ಜಯನಗರ ಮತದಾನಕ್ಕೆ ಸಕಲ ಸಿದ್ಧತೆ


Team Udayavani, Jun 8, 2018, 11:31 AM IST

jayanagara.jpg

ಬೆಂಗಳೂರು: ಜಯನಗರ ವಿಧಾನಸಭೆ  ಕ್ಷೇತ್ರದಲ್ಲಿ ಜೂ.11ರಂದು ಮತದಾನ ನಡೆಯಲಿದ್ದು, ಅದಕ್ಕಾಗಿ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಶಾಂತಿಯುತ, ನಿಷ್ಪಕ್ಷಪಾತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಲು ಚುನಾವಣಾ ಆಯೋಗ ಬದ್ಧವಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿಯೂ ಆದ ಬಿಬಿಎಂಪಿ ಆಯುಕ್ತ ಮಹೇಶ್ವರರಾವ್‌ ತಿಳಿಸಿದ್ದಾರೆ.

ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿಯೂ ಆಗಿದ್ದ ಹಾಲಿ ಶಾಸಕ ಬಿ.ಎನ್‌. ವಿಜಯಕುಮಾರ್‌ ಅವರ ಹಠಾತ್‌ ನಿಧನದ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಲಾಗಿತ್ತು. ಈಗ ಜೂ.11ರಂದು ಮತದಾನ ನಡೆಯಲಿದೆ.

ಚುನಾವಣಾ ಸಿದ್ಧತೆಗಳ ಕುರಿತು ಮಾಹಿತಿ ನೀಡಲು ಗುರುವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ವಿವರಗಳನ್ನು ನೀಡಿದ ಅವರು, ಜೂ.11ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ಮತದಾನ ನಡೆಯಲಿದೆ. ಮತದಾನಕ್ಕೆ ಕ್ಷೇತ್ರದ 7 ವಾರ್ಡುಗಳಲ್ಲಿ ಒಟ್ಟು 216 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.ಇದರಲ್ಲಿ ಪೈಕಿ 5 ಪಿಂಕ್‌ (ಸಖೀ) ಮತಗಟ್ಟೆಗಳಿದ್ದು, ಅವುಗಳಿಗೆ ಮಹಿಳಾ ಸಿಬ್ಬಂದಿಗಳನ್ನು ಮಾತ್ರ ನಿಯೋಜಿಸಲಾಗಿದೆ.

ಜೂ.13ರಂದು ಬೆಳಗ್ಗೆ 8 ಗಂಟೆಯಿಂದ ಜಯನಗರ 4ನೇ ಬ್ಲಾಕ್‌ನ ಎನ್‌ಎಂಕೆಆರ್‌ವಿ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ತಿಳಿಸಿದರು. ಕ್ಷೇತ್ರದಲ್ಲಿ 1,02,668 ಪುರುಷರು ಹಾಗೂ 1,00,500 ಮಹಿಳೆಯರು ಸೇರಿ ಒಟ್ಟು 2,03,184 ಮತದಾರರಿದ್ದಾರೆ. ಒಟ್ಟು 19 ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದು, ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ನಿಂದ ತಲಾ ಒಬ್ಬರು ಅಭ್ಯರ್ಥಿಗಳು,

ಇತರೆ ನೋಂದಾಯಿತ ಮಾನ್ಯತೆ ಪಡೆಯದ ಪಕ್ಷಗಳಿಂದ ಏಳು ಜನ ಮತ್ತು 9 ಪಕ್ಷೇತರರು ಸ್ಪರ್ಧಿಸಿದ್ದಾರೆ. ಮತದಾನದ ದಿನದಂದು 1,400 ಮತಗಟ್ಟೆ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. 31 ಬಿಎಂಟಿಸಿ ಬಸ್‌, 7 ಮಿನಿ ಬಸ್‌, 2 ಟಾಟಾ ಸುಮೋ, 10 ಟೆಂಪೋ ಟ್ರಾವೆಲರ್‌ಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು. 

ಜೂ.9ರ ಸಂಜೆ 6ಕ್ಕೆ ಚುನಾವಣಾ ಪ್ರಚಾರ ಕೊನೆಗೊಳ್ಳಲಿದ್ದು, ಯಾವುದೇ ಸಾರ್ವಜನಿಕ ಸಭೆ, 5 ಜನಕ್ಕಿಂತ ಹೆಚ್ಚು ಜನರು ಗುಂಪಾಗಿ ನಿಲ್ಲುವಂತಿಲ್ಲ. ಮನೆ ಮನೆ ಪ್ರಚಾರ ನಡೆಸಬಹುದು. ಕ್ಷೇತ್ರದ ಮತದಾರರನ್ನು ಹೊರತುಪಡಿಸಿ ಇತರರು ಕ್ಷೇತ್ರ ಬಿಟ್ಟು ಹೊರಡಬೇಕು. ಜೂ.9ರ ಸಂಜೆ 5ರಿಂದ ಜೂ.11ರ ಮಧ್ಯರಾತ್ರಿ 12ರವರೆಗೆ ಮತ್ತು ಮತ ಎಣಿಕೆ ದಿನವಾದ ಜೂ.13ರ ಬೆಳಗ್ಗೆ 6ರಿಂದ ಮಧ್ಯರಾತ್ರಿ 12ರವರೆಗೆ ಮಧ್ಯಮಾರಾಟ ನಿಷೇಧಿಸಲಾಗಿದೆ.

216 ಮತಗಟ್ಟೆಗಳಿಗೂ ಅಗತ್ಯ ಇವಿಎಂ ಮತ್ತು ವಿವಿಪ್ಯಾಟ್‌ ಯಂತ್ರಗಳು ಪೂರ್ವವಾಗಿ ಲಭ್ಯವಿದ್ದು, ಎಲ್ಲವುಗಳನ್ನು ಸಿದ್ಧಪಡಿಸಲಾಗಿದೆ. 50 ಮತಗಟ್ಟೆಗಳಿಗೆ ವೆಬ್‌ಕಾಸ್ಟಿಕಂಗ್‌ ಸೌಲಭ್ಯ ಒದಗಿಸಲಾಗಿದೆ. 15 ಮತದಾನ ಸ್ಥಳಗಳಲ್ಲಿ ವೀಡಿಯೋಗ್ರಫಿ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ವಿವರಿಸಿದರು. 

ಬಿಗಿ ಬಂದೋಬಸ್ತ್: ಶಾಂತಿಯುತ ಮತದಾನ ಮತ್ತು ಸುಸೂತ್ರ ಮತ ಎಣಿಕೆ ಕಾರ್ಯಕ್ಕೆ ಸೂಕ್ತ ಪೊಲೀಸ್‌ ಬಂದೋಬಸ್ತ್ ಕೈಗೊಳ್ಳಲಾಗಿದೆ. ಕ್ಷೇತ್ರದ ವಿವಿಧ ಸ್ಥಳಗಳಲ್ಲಿ 10 ಚೆಕ್‌ಪೋಸ್ಟ್‌ಗಳಿದ್ದು, 30 ತಂಡಗಳಲ್ಲಿ ಹಾಗೂ 23 ಫ್ಲೈಯಿಂಗ್‌ ಸ್ಕ್ವಾಡ್‌ ತಂಡಗಳು, 4 ವಿಡಿಯೋ ಕಣ್ಗಾವಲು ತಂಡಗಳು ದಿನದ 24 ಗಂಟೆ ಪಾಳಿಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಅಗತ್ಯ ಇರುವ ಕಡೆ ಪೊಲೀಸರು ಚುನಾವಣಾ ಸಿಬ್ಬಂದಿಗೆ ಸಹಕಾರ ನೀಡುತ್ತಿದ್ದಾರೆ.

ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಕ್ಷೇತ್ರದಲ್ಲಿ ನಗದು ಸೇರಿ ಒಟ್ಟು 30.82 ಲಕ್ಷ ರೂ. ಜಪ್ತಿ ಮಾಡಿ, 14 ಎಫ್ಐಆರ್‌ ದಾಖಲಿಸಲಾಗಿದೆ. ಮತದಾರರಿಗೆ ಆಸೆ, ಆಮಿಷ, ಹಣ ಹಂಚಿಕೆಯಂತಹ ಅಕ್ರಮಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ. ಭದ್ರತೆಗಾಗಿ ವಿಶೇಷ ಭದ್ರತಾ ತುಕಡಿಗಳ ಜತೆಗೆ ಸ್ಥಳೀಯ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಎಂದು ಇದೇ ವೇಳೆ ನಗರ ಪೊಲೀಸ್‌ ಆಯುಕ್ತ ಸುನೀಲ್‌ ಕುಮಾರ್‌ ತಿಳಿಸಿದರು.   

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.