![car](https://www.udayavani.com/wp-content/uploads/2024/07/car-7-415x248.jpg)
ಶಿಫಾರಸು ಜಾರಿಗೆ ಸಮ್ಮತಿ 6ನೇ ವೇತನ ಆಯೋಗ ಬಿಕ್ಕಟ್ಟಿಗೆ ತೆರೆ
Team Udayavani, Apr 20, 2018, 6:00 AM IST
![election-commission–pay.jpg](https://www.udayavani.com/wp-content/uploads/2018/04/20/election-commission--pay-620x403.jpg)
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ 6ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿಗೊಳಿಸಲು ಕೇಂದ್ರ ಚುನಾವಣಾ ಆಯೋಗ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ವೇತನ ಪರಿಷ್ಕರಣೆ ಆದೇಶ ಹೊರಡಿಸಿದ್ದು, ಲಕ್ಷಾಂತರ ಸರ್ಕಾರಿ ನೌಕರರು ನಿಟ್ಟುಸಿರು ಬಿಟ್ಟಂತಾಗಿದೆ.
ನಿವೃತ್ತ ಐಎಎಸ್ ಅಧಿಕಾರಿ ಎಂ.ಆರ್. ಶ್ರೀನಿವಾಸ್ ಮೂರ್ತಿ ಅಧ್ಯಕ್ಷತೆಯ 6ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಒಪ್ಪಿಕೊಂಡು ರಾಜ್ಯ ಸರ್ಕಾರ ಸರ್ಕಾರಿ ನೌಕರರಿಗೆ ಶೇ. 30 ರಷ್ಟು ವೇತನ ಹೆಚ್ಚಳ ಮಾಡಲು ತೀರ್ಮಾನಿಸಿತ್ತು. ಪರಿಷ್ಕೃತ ವೇತನ 2017ರ ಜುಲೈ 1ರಿಂದ ಅನ್ವಯ ಆಗುವಂತೆ 2018 ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಲು ಮುಂದಾಗಿತ್ತು. ಅಷ್ಟರಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದ್ದರಿಂದ ಸರ್ಕಾರ ಗೊಂದಲಕ್ಕೆ ಸಿಲುಕಿತ್ತು.
ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದ ರಾಜ್ಯ ಸರ್ಕಾರ, ಚುನಾವಣೆ ಘೋಷಣೆಗೂ ಮೊದಲೇ ಸರ್ಕಾರ ವೇತನ ಪರಿಷ್ಕರಣೆಗೆ ಆಯೋಗ ರಚನೆ ಮಾಡಿ ಅದರ ಶಿಫಾರಸು ಜಾರಿಗೆ ಒಪ್ಪಿಕೊಂಡಿರುವುದರಿಂದ ಆದೇಶ ಹೊರಡಿಸಲು ಅವಕಾಶ ನೀಡುವಂತೆ ಮನವಿ ಮಾಡಿಕೊಂಡಿತ್ತು. ಆ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ರಾಜ್ಯ ಸರ್ಕಾರಕ್ಕೆ ಒಪ್ಪಿಗೆ ನೀಡಿದೆ. ಹೀಗಾಗಿ, ವೇತನ ಪರಿಷ್ಕರಣೆ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿದೆ.
ಟಾಪ್ ನ್ಯೂಸ್
![car](https://www.udayavani.com/wp-content/uploads/2024/07/car-7-415x248.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![gajanur3](https://www.udayavani.com/wp-content/uploads/2024/07/gajanur3-150x84.jpg)
ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ
![mudhola](https://www.udayavani.com/wp-content/uploads/2024/07/mudhola-1-150x87.jpg)
ಪ್ರವಾಹದ ನೀರಿನಲ್ಲಿ ಪಂಪ್ ಸೆಟ್ ತರಲು ಹೋದ ರೈತರು… ನೀರಿಗಿಳಿಯದಂತೆ ಮನವಿ ಮಾಡಿದ ಸಚಿವರು
![ರಬಕವಿ-ಬನಹಟ್ಟಿ: ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ](https://www.udayavani.com/wp-content/uploads/2024/07/KRISHNA-NADI-150x84.jpg)
ರಬಕವಿ-ಬನಹಟ್ಟಿ: ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
![car](https://www.udayavani.com/wp-content/uploads/2024/07/car-7-150x90.jpg)
Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು
![Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ](https://www.udayavani.com/wp-content/uploads/2024/07/Exam-9-150x84.jpg)
Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ
![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-150x83.jpg)
Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ
![ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!](https://www.udayavani.com/wp-content/uploads/2024/07/Dubai1-150x84.jpg)
ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!
![Screenshot (7) copy](https://www.udayavani.com/wp-content/uploads/2024/07/Screenshot-7-copy-150x83.jpg)
Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.