ಅಂಬಿ ಅಗಲಿಕೆಗೆ ಮಂಕಾದ ಮಂಡ್ಯ ಕಾಂಗ್ರೆಸ್
Team Udayavani, Nov 26, 2018, 6:00 AM IST
ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಶ್ ಅವರ ಅಕಾಲಿಕ ನಿಧನ ರಾಜ್ಯ ಕಾಂಗ್ರೆಸ್ಗೆ ಹಿನ್ನಡೆಯಾಗಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. ಅದರಲ್ಲೂ ವಿಶೇಷವಾಗಿ ಮಂಡ್ಯ ಜಿಲ್ಲೆಯಲ್ಲಿ ಸಾಕಷ್ಟು ಹಿನ್ನಡೆಗೆ ಕಾರಣವಾಗುವ ಸಾಧ್ಯತೆಯಿದೆ.
ಚಿತ್ರರಂಗದ ಹಾಗೆಯೇ ರಾಜಕೀಯದಲ್ಲೂ ಉನ್ನತ ಹುದ್ದೆಗೇರಬೇಕೆಂಬ ಮಹತ್ವಾಕಾಂಕ್ಷೆ ಹೊಂದಿದ್ದ ಅಂಬರೀಶ್, ಇತ್ತೀಚಿನ ರಾಜಕೀಯದಲ್ಲಿನ ಬೆಳವಣಿಗೆಗಳಿಂದ ಬೇಸರಗೊಂಡು ತಟಸ್ಥರಾಗಿ ಉಳಿದಿದ್ದರು. ಆದರೆ, ರಾಜಕಾರಣದಲ್ಲಿ ಅವರ ತಾರಾ ವರ್ಚಸ್ಸು ಸಾಕಷ್ಟು ಕೆಲಸ ಮಾಡುತ್ತಿತ್ತು. ಅದರ ಪರಿಣಾಮ 2018ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ದೊರೆತ ಫಲಿತಾಂಶವೇ ಸಾಕ್ಷಿಯಾಗಿದೆ.
ಹಳೇ ಮೈಸೂರು ಭಾಗದಲ್ಲಿ ವಿಶೇಷವಾಗಿ ಮಂಡ್ಯ ಜಿಲ್ಲೆಯಲ್ಲಿ ಅಂಬರೀಶ್ ಪ್ರಭಾವ ಅರಿತಿದ್ದ ಕಾಂಗ್ರೆಸ್ ನಾಯಕರು ಕೊನೆಯ ಘಳಿಗೆವರೆಗೂ ಅಂಬರೀಶ್ ಹೆಸರಿನಲ್ಲೇ ಮಂಡ್ಯ ವಿಧಾನಸಭಾ ಟಿಕೆಟ್ ಮೀಸಲಿಟ್ಟಿದ್ದರು. ಆದರೆ, ಇದನ್ನು ಅಂಬರೀಶ್ ತಿರಸ್ಕರಿಸುವ ಮೂಲಕ ಮಂಡ್ಯದಲ್ಲಿ ಕಾಂಗ್ರೆಸ್ ವಿರುದ್ಧ ತಮ್ಮ ಸಿಟ್ಟು ಹೊರ ಹಾಕಿದ್ದರು.
ಮಂಕಾದ ಮಂಡ್ಯ ಕಾಂಗ್ರೆಸ್:
ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಹಾಗೂ ಮಾಜಿ ಸಂಸದ ಜಿ. ಮಾದೇಗೌಡ ನಂತರ ಮಂಡ್ಯ ಕಾಂಗ್ರೆಸ್ನಲ್ಲಿ ಅಂಬರೀಶ್ ತಮ್ಮದೇ ಆದ ವರ್ಚಸ್ಸು ಬೆಳೆಸಿಕೊಂಡಿದ್ದರು. ಜನತಾದಳದಿಂದ ಕಾಂಗ್ರೆಸ್ ಸೇರ್ಪಡೆಯಾಗಿದ್ದರೂ ಎಸ್.ಎಂ. ಕೃಷ್ಣ ಅವರ ವಿರುದ್ಧ ದಿಕ್ಕಿನಲ್ಲಿ ರಾಜಕಾರಣ ಮಾಡಿ, ಜಿಲ್ಲೆಯನ್ನು ತಮ್ಮ ಹಿಡಿತಕ್ಕೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಈಗ ಅಂಬರೀಶ್ ಅವರ ಅಕಾಲಿಕ ನಿಧನದಿಂದ ಜಿಲ್ಲೆಯಲ್ಲಿ ಕಾಂಗ್ರೆಸ್ಗೆ ಪಕ್ಷವನ್ನು ಮುನ್ನಡೆಸುವಂತಹ ನಾಯಕರ ಕೊರತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ