ಸಕ್ಕರೆ ಖಾತೆ ಮಾತ್ರ ನೀಡಿರುವುದಕ್ಕೆ ತಿಮ್ಮಾಪುರ್ ಅಸಮಾಧಾನ
Team Udayavani, Jan 4, 2019, 1:00 AM IST
ಬೆಂಗಳೂರು: ಖಾತೆ ಹಂಚಿಕೆ ವಿಚಾರದಲ್ಲಿ ಆರ್.ಬಿ.ತಿಮ್ಮಾಪುರ್ ಅಸಮಾಧಾನಗೊಂಡಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ಸಕ್ಕರೆ, ಒಳನಾಡು ಹಾಗೂ ಬಂದರು ಖಾತೆ ನೀಡಲು ಸೂಚನೆ ನೀಡಿದ್ದರೂ ರಾಜಭವನಕ್ಕೆ ಕಳುಹಿಸಿರುವ ಪಟ್ಟಿಯಲ್ಲಿ ಸಕ್ಕರೆ ಖಾತೆ ನಮೂದಿಸಿರುವ ಬಗ್ಗೆ ತಮ್ಮ ಆಪ್ತರ ಬಳಿ ಬೇಸರ ಹೊರಹಾಕಿದ್ದಾರೆ.
ಒಳನಾಡು ಮತ್ತು ಬಂದರು ಲೋಕೋಪಯೋಗಿ ಖಾತೆ ಅಡಿಯಲ್ಲಿ ಬರಲಿದ್ದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರು ಒಳನಾಡು ಹಾಗೂ ಬಂದರು ಬಿಟ್ಟುಕೊಡಲು ಒಪ್ಪಿಲ್ಲ. ಹೀಗಾಗಿ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ರಾಜಭವನಕ್ಕೆ ಪಟ್ಟಿ ಕಳುಹಿಸುವಾಗ ತಿಮ್ಮಾಪುರ್ ಅವರಿಗೆ ಸಕ್ಕರೆ ಖಾತೆ ಮಾತ್ರ ಹಂಚಿಕೆ ಮಾಡಿ ಕಳುಹಿಸಿದ್ದರು ಎಂದು ಹೇಳಲಾಗಿದೆ.
ಒಪ್ಪಂದದ ಪ್ರಕಾರ ಬಂದರು ಮತ್ತು ಒಳನಾಡು ಜಲ ಸಾರಿಗೆ ಕಾಂಗ್ರೆಸ್ ವ್ಯಾಪ್ತಿಗೆ ನೀಡಲಾಗಿದ್ದು, ರಮೇಶ್ ಜಾರಕಿಹೊಳಿ ಪೌರಾಡಳಿತ ಸಚಿವರಾಗಿದ್ದ ಅವರಿಗೆ ಹೆಚ್ಚುವರಿಯಾಗಿ ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ನೀಡಲಾಗಿತ್ತು. ಆದರೆ, ಈಗ ಆ ಖಾತೆ ಜೆಡಿಎಸ್ ಬಳಿಯೇ ಉಳಿಸಿಕೊಂಡಂತಾಗಿದೆ.
ಈ ಕುರಿತು ಉದಯವಾಣಿ ಜತೆ ಮಾತನಾಡಿದ ಆರ್.ಬಿ.ತಿಮ್ಮಾಪುರ್, ಹೈಕಮಾಂಡ್ ಕಳುಹಿಸಿರುವ ಪಟ್ಟಿಯಲ್ಲಿ ಸಕ್ಕರೆ ಖಾತೆ ಜೊತೆಗೆ ಬಂದರು ಮತ್ತು ಒಳನಾಡು ಜಲ ಸಾರಿಗೆ ಖಾತೆ ಇತ್ತು. ಈಗ ರಾಜ್ಯಪಾಲರ ಆದೇಶದಲ್ಲಿ ಸಕ್ಕರೆ ಖಾತೆ ಮಾತ್ರ ನೀಡಲಾಗಿದೆ. ಈ ಬಗ್ಗೆ ಪಕ್ಷದ ನಾಯಕರ ಗಮನಕ್ಕೆ ತರಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
MUST WATCH
ಹೊಸ ಸೇರ್ಪಡೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ