ಭಾಗ್ಯವಂತರು ಮರು ಬಿಡುಗಡೆ


Team Udayavani, Oct 24, 2021, 12:23 PM IST

ಭಾಗ್ಯವಂತರು ಮರು ಬಿಡುಗಡೆ

ವರನಟ ಡಾ. ರಾಜಕುಮಾರ್‌, ಬಿ. ಸರೋಜಾದೇವಿ, ಅಶೋಕ್‌, ಬಾಲಕೃಷ್ಣ, ರಾಮಕೃಷ್ಣ, ತೂಗುದೀಪ ಶ್ರೀನಿವಾಸ್‌, ಮೈನಾವತಿ, ಎಂ. ಎಸ್‌ ಉಮೇಶ್‌, ಬಿ. ಜಯಾ ಮೊದಲಾದ ಕಲಾವಿದರು ಮುಖ್ಯಭೂಮಿಕೆಯಲ್ಲಿ ಅಭಿನಯಿಸಿದ್ದ “ಭಾಗ್ಯವಂತರು’ ಚಿತ್ರದ ಬಗ್ಗೆ ನಿಮಗೆಲ್ಲ ಗೊತ್ತೆ ಇದೆ. 1977ರಲ್ಲಿ ತೆರೆಕಂಡು ಅಂದಿನ ಕಾಲಕ್ಕೆ ಸೂಪರ್‌ ಹಿಟ್‌ ಆಗಿದ್ದ, “ಭಾಗ್ಯವಂತರು’ ಚಿತ್ರ ಈಗ ಮತ್ತೆ ಮರು ಬಿಡುಗಡೆಯ ಭಾಗ್ಯ ಪಡೆಯುತ್ತಿದೆ.

ಹೌದು, ನಟ ಕಂ ನಿರ್ಮಾಪಕ ದ್ವಾರಕೀಶ್‌ ನಿರ್ಮಾಣದಲ್ಲಿ ಮತ್ತು ಹಿರಿಯ ನಿರ್ದೇಶಕ ಭಾರ್ಗವ ನಿರ್ದೇಶನದಲ್ಲಿ ಮೂಡಿಬಂದಿದ್ದ “ಭಾಗ್ಯವಂತರು’ ಚಿತ್ರ, ಸುಮಾರು ನಾಲ್ಕೂವರೆ ದಶಕದ ಬಳಿಕ ಹೊಸ ಹೊಳಪಿನಲ್ಲಿ ತೆರೆಕಾಣುತ್ತಿದೆ. ಈಗಾಗಲೇ “ಭಾಗ್ಯವಂತರು’ ಚಿತ್ರಕ್ಕೆ ಡಿ. ಐ, 7.1 ಟ್ರಾಫಿಕ್‌ ಸೇರಿದಂತೆ ಅನೇಕ ನವೀನ ತಂತ್ರಜ್ಞಾನವನ್ನು ಅಳವಡಿಸಲಾಗಿದ್ದು, ವಿತರಕ ಮುನಿರಾಜು ಇದೇ ನವೆಂಬರ್‌ ತಿಂಗಳಿನಲ್ಲಿ ನವೀನ ಶೈಲಿಯಲ್ಲಿ ಚಿತ್ರವನ್ನು ಮರು ಬಿಡುಗಡೆ ಮಾಡುತ್ತಿದ್ದಾರೆ.

ಇನ್ನು “ಭಾಗ್ಯವಂತರು’ ಚಿತ್ರ ಮರು ಬಿಡುಗಡೆಯಾಗುತ್ತಿರುವುದರ ಬಗ್ಗೆ ಮಾತನಾಡುವ ಹಿರಿಯ ನಿರ್ದೇಶಕ ಭಾರ್ಗವ, “ರಾಜಕುಮಾರ್‌ ನಟಿಸಿದ್ದ “ಬಬ್ರುವಾಹನ’, “ನಾ ನಿನ್ನ ಮರೆಯಲಾರೆ’, “ಜಗ ಮೆಚ್ಚಿದ ಮಗ’ ಸೇರಿದಂತೆ ಅನೇಕ ಚಿತ್ರಗಳಿಗೆ ಸಿನಿಮಾಗಳಿಗೆ ನಿರ್ದೇಶನ ಮಾಡಿ¨ªೆ. ಹಾಗಾಗಿ ನಮ್ಮಿಬ್ಬರ ನಡುವೆ ವಿಶೇಷ ಪ್ರೀತಿಯಿತ್ತು. ನಿರ್ಮಾಪಕ ದ್ವಾರಕೀಶ್‌ ಹಾಗೂ ರಾಜಕುಮಾರ್‌ ಇಬ್ಬರೂ ನೀವೆ ಈ ಚಿತ್ರ ನಿರ್ದೇಶನ ಮಾಡಿ ಎಂದು ಹೇಳಿದ್ದರಿಂದ, ನನ್ನ ಮೊದಲ ನಿರ್ದೇಶನದ ಸಿನಿಮಾ ರಾಜಕುಮಾರ್‌ ಅವರೊಂದಿಗೆ ಮಾಡುವಂತಾಯ್ತು.

ಇದನ್ನೂ ಓದಿ:- ಅಕ್ರಮ ಚಟುವಟಿಕೆಗಳಿಗೆ ಕಡಿವಾಣ

44ವರ್ಷಗಳ ಹಿಂದೆ ನಾನು ನಿರ್ದೇಶಿಸಿದ್ದ ಮೊದಲ ಸಿನಿಮಾವೇ ಸೂಪರ್‌ ಹಿಟ್‌ ಆಯಿತು. ಈಗ ಅದೇ ಸಿನಿಮಾ ಹೊಸ ತಂತ್ರಜ್ಞಾನದಲ್ಲಿ ರಿಲೀಸ್‌ ಆಗುತ್ತಿರುವುದು ಖುಷಿಯಾಗುತ್ತಿದೆ’ ಎನ್ನುತ್ತಾರೆ. ಸುಮಾರು ನಾಲ್ಕು ದಶಕಗಳಿಂದ ಕನ್ನಡ ಚಿತ್ರರಂಗದ ಜೊತೆ ನಂಟು ಹೊಂದಿರುವ “ವಜ್ರೇಶ್ವರಿ ಕಂಬೈನ್ಸ್‌’ ಸಂಸ್ಥೆಯಲ್ಲಿ ಕೆಲಸ ಮಾಡಿದ್ದ, ವಿತರಕನಾಗಿ ಗುರುತಿಸಿಕೊಂಡಿರುವ ಮುನಿರಾಜು “ಭಾಗ್ಯವಂತರು’ ಚಿತ್ರವನ್ನು ರೀ-ರಿಲೀಸ್‌ ಮಾಡುತ್ತಿದ್ದಾರೆ. ಈಗಾಗಲೇ ರಾಜಕುಮಾರ್‌ ಅಭಿನಯದ “ಆಪರೇಷನ್‌ ಡೈಮಂಡ್‌ ರಾಕೇಟ್‌’, “ನಾನೊಬ್ಬ ಕಳ್ಳ’ ಹೀಗೆ ಹಲವು ಚಿತ್ರಗಳನ್ನು ಮರು ಬಿಡುಗಡೆ ಮಾಡಿ ಯಶಸ್ವಿಯಾಗಿರುವ ಮುನಿರಾಜು ಈಗ “ಭಾಗ್ಯವಂತರು’ ಚಿತ್ರವನ್ನು ಸುಮಾರು 150ಕ್ಕೂ ಹೆಚ್ಚಿನ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು ಯೋಜನೆ ಹಾಕಿಕೊಂಡಿದ್ದಾರೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.