ಬಾಲಕನಿಗೆ ಮರುಜನ್ಮ ಕೊಟ್ಟ ಹೃದಯ ಕಸಿ


Team Udayavani, Sep 6, 2018, 12:38 PM IST

blore-13.jpg

ಬೆಂಗಳೂರು: ತೀವ್ರ ಹೃದ್ರೋಗ ಸಮಸ್ಯೆಯಿಂದ ಸಾವು, ಬದುಕಿನ ನಡುವೆ ಹೋರಾಡುತ್ತಿದ್ದ 13 ವರ್ಷದ ಬಾಲಕನಿಗೆ ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ ಇತ್ತೀಚೆಗೆ ಯಶಸ್ವಿಯಾಗಿ ಹೃದಯ ಕಸಿ ಶಸ್ತ್ರಚಿಕಿತ್ಸೆ ನಡೆಸಿ
ಮರುಜನ್ಮ ನೀಡಿದೆ.  ಹೃದಯದ ಸ್ನಾಯು ದುರ್ಬಲಗೊಂಡು ರಕ್ತವನ್ನು ಪಂಪ್‌ ಮಾಡುವ ಸಾಮರ್ಥ್ಯ ಕ್ಷೀಣವಾಗುವ ಸ್ಥಿತಿ (ಡೈಲೇಟೆಡ್‌ ಕಾರ್ಡಿಯೋಮಯೋಪಥಿ)ಯಿಂದ ಬಳಲುತ್ತಿದ್ದ ಮಾ.ಕುಶಾಲ್‌ನ ಕಾಯಿಲೆಗೆ ಹೃದಯ ಕಸಿ ಶಸ್ತ್ರಚಿಕಿತ್ಸೆಯೊಂದೆ ಮಾರ್ಗವಾಗಿತ್ತು. ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಅಪಘಾತ ವೊಂದರಲ್ಲಿ ಸಾವಿಗೀಡಾದ ಯುವಕನ ಹೃದಯ ವನ್ನು ಚೆನ್ನೈ ಫೋರ್ಟಿಸ್‌ ಮಲರ್‌ ಆಸ್ಪತ್ರೆಯ ಮುಖ್ಯ ಹೃದಯ ಮತ್ತು ಕಸಿ ಶಸ್ತ್ರಚಿಕಿತ್ಸಾ ತಜ್ಞ, ಡಾ. ಕೆ.ಆರ್‌. ಬಾಲಕೃಷ್ಣನ್‌ ತಂಡದ ಸಹಯೋಗದಲ್ಲಿ ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್‌ ಆಸ್ಪತ್ರೆಯ ಹೃದಯ ರಕ್ತನಾಳ ವಿಜ್ಞಾನ ವಿಭಾಗದ ಅಧ್ಯಕ್ಷ ಮತ್ತು ಶಸ್ತ್ರಚಿಕಿತ್ಸಾ ತಜ್ಞ ಡಾ. ವಿವೇಕ್‌ ಜವಳಿ ಅವರ ತಂಡ ಸಂಗ್ರಹಿಸಿ ಬೆಂಗಳೂರಿಗೆ ತಂದು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿದೆ.

ಮಂಗಳವಾರ ನಗರದ ಹೋಟೆಲೊಂದರಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಡಾ. ವಿವೇಕ್‌ ಜವಳಿ ಅವರು, ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್‌ ಆಸ್ಪತ್ರೆಯಲ್ಲಿ ನಡೆಸಿದ ಮೊದಲ ಕ್ಲಿಷ್ಟಕರ ಮಕ್ಕಳ ಹೃದಯ ಕಸಿ ಶಸ್ತ್ರಚಿಕಿತ್ಸೆ ಇದಾಗಿದೆ. ಹಲವು ಸವಾಲುಗಳ ನಡುವೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿರುವುದು ಸಂತಸ ತಂದಿದೆ. ವಿಶಾಖಪಟ್ಟಣದಲ್ಲಿನ ವೈದ್ಯರು ಮತ್ತು ನಮ್ಮ ಎಲ್ಲ ಸಿಬ್ಬಂದಿಯ ಸಾಂಘಿಕ ಸಹಕಾರದ ಫಲ ಈ ಯಶಸ್ವಿ ಬದಲಿ ಹೃದಯ ಜೋಡಣೆ ಎಂದರು.

ಅಂತಾರಾಜ್ಯ ಸಮನ್ವಯ ಮತ್ತು ಕ್ಷಿಪ್ರಗತಿ ಕಾರ್ಯ ನಿರ್ವಹಣೆಯಿಂದ ಹೃದಯ ವೈಫಲ್ಯದ ಗಂಭೀರ ಸ್ಥಿತಿಯಲ್ಲಿದ್ದ ಬಾಲಕನಿಗೆ ಹೃದಯ ಕಸಿ ಶಸ್ತ್ರಚಿಕಿತ್ಸೆ ಕಾಲಮಿತಿಯೊಳಗೆ ಕೈಗೊಳ್ಳಲು ಸಾಧ್ಯವಾಯಿತು. ಆರು ಗಂಟೆಗಳ ನಂತರ ಬಾಲಕ ವೆಂಟಿಲೇಟರ್‌ನಿಂದ ಹೊರಬಂದು ಚೇತರಿಸಿಕೊಂಡಿದ್ದಾನೆ.

ಅಂಗದಾನಿಗಳ ಕೊರತೆ: ನಮ್ಮ ದೇಶ ಅಂಗದಾನಿಗಳ ತೀವ್ರ ಕೊರತೆ ಅನುಭವಿಸುತ್ತಿದೆ. ಇದಕ್ಕೆ ಸ್ಪಷ್ಟ ಕಾರಣ ನಮ್ಮಲ್ಲಿರುವ ಅಂಗದಾನದ ಅರಿವಿನ ಕೊರತೆ. ಈ ಬಾಲಕನ ಕಸಿ ಕ್ರಮದ ಮೂಲಕ ಜನರಲ್ಲಿ ಜಾಗೃತಿ ಮೂಡಲಿದೆ ಮತ್ತು ಅಂಗದಾನಕ್ಕೆ ಮುಂದೆ ಬರಲಿದ್ದಾರೆ ಎಂದು ನಂಬಿದ್ದೇನೆ ಎಂದು ನುಡಿದರು. 

ಚೆನ್ನೈ ಫೋರ್ಟಿಸ್‌ನ ಡಾ. ಕೆ.ಆರ್‌. ಬಾಲಕೃಷ್ಣನ್‌ ಮಾತನಾಡಿ, ಬಾಲಕನ ತಾಯಿ ನನ್ನ ಮಗನಿಗೆ ವೈದ್ಯರು ಹಾಗೂ ದಾನಿಯ ಕುಟುಂಬ ನೂತನ ಜೀವನ ನೀಡಿದ್ದಕ್ಕಾಗಿ ಧನ್ಯವಾದ ಹೇಳುತ್ತೇನೆ ಎಂದರು. ಡಾ. ಮುರಳಿ ಚಕ್ರವರ್ತಿ, ಡಾ. ಮನೀಷ್‌ ಮಟ್ಟೂ, ರಾಜ್‌ ಗೋರೆ ಇತರರು ಉಪಸ್ಥಿತರಿದ್ದರು.

ಕಾರ್ಯಾಚರಣೆ ಹೇಗೆ ಬೆಂಗಳೂರಿನ ಫೋರ್ಟಿಸ್‌ ಆಸ್ಪತ್ರೆ ತಂಡ ಜೀವಂತ ಹೃದಯವನ್ನು ತೆಗೆಯಲು ವಿಶಾಖಪಟ್ಟಣಕ್ಕೆ ಧಾವಿಸಿ, ಅಲ್ಲಿನ ಕೇರ್‌ ಆಸ್ಪತ್ರೆಯಿಂದ ಹೃದಯವನ್ನು ನಗರಕ್ಕೆ ತರಲು ಹಸಿರು ಕಾರಿಡಾರ್‌ ಮಾರ್ಗವನ್ನು
ರೂಪಿಸಿತ್ತು. ಒಂದು ಗಂಟೆ 26 ನಿಮಿಷದ ಒಳಗೆ ಬನ್ನೇರುಘಟ್ಟದ ರಸ್ತೆ ಫೋರ್ಟಿಸ್‌ ಆಸ್ಪತ್ರೆಗೆ ತಲುಪುವಂತೆ ಕಾರ್ಯನಿರ್ವಹಣೆ ಕೈಗೊಳ್ಳಲಾಗಿತ್ತು. ವಿಶಾಖಪಟ್ಟಣದಿಂದ ರಾತ್ರಿ 9.30ಕ್ಕೆ ಹೊರಟು ಬೆಂಗಳೂರಿನ ಆಸ್ಪತ್ರೆಗೆ ರಾತ್ರಿ 10.56ಕ್ಕೆ ತಲುಪಿತ್ತು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.