ಮರು ಮತದಾನ ಶಾಂತಿಯುತ
Team Udayavani, May 15, 2018, 12:21 PM IST
ಬೆಂಗಳೂರು: ಹೆಬ್ಟಾಳ ವಿಧಾನಸಭಾ ಕ್ಷೇತ್ರದ ಲೊಟ್ಟೆಗೊಲ್ಲಹಳ್ಳಿ ಮತ್ತು ಕೊಪ್ಪಳ ಜಿಲ್ಲೆಯ ಕುಷ್ಟಗಿ ಕ್ಷೇತ್ರದ 2 ಮತಗಟ್ಟೆಗಳಲ್ಲಿ ಮರು ಮತದಾನ ಶಾಂತಿಯುತವಾಗಿ ನಡೆದಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ ಕುಮಾರ್ ತಿಳಿಸಿದರು.
ವಿಕಾಸಸೌಧದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯುನ್ಮಾನ ಮತಯಂತ್ರದಲ್ಲಿ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಲೊಟ್ಟೆಗೊಲ್ಲಹಳ್ಳಿಯಲ್ಲಿ ಶನಿವಾರ (ಮೇ 12) ನಡೆದ ಮತದಾನವನ್ನು ಮುಂದೂಡಿ ಸೋಮವಾರ (ಮೇ 14) ಮತದಾನ ನಡೆಸಲಾಗಿತ್ತು. ಈ ಮತಗಟ್ಟೆಯಲ್ಲಿದ್ದ 1,444 ಮಂದಿಯ ಪೈಕಿ 53.32 ಮಂದಿ ಮತ ಚಲಾಯಿಸಿದ್ದಾರೆ.
ಅದೇ ರೀತಿ ಕೊಪ್ಪಳ ಜಿಲ್ಲೆಯ ಕುಷ್ಟಗಿ ವಿಧಾನಸಭಾ ಕ್ಷೇತ್ರದ 2 ಮತಗಟ್ಟೆಗಳಲ್ಲಿ ಸೋಮವಾರ ನಡೆದ ಮರು ಮತದಾನದಲ್ಲಿ ಒಟ್ಟು 1,683 ಮಂದಿಯ ಪೈಕಿ ಮತಗಟ್ಟೆ 27ರಲ್ಲಿ ಶೇ. 78 ಹಾಗೂ ಮತಗಟ್ಟೆಯಲ್ಲಿ 21ರಲ್ಲಿ ಶೇ. 73 ಮಂದಿ ಮತ ಚಲಾಯಿಸಿದ್ದಾರೆ ಎಂದು ಮುಖ್ಯ ಚುನಾವಣಾಧಿಕಾರಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ