ಬೇಕಾಬಿಟ್ಟಿ ದರ: 15 ಬಸ್ಗಳ ವಿರುದ್ಧ ಪ್ರಕರಣ
Team Udayavani, Apr 17, 2019, 3:00 AM IST
ಬೆಂಗಳೂರು: ಮತದಾನಕ್ಕೆ ತೆರಳುತ್ತಿರುವ ಪ್ರಯಾಣಿಕರಿಂದ ಬೇಕಾಬಿಟ್ಟಿ ಪ್ರಯಾಣ ದರ ವಸೂಲಿ ಮಾಡುತ್ತಿರುವ ಖಾಸಗಿ ಬಸ್ಸುಗಳ ವಿರುದ್ಧ ಮಂಗಳವಾರ ಕಾರ್ಯಾಚರಣೆ ನಡೆಸಿದ ಸಾರಿಗೆ ಅಧಿಕಾರಿಗಳು, ಏಕಕಾಲದಲ್ಲಿ ನಗರದ ಮೂರ್ನಾಲ್ಕು ಕಡೆ ನೂರಾರು ಬಸ್ಗಳನ್ನು ತಪಾಸಣೆಗೆ ಒಳಪಡಿಸಿದರು.
ತುಮಕೂರು ರಸ್ತೆಯ ಗೊರಗುಂಟೆಪಾಳ್ಯ, ಸಿಲ್ಕ್ ಬೋರ್ಡ್ ಜಂಕ್ಷನ್, ಕೆ.ಆರ್.ಪುರ, ದೇವನಹಳ್ಳಿ ಸೇರಿದಂತೆ ನಗರದ ನಿರ್ಗಮನ ಮಾರ್ಗಗಳಲ್ಲಿ ಬಸ್ಸುಗಳನ್ನು ತಡೆದು, ಖುದ್ದು ಪ್ರಯಾಣಿಕರಿಂದ ಪ್ರಯಾಣ ದರದ ಬಗ್ಗೆ ಮಾಹಿ ಪಡೆದರು.
ಸಾಮಾನ್ಯ ದಿನಗಳಿಗಿಂತ ಹೆಚ್ಚು ದರ ವಿಧಿಸಿದ್ದ 15ಕ್ಕೂ ಹೆಚ್ಚು ಬಸ್ಸುಗಳ ವಿರುದ್ಧ ಪ್ರಕರಣ ದಾಖಲಿಸಲಾಯಿತು. 18 ಮತ್ತು 23ರಂದು ರಾಜ್ಯದಲ್ಲಿ ಎರಡು ಹಂತದ ಚುನಾವಣೆ ನಡೆಯುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮತದಾನಕ್ಕೆತೆರಳುತ್ತಿದ್ದಾರೆ.
ಪರಿಸ್ಥಿತಿಯ ಲಾಭ ಪಡೆಯಲು ಕೆಲವರು ಒಂದೂವರೆಯಿಂದ ಎರಡುಪಟ್ಟು ದರ ವಿಧಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸಾರಿಗೆ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ. ಈ ಹಿಂದೆ ಕೂಡ ಸಾರಿಗೆ ಆಯುಕ್ತರು ಸಭೆ ಕರೆದು ಎಚ್ಚರಿಕೆಯನ್ನೂ ನೀಡಿದ್ದರು ಎಂದು ಸಾರಿಗೆ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ