ರಿಯಲ್‌ ಎಸ್ಟೇಟ್‌ ಕಾಯ್ದೆ ಜಾರಿ ವಿಳಂಬಕ್ಕೆ ಒತ್ತಡ?


Team Udayavani, Apr 18, 2017, 12:18 PM IST

real-estste.jpg

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ರಿಯಲ್‌ ಎಸ್ಟೇಟ್‌ (ನಿಯಂತ್ರಣ ಮತ್ತು ಅಭಿವೃದ್ಧಿ) ಕಾಯ್ದೆಯಂತೆ ರಾಜ್ಯ ಸರ್ಕಾರ ಏ.30ರೊಳಗೆ ಕಾಯ್ದೆ ಜಾರಿಗೊಳಿಸುವ ಸಂಬಂಧ ಅಂತಿಮ ಅಧಿಸೂಚನೆ ಹೊರಡಿಸಬೇಕಿದೆ.

ಕಾಯ್ದೆ ಜಾರಿಯನ್ನು ಸ್ವಾಗತಿಸಿರುವ ಪ್ರತಿಷ್ಠಿತ ಬಿಲ್ಡರ್‌ಗಳು, ರಿಯಲ್‌ ಎಸ್ಟೇಟ್‌ ಸಂಸ್ಥೆಗಳು ಕೆಲ ಆಕ್ಷೇಪಣೆಗಳೊಂದಿಗೆ ತಕ್ಷಣ ನಿಯಮಾವಳಿಗಳನ್ನು ಅಂತಿಮಗೊಳಿಸಿ ಅಧಿಸೂಚನೆ ಹೊರಡಿಸಬೇಕು ಎಂಬ ಆಶಯ ವ್ಯಕ್ತಪಡಿಸಿವೆ. ಕಾಯ್ದೆ ಜಾರಿಯಾದರೆ ಪಾರದರ್ಶಕವಾಗಿ ವ್ಯವಹಾರ ನಡೆಸುವವರು ಹಾಗೂ ಸಾರ್ವಜನಿಕರು ಸಹ ನ್ಯಾಯಯುತ ಬೆಲೆಯಲ್ಲಿ ಸಕಾಲದಲ್ಲಿ ಫ್ಲ್ಯಾಟ್‌, ಮನೆಗಳನ್ನು ಕೊಳ್ಳಲು ಅನುಕೂಲವಾಗಲಿದೆ ಎಂಬ ಭಾವನೆಯೂ ವ್ಯಕ್ತವಾಗಿದೆ.

ಆದರೆ ರಿಯಲ್‌ ಎಸ್ಟೇಟ್‌, ಡೆವಲಪರ್‌ ವ್ಯವಹಾರದಲ್ಲಿ ತೊಡಗಿಸಿಕೊಂಡಿರುವ ಕೆಲ ಪ್ರಭಾವಿ ರಾಜಕಾರಣಿಗಳು ಕೇಂದ್ರದ ಕಾಯ್ದೆ ಪ್ರಕಾರ ಬಿಗಿ ನಿಯಮಾವಳಿ ರೂಪಿಸದೆ ಸಡಿಲಗೊಳಿಸುವಂತೆ ಒತ್ತಡ ಹೇರುತ್ತಿದ್ದಾರೆ ಎನ್ನಲಾಗುತ್ತಿದೆ. ಇದರಿಂದಾಗಿ ನವೆಂಬರ್‌ನಲ್ಲಿ ಕರಡು ನಿಯಮಾವಳಿಗಳನ್ನು ಪ್ರಕಟಿಸಿ ಆಕ್ಷೇಪಣೆ ಸ್ವೀಕಾರ ಪ್ರಕ್ರಿಯೆ ಮುಗಿದಿದ್ದರೂ ಅಂತಿಮ ಅಧಿಸೂಚನೆ ಹೊರಡಿಸದೆ ವಿಳಂಬ ಮಾಡಲಾಗುತ್ತಿದೆ ಎಂಬ ಮಾತುಗಳು ಕೇಳಿಬಂದಿವೆ.

ವಸತಿ ನಿರ್ಮಾಣ ಕಾರ್ಯಗಳಲ್ಲಿ ಯಾರು ಬೇಕಾದರೂ ತೊಡಗಿಸಿಕೊಳ್ಳಬಹುದಾಗಿದ್ದು, ತಮಗೆ ತೋಚಿದಂತೆ ವ್ಯವಹಾರ ನಡೆಸುತ್ತಿದ್ದಾರೆ. ಇದೀಗ ನಿಯಮಾವಳಿ ರೂಪಿಸಿ ಎಲ್ಲರಿಗೂ ಅನ್ವಯಿಸುವಂತೆ ಕಾಯ್ದೆ ರೂಪಿಸುತ್ತಿರುವುದು ಉತ್ತಮವಾಗಿದೆ ಎಂದು “ಕ್ರೆಡಾಯ್‌’ ಪ್ರಧಾನ ಕಾರ್ಯದರ್ಶಿ ಸುರೇಶ್‌ ಹರಿ ತಿಳಿಸಿದ್ದಾರೆ.

ಕ್ರೆಡಾಯ್‌ನಿಂದ ಹಲವು ಆಕ್ಷೇಪಣೆ: ಕಾಯ್ದೆ ಜಾರಿ ಸಂಬಂಧ ಪ್ರಕಟಿಸಿದ ಕರಡು ನಿಯಮಾವಳಿಗೆ ಕೆಲ ಆಕ್ಷೇಪಣೆ ಸಲ್ಲಿಸಲಾಗಿತ್ತು. ಮುಖ್ಯವಾಗಿ ಯೋಜನೆಯ ಪ್ರಗತಿ ಪ್ರಮಾಣಕ್ಕೆ ಅನುಗುಣವಾಗಿ ಬ್ಯಾಂಕ್‌ನಿಂದ ಹಣ ಡ್ರಾ ಮಾಡಿಕೊಳ್ಳಲು ಮೂರು ಏಜೆನ್ಸಿಗಳ ಅನುಮತಿ ಪಡೆಯಬೇಕೆಂಬ ಕೇಂದ್ರದ ನಿಯಮದ ಬದಲಿಗೆ ಒಂದು ನಿರ್ದಿಷ್ಟ ಸಂಸ್ಥೆಯ ಅನುಮತಿ ಪಡೆಯುವ ವ್ಯವಸ್ಥೆ ಜಾರಿಗೆ ತರಬೇಕು.

ಕಾಯ್ದೆ ಜಾರಿಯಾದ ನಂತರ ಆರಂಭವಾಗುವ ಯೋಜನೆಗಳಿಗೆ ನಿಯಮಾವಳಿ ಅನ್ವಯವಾಗುವಂತಿರಬೇಕು. ನಿರ್ದಿಷ್ಟ ವಿಸ್ತೀರ್ಣಕ್ಕಿಂತ ಹೆಚ್ಚಿನ ಪ್ರದೇಶದಲ್ಲಿ ನಿರ್ಮಾಣವಾಗುವ ಮಾರಾಟದ ವಸತಿ ಸಮುಚ್ಚಯಗಳಿಗಷ್ಟೇ ಕಾಯ್ದೆ ಅನ್ವಯಿಸುವ ಬದಲು, ಮಾರಾಟಕ್ಕಾಗಿ ನಿರ್ಮಾಣವಾಗುವ ಎಲ್ಲ ವಸತಿ ಯೋಜನೆಗಳಿಗೂ ಅನ್ವಯಿಸಬೇಕು ಎಂಬ ಆಕ್ಷೇಪಣೆಯನ್ನೂ ಸಲ್ಲಿಸಲಾಗಿದೆ ಎಂದು ಹೇಳಿದ್ದಾರೆ.

ಇನ್ನೊಂದೆಡೆ ಕೆಲ ಪ್ರಭಾವಿ ಜನಪ್ರತಿನಿಧಿಗಳೊಂದಿಗೆ ವ್ಯವಹಾರ ನಡೆಸುತ್ತಿರುವ ಡೆವಲಪರ್‌ಗಳು, ರಿಯಲ್‌ ಎಸ್ಟೇಟ್‌ ಸಂಸ್ಥೆಯವರು ಮೇ 1ರಿಂದ ಆರಂಭವಾಗುವ ವಸತಿ ಯೋಜನೆಗಳಿಗಷ್ಟೇ ಕಾಯ್ದೆಯ ನಿಯಮವಳಿ ಅನ್ವಯಿಸಬೇಕೆ ಹೊರತು ಹಾಲಿ ಯೋಜನೆಗಳಿಗೆ ಜಾರಿಗೊಳಿಸಬಾರದು. ಹಾಗೆಯೇ ಹಾಲಿ ವಸತಿ ಯೋಜನೆಯಡಿ ಹಣ ಪಾವತಿಸಿದವರಿಗೆ ಫ್ಲ್ಯಾಟ್‌ಗಳನ್ನು ಹಂಚಿಕೆ ಮಾಡಲು ಕಾಲಾವಕಾಶ ನೀಡಬೇಕು. ಆ ಮೂಲಕ ದಂಡ ವಿಧಿಸುವ ಪ್ರಕ್ರಿಯೆ ಕೈಬಿಡಬೇಕು. ಬಿಗಿ ನಿಯಮಾವಳಿ ರೂಪಿಸದೆ ಸಡಿಲಗೊಳಿಸಬೇಕು ಎಂದು ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ.

ಅಂತಿಮ ಹಂತದ ಪ್ರಕ್ರಿಯೆ ಬಾಕಿ
ಕೇಂದ್ರ ಸರ್ಕಾರದ ಸೂಚನೆಯಂತೆ ಮೇ 1ರೊಳಗೆ ಕಾಯ್ದೆ ಜಾರಿಗೊಳಿಸಲು ಅಂತಿಮ ಹಂತದ ಪ್ರಕ್ರಿಯೆ ಮಾತ್ರ ಬಾಕಿ ಉಳಿದಿದೆ. ಕರಡು ನಿಯಮಾವಳಿ ಸಂಬಂಧ ಸಲ್ಲಿಕೆಯಾದ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಂತಿಮವಾಗಿ ಸಚಿವ ಸಂಪುಟದ ಒಪ್ಪಿಗೆ ಪಡೆದು ಅಂತಿಮ ಅಧಿಸೂಚನೆ ಹೊರಡಿಸಬೇಕಾಗುತ್ತದೆ. ಕೇಂದ್ರ ಸರ್ಕಾರ ವಿಧಿಸಿರುವ ನಿಯಮಾವಳಿಗಳನ್ನು ಸಡಿಲಗೊಳಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವೇ ಇಲ್ಲ. ಹಾಗಾಗಿ ನಿಯಮಾವಳಿ ಅಂತಿಮಗೊಳಿಸಿ ಅಧಿಸೂಚನೆ ಹೊರಡಿಸಬೇಕಾಗುತ್ತದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ಟಾಪ್ ನ್ಯೂಸ್

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌ !

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌!

Crime: ಕೈ, ಕತ್ತು ಕೊಯ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ

Crime: ಕೈ, ಕತ್ತು ಕೊಯ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ

8-bng

17 ಕೋಟಿ ರೂ. ವಿದ್ಯುತ್‌ ಬಿಲ್‌ ಕಂಡು ಮನೆ ಮಾಲೀಕನಿಗೆ ಶಾಕ್‌!

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

Sullia ಬೇಂಗಮಲೆ: ಚರಂಡಿಗೆ ಬಿದ್ದ ಕಾರು

Sullia ಬೇಂಗಮಲೆ: ಚರಂಡಿಗೆ ಬಿದ್ದ ಕಾರು

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.