ಕನ್ನಡ ಪುಸ್ತಕಗಳ ಓದುಗರು ಹೆಚ್ಚಬೇಕು: ನಿಸಾರ್‌ ಅಹಮದ್‌


Team Udayavani, Apr 24, 2019, 3:45 AM IST

kannada-odu

ಬೆಂಗಳೂರು: ಕನ್ನಡ ಪುಸ್ತಕ ಓದುಗರ ಸಂಖ್ಯೆ ಏರಿಕೆಯಾದರೆ ಉತ್ಕೃಷ್ಟ ಕೃತಿಗಳು ಅಕ್ಷರ ಲೋಕಕ್ಕೆ ಬರಲು ಸಾಧ್ಯವಿದೆ ಎಂದು ಕವಿ ಪ್ರೊ.ಕೆ.ಎಸ್‌.ನಿಸಾರ್‌ ಅಹಮದ್‌ ತಿಳಿಸಿದರು. ವಿಶ್ವ ಪುಸ್ತಕ ದಿನದ ಅಂಗವಾಗಿ ಸಪ್ನ ಬುಕ್‌ ಹೌಸ್‌ನಿಂದ ಮಂಗಳವಾರ ಹಮ್ಮಿಕೊಳ್ಳಲಾದ ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕನ್ನಡ ಸಾಹಿತ್ಯ ಲೋಕಕ್ಕೆ ಹಲವು ಮೂಲಗಳಿಂದ ಪುಸ್ತಕಗಳು ಹರಿದುಬರುತ್ತಿವೆ. ಆದರೆ, ಓದುಗರ ಸಂಖ್ಯೆ ಕುಸಿಯುತ್ತಿರುವುದು ವಿಷಾದನೀಯ ಸಂಗತಿ. ಪುಸ್ತಕದ ಹೊರಗಿನ ವಿನ್ಯಾಸದ ಬಗ್ಗೆ ಚರ್ಚೆ ಮಾಡುತ್ತಾರೆ ಹೊರತು ಅದರೊಳಗೆ ಅಡಗಿರುವ ವಿಚಾರಗಳ ಬಗ್ಗೆ ಮಾತನಾಡುವುದಿಲ್ಲ. ಕೇವಲ ಪುಸ್ತಕಗಳು ಸ್ಪರ್ಶಿಸಲಷ್ಟೇ ಸೀಮಿತವಲ್ಲ. ಅವುಗಳನ್ನು ತೆರೆದು ಓದಿ, ಮನ ತುಂಬಿಕೊಳ್ಳಬೇಕು ಎಂದು ಹೇಳಿದರು.

ರಾಜ್ಯದಲ್ಲಿ ಸಾಹಿತ್ಯಾಸಕ್ತರ ಸಂಖ್ಯೆ ಹೆಚ್ಚಾದಂತೆ ಪುಸ್ತಕ ಮಳಿಗೆಗಗಳು ಹೆಚ್ಚು ಹೆಚ್ಚು ತಲೆ ಎತ್ತಲಿವೆ. ಜ್ಞಾನ ಭಂಡಾರ ಹೆಚ್ಚಿಸಿಕೊಳ್ಳಲು ಪುಸ್ತಕಗಳಿಗೆ ಮೊರೆ ಹೋಗಬೇಕು. ಪ್ರತಿಯೊಬ್ಬರಿಗೆ ಪುಸ್ತಕಗಳಿಂದ ಅಕ್ಷರ ಜ್ಞಾನ ಮತ್ತು ಹೊಸ ಆಲೋಚನೆ ಮೂಡಲು ಸಾಧ್ಯವಿದೆ. ಓದುವಿನ ಹಸಿವು ಹೆಚ್ಚಾಗಬೇಕು ಎಂದು ಅಭಿಪ್ರಾಯಪಟ್ಟರು.

ಕನ್ನಡ ಪುಸ್ತಕ ಓದುವವರು ದೂರವಾಗುತ್ತಿದ್ದಾರೆ. ಕಂಪ್ಯೂಟರ್‌ ಮತ್ತು ಆನ್‌ಲೈನ್‌ನಲ್ಲಿ ಕಳೆದು ಹೋಗುತ್ತಿರುವವರ ಸಂಖ್ಯೆ ಹೆಚ್ಚಾಗಿರುವ ಇಂಥ ದಿನಗಳಲ್ಲಿ ಸಪ್ನ ಬುಕ್‌ ಹೌಸ್‌ನವರು ಹಲವು ಸವಾಲುಗಳ ಮಧ್ಯೆ ಪುಸ್ತಕೋದ್ಯಮವನ್ನು ಯಶಸ್ವಿಯಾಗಿ ನಡೆಸುತ್ತ ಬಂದಿರುವುದು ಶಾಘ್ಲನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಚುಟುಕು ಕವಿ ಎಚ್‌.ಡುಂಡಿರಾಜ್‌ ಮಾತನಾಡಿ, ಅಂದಿನ ಕಾಲದಲ್ಲಿ ನಾವೇ ಪುಸ್ತಕದ ಅಂಗಡಿಗೆ ಹೋಗಿ ಖರೀದಿಸಬೇಕಿತ್ತು. ಇಂದು ಮನೆ ಬಾಗಿಲಿಗೆ ಪುಸ್ತಕಗಳನ್ನು ಮಾರುವವರು ಬಂದರೂ ಕೊಳ್ಳುವವರಿಲ್ಲ. ನಮ್ಮ ಓದಿನಿಂದ ಬರವಣಿಗೆ ಪ್ರಬುದ್ಧವಾಗುತ್ತದೆ. ಕನ್ನಡ ಪುಸ್ತಕಗಳನ್ನು ಓದುವಂತೆ ಯುವ ಪೀಳಿಗೆಯನ್ನು ಪ್ರೇರೆಪಿಸಬೇಕು ಎಂದು ಹೇಳಿದರು.

ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ರವಿ ಡಿ.ಚನ್ನಣ್ಣನವರ್‌ ಮಾತನಾಡಿ, ನಮ್ಮ ಬದುಕಿನಲ್ಲಿ ಏನಾದರೂ ಬದಲಾವಣೆ ಕಂಡುಕೊಳ್ಳಬೇಕಾದರೆ ಪುಸ್ತಕಗಳಿಗೆ ಮೊರೆ ಹೋಗಬೇಕು. ಪ್ರತಿಯೊಂದು ಪುಸ್ತಕಗಳೂ ಪ್ರಕೃತಿ, ಸಮಾನತೆ, ಸಮಾಜ, ಜೀವನ ಸಮೃದ್ಧಿಯಾಧಾರಿತ ಅಂಶಗಳಿಂದ ಕೂಡಿರುತ್ತವೆ. ಉತ್ತಮ ಬದುಕು ರೂಪಿಸಿಕೊಳ್ಳಲು ಪುಸ್ತಕಗಳು ಆಧಾರ ಎಂದು ತಿಳಿಸಿದರು.

ಡಾ.ಕೆ.ಶಿವರಾಮ ಕಾರಂತ ರಚನೆಯ ಚಾಲುಕ್ಯ ವಾಸ್ತು ಶಿಲ್ಪ, ಡಾ.ಸಿ.ಆರ್‌.ಚಂದ್ರಶೇಖರ್‌ ಅವರ ಮಹಿಳೆಯರ ಮನೋವ್ಯಾಕುಲತೆ, ಎ.ಎಸ್‌.ಕುಮಾರಸ್ವಾಮಿ ರಚನೆಯ ಹನಿ ನೀರಾವರಿ, ಡಾ.ಎಸ್‌.ಶಿವರಾಜಪ್ಪ ಅವರ ಕಲ್ಹಣನ ರಾಜ ತರಂಗಿಣಿ, ಡಾ.ಎಸ್‌.ಎಸ್‌. ಮಾಲಿನಿ ರಚನೆಯ ವೈದ್ಯಕೀಯ ವೈರುಧ್ಯಗಳು ಹಾಗೂ ಅನುವಂಶೀಯ ಕಾಯಿಲೆಗಳು ಎಂಬ ಕೃತಿಗಳನ್ನು ಬಿಡುಗಡೆಗೊಳಿಸಲಾಯಿತು.

ಟಾಪ್ ನ್ಯೂಸ್

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.