ಕೈಗೆಟಕುವ ಮನೆಗಳಿಗೆ ಹೆಚ್ಚಿದ ಬೇಡಿಕೆ

ಅಪಾರ್ಟ್‌ಮೆಂಟ್‌ಗಳ ಬಗ್ಗೆ ಕೆಳ ಮಧ್ಯಮ ವರ್ಗ ಆಸಕ್ತಿ? | ಕೋವಿಡ್‌ ಬಳಿಕ ರಿಯಲ್‌ ಎಸ್ಟೇಟ್‌ ಚೇತರಿಕೆ?

Team Udayavani, Aug 25, 2020, 11:47 AM IST

BNG-TDY-1

ಸಾಂದರ್ಭಿಕ ಚಿತ್ರ

ಬೆಂಗಳೂರು: ರಿಯಲ್‌ ಎಸ್ಟೇಟ್‌ ಉದ್ಯಮಕ್ಕೆ ಶಾಪವಾಗಿ ಪರಿಣಮಿಸಿದ್ದ ಕೋವಿಡ್ ಸೋಂಕು ಹಾವಳಿಯೇ ಈಗ “ವರ’ವಾಗಿ ಪರಿಣಮಿಸುತ್ತಿದೆ! ಈ ಮೊದಲು ಕೇವಲ ಮೇಲ್ಮಧ್ಯಮ ವರ್ಗ ರಿಯಲ್‌ ಎಸ್ಟೇಟ್‌ನ ಪ್ರಮುಖ ಗ್ರಾಹಕರಾಗಿದ್ದರು. ಆ ಬೇಡಿಕೆಗೆ ಅನುಗುಣವಾಗಿ ಅಪಾರ್ಟ್‌ಮೆಂಟ್‌ಗಳು ತಲೆಯೆತ್ತುತ್ತಿದ್ದವು. ಆದರೆ, ಕೋವಿಡ್‌-19ರ ನಂತರ ಗ್ರಾಹಕ ವರ್ಗದಲ್ಲಿ ಪಲ್ಲಟ ಕಂಡುಬಂದಿದ್ದು, ಕೆಳ ಮಧ್ಯಮ ವರ್ಗ ಅಂದರೆ ಆಟೋ, ಟ್ಯಾಕ್ಸಿ ಚಾಲಕರು, ಪೆಟ್ಟಿ ಅಂಗಡಿ ವ್ಯಾಪಾರಿಗಳಂತಹ ಕಡಿಮೆ ಆದಾಯ ಹೊಂದಿರುವವರು ಕೈಗೆಟಕುವ ಮನೆಗಳತ್ತ ಮುಖಮಾಡುತ್ತಿರುವುದು ಕಂಡುಬರುತ್ತಿದೆ.

ಕ್ರೆಡಾಯ್‌ ಅಂಕಿ-ಅಂಶಗಳ ಪ್ರಕಾರ ಶೇ. 30-35ರಷ್ಟು ಕೈಗೆಟಕುವ ಮನೆಗಳಿಗೆ ಬೇಡಿಕೆ ಹೆಚ್ಚಾಗಿದೆ. ಕೋವಿಡ್ ಹಾವಳಿ ನಂತರ ಕೈಗೆಟಕುವ ಮನೆಗಳಿಗೆ ಬೇಡಿಕೆ ಕೇಳಿಬರುತ್ತಿದೆ. ಈ ವರ್ಗವನ್ನು ಸೆಳೆಯಲು ಬಿಲ್ಡರ್‌ಗಳು ಇತ್ತೀಚೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಮಹಾನಗರಗಳಲ್ಲಿ ಈಗಾಗಲೇ ಇರುವ ಕೈಗೆಟಕುವ ಮನೆಗಳ ಮರುವಿನ್ಯಾಸಕ್ಕೆ ಕೈಹಾಕಿದ್ದಾರೆ. ಇನ್ನು ಕೆಲವು ಈಗಾಗಲೇ ಪ್ರಗತಿಯಲ್ಲಿರುವ ಯೋಜನೆಗಳನ್ನು ಕೆಳ ಮಧ್ಯಮ ವರ್ಗದ ಪೂರಕವಾಗಿರುವಂತೆ ಮಾರ್ಪಾಡು ಮಾಡಿಕೊಳ್ಳುತ್ತಿದ್ದಾರೆ. ಈ ಬೆಳವಣಿಗೆ ಮುಂದಿನ ದಿನಗಳಲ್ಲಿ ನೆಲಕಚ್ಚಿರುವ ರಿಯಲ್‌ ಎಸ್ಟೇಟ್‌ ಉದ್ಯಮಕ್ಕೆ ಚೇತರಿಕೆ ನೀಡಲಿದೆ ಎಂದು ಉದ್ಯಮಿಗಳು ವಿಶ್ಲೇಷಿಸುತ್ತಾರೆ.

ಕ್ರೆಡಾಯ್‌ ಸಮೀಕ್ಷೆಯಲ್ಲಿ ಬಹಿರಂಗ: “ಭಾರತೀಯ ರಿಯಲ್‌ ಎಸ್ಟೇಟ್‌ ಅಭಿವೃದ್ಧಿ ಸಂಘಗಳ ಒಕ್ಕೂಟ (ಕ್ರೆಡಾಯ್‌) ಈಚೆಗೆ ಸಮೀಕ್ಷೆಯೊಂದನ್ನು ನಡೆಸಿದೆ. ಅದರಂತೆ ಕೋವಿಡ್‌ ನಂತರ ಬಿಲ್ಡರ್‌ಗಳಲ್ಲಿ ಬರುವ ಗ್ರಾಹಕ ವರ್ಗದಲ್ಲಿ ಬದಲಾವಣೆ ಕಂಡುಬಂದಿದೆ.  ಅದರಂತೆ ಈ ಹಿಂದೆ ಬರೀ ಮೇಲ್ಮಧ್ಯಮ ವರ್ಗ ಹೆಚ್ಚಾಗಿ ನಮ್ಮ ಬಳಿ ಬರುತ್ತಿತ್ತು. ಈಚೆಗೆ ಕೆಳ ಮಧ್ಯಮ ವರ್ಗವೂ ಕೈಗೆಟಕುವ ಫ್ಲ್ಯಾಟ್‌ಗಳನ್ನು ಕೇಳಿಕೊಂಡು ಬರುತ್ತಿದೆ. ಕೋವಿಡ್ ಹಾವಳಿ ಸಮಯದಲ್ಲಿ ಮನೆ ಮಾಲಿಕರಿಂದಾದ ಕಿರುಕುಳ, ಸೋಂಕು ಕಂಡುಬಂದಾಗ ಅನುಭವಿಸಿದ ಅಪಮಾನ, ಮನೆಗಳಿಗಾಗಿ ಅಲೆದಾಟ ಇದೆಲ್ಲವೂ ಅವರಲ್ಲಿ ಸ್ವಂತ ಮನೆ ಹೊಂದುವ ಆಸೆ ಇಮ್ಮಡಿಯಾಗುವಂತೆ ಮಾಡಿದೆ’ ಎಂದು ಕ್ರೆಡಾಯ್‌ ಕರ್ನಾಟಕ ಘಟಕದ ಉಪಾಧ್ಯಕ್ಷ ಪ್ರದೀಪ್‌ ರಾಯ್ಕರ್‌ ತಿಳಿಸಿದರು. “ಸಾಮಾನ್ಯವಾಗಿ 650 ಚದರಡಿಯಲ್ಲಿ ಕೈಗೆಟಕುವ ಮನೆಗಳನ್ನು ನಿರ್ಮಿಸಲಾಗುತ್ತದೆ. ಈಗ ಅದನ್ನು ಕೇವಲ 400-450 ಚದರಡಿ (ಮನೆ ಒಳಾಂಗಣ) ಯಲ್ಲಿ ವಿನ್ಯಾಸ ರೂಪಿಸಿ ನಿರ್ಮಿಸಲಾಗುತ್ತದೆ ಹಾಗಂತ, ಗುಣಮಟ್ಟದಲ್ಲಿ ಯಾವುದೇ ರಾಜೀ ಇರುವುದಿಲ್ಲ. ಅಷ್ಟೇ ಅಲ್ಲ, ಸೌಲಭ್ಯಗಳು, ಜಾಗದ ಲಭ್ಯತೆ ಎಲ್ಲವೂ ಉಳಿದ ಅಪಾರ್ಟ್‌ಮೆಂಟ್‌ ಗಳಂತೆಯೇ ಇರುತ್ತವೆ. ಈಗಾಗಲೇ ನಗರದ ಹೊಸೂರು, ಎಲೆಕ್ಟ್ರಾನಿಕ್‌ ಸಿಟಿ, ಉತ್ತರಹಳ್ಳಿ, ಯಲಹಂಕ ಮತ್ತಿತರ ಕಡೆ ಇವುಗಳನ್ನು ಕಾಣಬಹುದು. ಅಲ್ಲದೆ, ಬೆಳಗಾವಿ, ಹುಬ್ಬಳ್ಳಿಯಂತಹ ಎರಡನೇ ಹಂತದ ನಗರಗಳಲ್ಲೂ ಬೇಡಿಕೆ ಹೆಚ್ಚಾಗಿ ಕಂಡುಬರುತ್ತಿದೆ.  ಈ ಮನೆಗಳು ಕೇವಲ 20 ಲಕ್ಷ ರೂ. ಒಳಗೆ ಇವೆ. ಹಾಗಾಗಿ, ಹೆಚ್ಚು ಕಡಿಮೆ ತಿಂಗಳ ಬಾಡಿಗೆಯಷ್ಟೇ ಇಲ್ಲಿ ಕಂತುಗಳನ್ನು ಪಾವತಿಸಲು ಸಾಧ್ಯವಿದೆ’ ಎಂದೂ ಪ್ರದೀಪ್‌ ರಾಯ್ಕರ್‌ ಹೇಳಿದರು.

“ಹೊಸೂರು, ವೈಟ್‌ ಫೀಲ್ಡ್‌, ಎಲೆಕ್ಟ್ರಾನಿಕ್‌ ಸಿಟಿ ಮತ್ತಿತ್ತರ ಕಡೆಗಳಲ್ಲಿ ಈಗಾಗಲೇ ಇಂತಹ ಅಗ್ಗದ ದರದಲ್ಲಿ ಕೈಗೆಟಕುವ ಮನೆಗಳು ಹಸ್ತಾಂತರ ಆಗಿದೆ. ಬಾಡಿಗೆ ಪಾವತಿಸುವ ಹಣ ಇಲ್ಲಿ ಕಂತುಗಳ ರೂಪದಲ್ಲಿ ಪಾವತಿ ಆಗುತ್ತಿದೆ. ಹಬ್ಬದ ಸೀಜನ್‌ ಈಗ ಶುರುವಾಗಿರುವುದರಿಂದ ಮುಂದಿನ ದಿನಗಳಲ್ಲಿ ಮತ್ತಷ್ಟು ಬೇಡಿಕೆ ಕಂಡುಬರುವ ಸಾಧ್ಯತೆ ಇದೆ’ ಎಂದೂ ಪ್ರದೀಪ್‌ ರಾಯ್ಕರ್‌ ಮಾಹಿತಿ ನೀಡಿದರು.

ನೆರವಾದ ಕೇಂದ್ರದ ಯೋಜನೆ : ” ಕೋವಿಡ್ ದಿಂದ ವ್ಯಾಪಾರ ಇಲ್ಲದೆ ಆರ್ಥಿಕ ಸಂಕಷ್ಟದ ಸ್ಥಿತಿಯಲ್ಲೂ ಕೈಗೆಟಕುವ ಮನೆಗಳತ್ತ ಮುಖಮಾಡುತ್ತಿರುವುದು ಉತ್ತಮ ಬೆಳವಣಿಗೆ ಯಾಗಿದೆ. ಕೆಳ ಮಧ್ಯಮ ವರ್ಗಕ್ಕೆ ಮನೆಗಳ ಅವಶ್ಯಕತೆ ಎಷ್ಟರಮಟ್ಟಿಗೆ ತುರ್ತು ಇದೆ ಎಂಬುದನ್ನು ತೋರಿಸುತ್ತದೆ. ಇದಕ್ಕೆ ಪೂರಕವಾಗಿ ಕೇಂದ್ರದ ಪ್ರಧಾನಮಂತ್ರಿ ಮಂತ್ರಿ ಆವಾಸ್‌ ಯೋಜನೆ (ಪಿಎಂಎವೈ) ಅಡಿ ನೆರವು ಹಾಗೂ ಬ್ಯಾಂಕ್‌ಗಳಲ್ಲಿ ಗೃಹ ಸಾಲದ ಮೇಲಿನ ಬಡ್ಡಿದರ ಕಡಿಮೆ ಮಾಡಿರುವುದು. ಇದೆಲ್ಲವೂ ಈ ಹೊಸ ಬೆಳವಣಿಗೆಗೆ ಕಾರಣವಾಗಿದೆ. ಆದರೆ, ಬೇಡಿಕೆಯಲ್ಲಿ ಎಷ್ಟು ಪ್ರಮಾಣ ಏರಿಕೆ ಕಂಡುಬಂದಿದೆ ಎಂಬುದನ್ನು ನಿಖರವಾಗಿ ಹೇಳುವುದು ಕಷ್ಟ’ ಎಂದು ಕ್ರೆಡಾಯ್‌ ಬೆಂಗಳೂರು ಘಟಕದ ಅಧ್ಯಕ್ಷ ಸುರೇಶ್‌ ಹರಿ ಸ್ಪಷ್ಟಪಡಿಸುತ್ತಾರೆ.

 

ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.