲೆ ಅವರಿಗೆ ಕೋಪವೂ ಇಲ್ಲ ಎಂದರು.
ರಮೇಶ ಅವರ ವರ್ತನೆಯಲ್ಲಿ ಸಾಕಷ್ಟು ಬದಲಾವಣೆ ಆಗಬೇಕಿದೆ. ಮುಖ್ಯವಾಗಿ ಮಾತನಾಡುವಾಗ ಬಹಳ ಜಾಗ್ರತೆ ವಹಿಸಬೇಕು. ಇದರ ಬಗ್ಗೆ ಈ ಹಿಂದೆ ಹಲವಾರು ಬಾರಿ ಹೇಳಿದ್ದೇನೆ. ಅವರು ಮೊದಲಿನಿಂದಲೂ ಹಾಗೆಯೇ, ಸರಿಯಾಗಿ ಮಾತನಾಡುವುದೇ ಇಲ್ಲ ಎಂದರು. ಬೆಂಗಳೂರಿನಲ್ಲಿ ಮಂಗಳವಾರ ರಾಜ್ಯ ಉಸ್ತುವಾರಿ ವೇಣುಗೋಪಾಲ ಜೊತೆ ನಡೆದ ಚರ್ಚೆಯಲ್ಲಿ ಖಾತೆ ಹಂಚಿಕೆ ವಿಷಯ
ಪ್ರಸ್ತಾಪವಾಗಲಿಲ್ಲ ಎಂದು ಹೇಳಿದರು.
ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ರೀತಿ ಅಪಾಯವಿಲ್ಲ. ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ವರ್ತನೆಯೇ ಅವರನ್ನು
ಸಂಪುಟದಿಂದ ಕೈಬಿಡಲು ಕಾರಣವಾಗಿದೆ. ಅವರು ರಾಜೀನಾಮೆ ನೀಡಿದರೂ ಸರ್ಕಾರ ಸೇಫ್ ಆಗಿರಲಿದೆ.
●ಡಿ.ಎಸ್. ಹೂಲಗೇರಿ, ಶಾಸಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್