ಕೋವಿಡ್ ಮಧ್ಯೆಯೂ ದಾಖಲೆ ರಸಗೊಬ್ಬರ ಪೂರೈಕೆ; ಸದಾನಂದ ಗೌಡರಿಗೆ ಉಪರಾಷ್ಟ್ರಪತಿ ಮೆಚ್ಚುಗೆ


Team Udayavani, Feb 12, 2021, 7:40 PM IST

sadananda gowda

ನವದೆಹಲಿ: ಕೋವಿಡ್ ಸಂಕಷ್ಟದ ಮಧ್ಯೆಯೂ ದೇಶದ ಯಾವುದೇ ಭಾಗದಲ್ಲಿ ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಲಾಗಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಈ ಸಲ ರಸಗೊಬ್ಬರ ಪೂರೈಕೆ ಶೇಕಡಾ 25ರಷ್ಟು ಹೆಚ್ಚಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ ಸದಾನಂದ ಗೌಡ ಹೇಳಿದ್ದಾರೆ.

ರಾಜ್ಯಸಭೆಯಲ್ಲಿಂದು ಪ್ರಶ್ನೋತ್ತರ ವೇಳೆ ಜಿ.ಬಿ.ಎಲ್‌ ನರಸಿಂಹರಾವ್‌ ಅವರು ಕೇಳಿದ ಪೂರಕ ಪ್ರಶ್ನೆಗೆ ಸಚಿವರು ಉತ್ತರಿಸಿದರು. ಕೋವಿಡ್  ನಿಂದಾಗಿ ರಸಗೊಬ್ಬರ ಉತ್ಪಾದನೆ ಮತ್ತು ಸಾಗಣೆ ಮಾಡುವುದು ಒಂದು ದೊಡ್ಡ ಸವಾಲಾಗಿತ್ತು. ಕೆಲಸಗಾರರ ಪೈಕಿ ಯಾರೀಗಾದರೂ ಕೋವಿಡ್ ಸೋಂಕು ತಗುಲಿದರೆ ಇಡೀ ಪ್ಯಾಕ್ಟರಿಯನ್ನೇ ಮುಚ್ಚಬೇಕಾದ ಪರಿಸ್ಥಿತಿ ಇತ್ತು. ಅದೇ ರೀತಿ ಸಾಗಣೆ ಮಾಡುವಾಗ, ಲೋಡ್‌, ಅನ್‌ಲೋಡ್‌ ಮಾಡುವಾಗ ಕಾರ್ಮಿಕರ ಕೊರತೆ ಎದುರಾಗಿತ್ತು. ಆದರೆ ಇವನ್ನೆಲ್ಲ ಸಮರ್ಪಕವಾಗಿ ನಿಭಾಯಿಸಲಾಯಿತು. ಅತಿವೃಷ್ಟಿಯಿಂದ ಕೆರೆ-ಕುಂಟೆಗಳು, ನೀರಾವರಿ ಜಲಾಶಯಗಳು ತುಂಬಿದವು. ಬಿತ್ತನೆ ಪ್ರದೇಶ ವೃದ್ಧಿಸಿ ರಸಗೊಬ್ಬರ ಬೇಡಿಕೆಯೂ ಹೆಚ್ಚಾಯಿತು. ಹೆಚ್ಚಾದ ಬೇಡಿಕೆಯನ್ನು ಪೂರೈಸಿ ಎಲ್ಲಿಯೂ ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಲಾಯಿತು. ಇದರಿಂದಾಗಿ ಕೃಷಿ ವಲಯ ಶೇಕಡಾ 3.7 ಬೆಳವಣಿಗೆ ಸಾಧಿಸಲು ಸಾಧ್ಯವಾಯಿತು ಎಂದು ವಿವರಿಸಿದರು.

ಇದಕ್ಕೆ ಮೊದಲು ವಿಜಯಸಾಯಿ ರೆಡ್ಡಿ ಅವರು ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಸದಾನಂದಗೌಡ, ಆಂಧ್ರ ಪ್ರದೇಶದಲ್ಲಿಯೂ ರಸಗೊಬ್ಬರದ ಕೊರತೆ ಉಂಟಾಗದಂತೆ ನೋಡಿಕೊಳ್ಳಲಾಗಿದೆ ಎಂದರು.

ಇದನ್ನೂ ಓದಿ: ಚೆನ್ನೈ; ಪಟಾಕಿ ಕಾರ್ಖಾನೆಯಲ್ಲಿ ಭಾರಿ ಅಗ್ನಿ ದುರಂತ…11 ಜನ ಸಾವು

ಪ್ರತಿ ಹಂಗಾಮು ಶುರುವಾಗುವುದಕ್ಕೆ ಸಾಕಷ್ಟು ಮುಂಚಿತವಾಗಿಯೇ ನಮ್ಮ ಇಲಾಖೆಯು ಪ್ರತಿಯೊಂದು ರಾಜ್ಯಗಳ ಬೇಡಿಕೆಯ ವಿವರ ಪಡೆದು ಅದರ ಪ್ರಕಾರವೇ ವಿವಿಧ ನಮೂನೆಯ ರಸಗೊಬ್ಬರಗಳನ್ನು ಸರಬರಾಜಿಗೆ ವ್ಯವಸ್ಥೆ ಮಾಡುತ್ತದೆ. ಪ್ರತಿವಾರವೂ ವಿಡಿಯೋ ಕಾನ್ಫರೆನ್ಸ್‌ ಮೂಲಕ ಎಲ್ಲ ರಾಜ್ಯಗಳ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುತ್ತದೆ. ಇದಲ್ಲದೆ ಯಾವ-ಯಾವ ರಾಜ್ಯಗಳಲ್ಲಿ ಯಾವ-ಯಾವ ನಮೂನೆಯ ರಸಗೊಬ್ಬರಗಳು ಎಷ್ಟೆಷ್ಟು ಇವೆ ಎಂಬುದನ್ನು ನಮ್ಮ ಆನ್ಲೈನ್‌ ಡ್ಯಾಷ್‌ಬೋರ್ಡ್ – ʼಸಂಯೋಜಿತ ರಸಗೊಬ್ಬರ ಪರಿಶೀಲನಾ ವ್ಯವಸ್ಥೆ’ (ಐಎಫ್‌ಎಂಎಸ್) – ಮೂಲಕ ಪ್ರತಿದಿನವೂ ಪರಿಶೀಲಿಸಲಾಗುತ್ತದೆ ಮತ್ತು ಅಗತ್ಯಕ್ಕೆ ತಕ್ಕಂತೆ ರಸಗೊಬ್ಬರ ಪೂರೈಕೆಗೆ ಕ್ರಮಕೈಗೊಳ್ಳಲಾಗುತ್ತದೆ ಎಂದು ಸದಾನಂದ ಗೌಡ ವಿವರಿಸಿದರು.

ಸದಸ್ಯರ (ವಿಜಯಸಾಯಿ ರೆಡ್ಡಿ) ನಿರ್ದಿಷ್ಟ ಪ್ರಶ್ನೆಗೆ ಉತ್ತರಿಸಿದ ಸಚಿವರು ಆಂಧ್ರಪ್ರದೇಶದಲ್ಲಿ ಯಾವುದೇ ನಮೂನೆಯ ಗೊಬ್ಬರ ಕೊರತೆಯಾಗಿಲ್ಲ, ರಾಜ್ಯಕ್ಕೆ (ಎಪಿ) ಪ್ರಸಕ್ತ ಸಾಲಿನಲ್ಲಿ (2020-21) ಇದುವರೆಗೆ 17.5 ಲಕ್ಷ ಟನ್‌ ಯೂರಿಯಾ, 4 ಲಕ್ಷ ಟನ್‌ ಡಿಎಪಿ, 2.8 ಲಕ್ಷ ಟನ್‌ ಎಂಓಪಿ ಹಾಗೂ 13.5 ಲಕ್ಷ ಟನ್‌ ಎನ್‌ಪಿಕೆ ನಮೂನೆ ರಸಗೊಬ್ಬರ ಪೂರೈಕೆಯಾಗಿದೆ ಎಂದು ವಿವರಿಸಿದರು.

ಸಭಾಪೀಠದಲ್ಲಿದ್ದ ಉಪ-ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಕೋವಿಡ್ ಸಾಂಕ್ರಮಿಕದ ಮಧ್ಯೆಯೂ ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಂಡ ಸಚಿವ ಶ್ರೀ ಡಿ ವಿ ಸದಾನಂದ ಗೌಡರನ್ನು ಅಭಿನಂದಿಸಿದರು. ಸದಸ್ಯ ಜಿ.ಬಿ.ಎಲ್‌ ನರಸಿಂಹ ರಾವ್‌ ಅವರೂ ಮೆಚ್ಚುಗೆ ವ್ಯಕ್ತಪಡಿಸಿದರು.

ಇದನ್ನೂ ಓದಿ:  “ಮಾನವನ ಕೂದಲಿಗಿಂತ 10 ಪಟ್ಟು ಸಣ್ಣದಿರುವ ಬ್ರೈನ್ ಮೆಷಿನ್” ಅಭಿವೃದ್ಧಿಯಲ್ಲಿ ಎಲೊನ್ ಮಸ್ಕ್.!

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.