ಜೈಲಿಗೆ ಹೋದರೂ ಹೆದರೋಲ್ಲ


Team Udayavani, Sep 20, 2018, 6:00 AM IST

19bnp-33.jpg

ಬೆಂಗಳೂರು: “ಬಿಜೆಪಿಯವರು ನನ್ನನ್ನು ಜೈಲಿಗೆ ಕಳುಹಿಸಿ ರಾಜ್ಯದಲ್ಲಿ ಸರ್ಕಾರ ರಚಿಸುವ ಹಗಲು ಕನಸು ಕಾಣುತ್ತಿದ್ದಾರೆ. ನಾನು ಜೈಲಿಗೆ ಹೋದರೂ ಅವರಿಗೆ ಸರ್ಕಾರ ರಚಿಸಲು ಬಿಡುವುದಿಲ್ಲ” ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ತಿರುಗೇಟು ನೀಡಿದ್ದಾರೆ.

ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್‌ ಪಾತ್ರಾ ಆರೋಪದ ಮಾಡಿದ ಬೆನ್ನಲ್ಲೇ ಆಸ್ಪತ್ರೆಯಿಂದಲೇ ನೇರವಾಗಿ ಬಂದು ಪತ್ರಿಕಾಗೋಷ್ಠಿ ನಡೆಸಿದ ಅವರು, “ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡೆಸಿಕೊಳ್ಳುತ್ತಿರುವುದನ್ನು ಬಿಜೆಪಿ ಒಪ್ಪಿಕೊಂಡಂತಾಗಿದೆ” ಎಂದರು. ಅಲ್ಲದೆ, “”ನಾನು ಪಕ್ಷ ಹಾಗೂ ಯಾವುದೇ ನಾಯಕರಿಗೆ ಹಣ ನೀಡಿಲ್ಲ. ಬಿಜೆಪಿಯವರು ರಾಹುಲ್‌ ಗಾಂಧಿ ಅವರಿಂದ ಉತ್ತರ ಬಯಸುತ್ತಿದ್ದಾರೆ. ಅವರಿಗೆ ಉತ್ತರಿಸಲು ನಾನೊಬ್ಬನೇ ಸಾಕು. ಈ ಬಗ್ಗೆ ನಾನು ದೆಹಲಿಯಲ್ಲಿಯೂ ಪತ್ರಿಕಾಗೋಷ್ಠಿ ನಡೆಸಿ ಉತ್ತರಿಸುತ್ತೇನೆ” ಎಂದು ಹೇಳಿದರು.

“ಗುಜರಾತ್‌ ರಾಜ್ಯಸಭೆ ಚುನಾವಣೆಯಲ್ಲಿ ಶಾಸಕರಿಗೆ ರಕ್ಷಣೆ ನೀಡಿದ್ದರಿಂದಲೇ ನಾನು ಹಾಗೂ ನನ್ನ ಆಪ್ತರಿಗೆ ಸೇರಿದ 82 ಸ್ಥಳಗಳಲ್ಲಿ ಏಕಕಾಲಕ್ಕೆ ಆದಾಯ ತೆರಿಗೆ ಇಲಾಖೆ ದಾಳಿ ಮಾಡಿ ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿದೆ. ಎಲ್ಲದಕ್ಕೂ ನಾನು ದಾಖಲೆ ಒದಗಿಸಿದ್ದೇನೆ. ಆದರೆ, ಜಾರಿ ನಿರ್ದೇಶನಾಲಯ ನನ್ನ ವಿರುದ್ಧ ಈಗ ಎಫ್ಐಆರ್‌ ದಾಖಲಿಸಿದೆ ಎಂದು ಹೇಳಲಾಗುತ್ತಿದೆ. ಪ್ರಕರಣ ದಾಖಲಿಸಲು ಒಂದು ವರ್ಷ ಸಮಯ ಬೇಕಿತ್ತೇ?” ಎಂದು ಪ್ರಶ್ನಿಸಿದರು.

ಎಲ್ಲಿಯೂ ಓಡಿಹೋಗಲ್ಲ:
“ಜಾರಿ ನಿರ್ದೇಶನಾಲಯದಿಂದ ನನಗೆ ಇದುವರೆಗೂ ಯಾವುದೇ ನೊಟೀಸ್‌ ಬಂದಿಲ್ಲ. ನನಗೆ ನೊಟೀಸ್‌ ಬಂದರೆ ಸೂಕ್ತ ಉತ್ತರ ಕೊಡುತ್ತೇನೆ. ಅವರು ನನ್ನ ರಕ್ತ ಕೇಳಿದರೂ ಕೊಡುತ್ತೇನೆ. ಬಿಜೆಪಿ ನಾಯಕರು ಅನಗತ್ಯವಾಗಿ ನನ್ನ ಪಕ್ಷ ಹಾಗೂ ರಾಷ್ಟ್ರೀಯ ನಾಯಕರನ್ನು ಎಳೆದು ತರುತ್ತಿದ್ದಾರೆ. ಗೋವಿಂದ್‌ ರಾಜ್‌ ಡೈರಿ ವಿಷಯವನ್ನು ಈಗ ಪ್ರಸ್ತಾಪಿಸುತ್ತಿದ್ದಾರೆ. ಎಸ್‌ಜಿ, ಆರ್‌ಜಿ ಎಂದು ಹೆಸರುಗಳನ್ನು ಹೇಳುತ್ತಿದ್ದಾರೆ. ಎಲ್‌.ಕೆ. ಅಡ್ವಾಣಿ ಹಾಗೂ ಇತರರ ಡೈರಿ ಪ್ರಕರಣದಲ್ಲಿ ಕೋರ್ಟ್‌ ಏನು ಆದೇಶ ನೀಡಿದೆಯೋ ಅದೇ ಕಾನೂನು ನನ್ನನ್ನು ರಕ್ಷಿಸುವುದಿಲ್ಲವೇ? ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಎರಡು ಮೂರು ದಿನದಲ್ಲಿ ನನ್ನನ್ನು ಜೈಲಿಗೆ ಕಳುಹಿಸಿ, ಸರ್ಕಾರ ರಚಿಸುವುದಾಗಿ ಹೇಳಿದ್ದಾರೆ. ರಾಜಕೀಯ ಯಾರಿಗೂ ಶಾಸ್ವತವಲ್ಲ. ನನ್ನ ಜೈಲಿಗೆ ಕಳುಹಿಸಿದರೂ ಎಲ್ಲವನ್ನೂ ಎದುರಿಸಲು ಸಿದ್ದನಿದ್ದೇನೆ. ನಾನು ಎಲ್ಲಿಯೂ ಓಡಿ ಹೋಗುವುದಿಲ್ಲ” ಎಂದು ಹೇಳಿದರು.

ಪತ್ತೆಯಾಗಿದ್ದು 41 ಲಕ್ಷ ರೂ. ಮಾತ್ರ:
“ದೆಹಲಿ ನಿವಾಸದಲ್ಲಿ ಕೇವಲ 41 ಲಕ್ಷ ರೂಪಾಯಿ ಪತ್ತೆಯಾಗಿದೆ. ಅದಕ್ಕೆ ನಾನು ದಾಖಲೆ ನೀಡಿದ್ದೇನೆ. ನನ್ನ ಆಪ್ತರು ಹಾಗೂ ಸ್ನೇಹಿತರ ಮನೆಗಳಲ್ಲಿ ದೊರೆತ ಹಣ ಹಾಗೂ ದಾಖಲೆಗಳು ನನಗೆ ಸೇರಿದ್ದು ಎಂದು ಒತ್ತಾಯ ಪೂರ್ವಕವಾಗಿ ಅವರಿಂದ ಹೇಳಿಸಿದ್ದಾರೆ” ಎಂದು ಆರೋಪಿಸಿದರು. ಕರ್ನಾಟಕ “”ಭವನ ಸಹಾಯಕನ ಬಳಿ ದೊರೆತಿರುವ ಹಣ ಯಾರದ್ದು ಎಂದು ನನಗೆ ಗೊತ್ತಿಲ್ಲ. ಅದಕ್ಕೂ ನನಗೂ ಸಂಬಂಧವಿಲ್ಲ” ಎಂದು ಸ್ಪಷ್ಟಪಡಿಸಿದರು.

“ನಾನು ಯಾವುದೇ ಹವಾಲಾ ವ್ಯವಹಾರ ನಡೆಸಿಲ್ಲ. ಕೊಲೆ, ದರೋಡೆ ಮಾಡಿಲ್ಲ. ಜೈಲಿನಲ್ಲಿದವರು ಮುಖ್ಯಮಂತ್ರಿಯಾಗಿದ್ದಾರೆ. ರಾಷ್ಟ್ರೀಯ ಪಕ್ಷದ ಅಧ್ಯಕ್ಷರಾಗಿದ್ದಾರೆ. ಹೀಗಾಗಿ ನನಗೆ ಬಂಧನದ ಭಯವಿಲ್ಲ. ನಾನು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವ ಅಗತ್ಯವೂ ಇಲ್ಲ. ನಿರೀಕ್ಷಣಾ ಜಾಮೀನು ಪಡೆಯುವುದಿಲ್ಲ. ಬಿಜೆಪಿ ನಾಯಕರೇ ನ್ಯಾಯಾಧೀಶರಾಗಿದ್ದಾರೆ. ನ್ಯಾಯಾಲಯದ ಮೇಲೆ ಪ್ರಭಾವ ಬೀರಲು ಮಾಧ್ಯಮಗಳ ಮೂಲಕ ಪ್ರಯತ್ನ ನಡೆಸಿದ್ದಾರೆ. ನನ್ನನ್ನು ಬಂಧಿಸಲು ಪ್ರಯತ್ನಿಸುತ್ತಿರುವ ಬಗ್ಗೆ ಬಿಜೆಪಿ ನಾಯಕರೇ ನನ್ನ ಸಹೋದರನ ಮುಂದೆ ಹೇಳಿದ್ದಾರೆ” ಎಂದು ಆರೋಪಿಸಿದರು.

“ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಭದ್ರಾ ಮೇಲ್ದಂಡೆ ಯೋಜನೆಯಲ್ಲಿ 1 ಕೋಟಿ 36 ಲಕ್ಷ ರೂ. ಚೆಕ್‌ ಮೂಲಕ ಲಂಚ ಪಡೆದಿದ್ದಾರೆ ಎಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳೇ ದಾಖಲೆ ಬಿಡುಗಡೆ ಮಾಡಿದ್ದಾರೆ. ನಾನು ಯಾವುದೇ ರೀತಿಯ ಅವ್ಯವಹಾರ ಮಾಡಿಲ್ಲ. ನನ್ನ ಕೃಷಿ ಹಾಗೂ ವ್ಯಾಪಾರದಿಂದ ಬಂದ ಆದಾಯಕ್ಕೆ ತೆರಿಗೆ ಕಟ್ಟಿದ್ದೇನೆ” ಎಂದರು.

ನನ್ನನ್ನು ಟಾರ್ಗೆಟ್‌ ಮಾಡಿದ್ದಾರೆ. ಜೈಲಿಗೆ ಹಾಕಿದರೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಆಗಲು ಬಿಡುವುದಿಲ್ಲ. ನನ್ನ ವಿರುದ್ಧ ಏನೇನು ನಡೆಯುತ್ತಿದೆ ಎಂದು ಸಿಎಂ ಕುಮಾರಸ್ವಾಮಿ ಅವರಿಗೂ ಗೊತ್ತಿದೆ. ಇದು ನಮ್ಮ ಪಕ್ಷದ ವಿಚಾರ ಹೀಗಾಗಿ ಅವರನ್ನು ಇದರಲ್ಲಿ ಎಳೆದು ತರುವುದಿಲ್ಲ.
– ಡಿ.ಕೆ. ಶಿವಕುಮಾರ್‌, ಸಚಿವ

ಆರೋಗ್ಯ ವಿಚಾರಿಸಿದ ಸೋಮಣ್ಣ
ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ವಿ.ಸೋಮಣ್ಣ ಅವರು ಡಿ.ಕೆ.ಶಿವಕುಮಾರ್‌ ಆರೋಗ್ಯ ವಿಚಾರಿಸಿದ್ದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಬುಧವಾರ ರಾಜ್ಯ ಬಿಜೆಪಿ ವಿಶೇಷ ಸಭೆಯಲ್ಲಿ ಭಾಗವಹಿಸಿದ ನಂತರ ನೇರವಾಗಿ ಅಪೋಲೋ ಆಸ್ಪತ್ರೆಗೆ ತೆರಳಿದ ಸೋಮಣ್ಣ ಅವರು ಶಿವಕುಮಾರ್‌ ಅವರ ಆರೋಗ್ಯ ವಿಚಾರಿಸಿದರು. ಬಿಜೆಪಿಯ ಕೆಲವು ಶಾಸಕರು ಕಾಂಗ್ರೆಸ್‌ ನಾಯಕರ ಸಂಪರ್ಕದಲ್ಲಿದ್ದು, ಆಪರೇಷನ್‌ ಹಸ್ತ ಕಾರ್ಯಾಚರಣೆ ನಡೆಯುತ್ತಿದೆ. ವಿ.ಸೋಮಣ್ಣ  ಸಹ ಲಿಸ್ಟ್‌ನಲ್ಲಿದ್ದಾರೆ ಎಂಬ ಮಾತುಗಳ ನಡುವೆ ಈ ಭೇಟಿ ನಾನಾ ವಾಖ್ಯಾನಗಳಿಗೆ ಕಾರಣವಾಗಿದೆ. ಆದರೆ, ಇದೊಂದು ಸೌಜನ್ಯ ಭೇಟಿ. ರಾಜಕಾರಣ ಬೇರೆ, ವೈಯಕ್ತಿಕ ಸಂಬಂಧ ಬೇರೆ. ಅನಾರೋಗ್ಯದಿಂದ ಆಸ್ಪತ್ರೆಯಲ್ಲಿದ್ದ ಕಾರಣ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ ಎಂದು ಸೋಮಣ್ಣ ತಿಳಿಸಿದ್ದಾರೆ.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.