6 ಜಿಲ್ಲೆಗಳಲ್ಲಿ ದಾಖಲೆ ಚಳಿ!


Team Udayavani, Oct 31, 2018, 6:00 AM IST

z-34.jpg

ಬೆಂಗಳೂರು: ರಾಜ್ಯದ ಆರು ಜಿಲ್ಲೆಗಳಲ್ಲಿ ಒಂದೇ ದಿನದಲ್ಲಿ ಹಿಂದೆಂದಿಗಿಂತ ಕನಿಷ್ಠ ಉಷ್ಣಾಂಶ ದಾಖಲಾಗಿದ್ದು, ತೀವ್ರ ಚಳಿಯಿಂದ ಆ ಪ್ರದೇಶಗಳು ಮಂಗಳವಾರ ಅಕ್ಷರಶಃ ಗಡಗಡ ನಡುಗಿವೆ. ಮೈಸೂರು, ವಿಜಯಪುರ, ಧಾರವಾಡ, ಹಾವೇರಿ, ಚಾಮರಾಜನಗರ, ದಾವಣಗೆರೆಯಲ್ಲಿ ಬೆಳಗ್ಗೆ 8.30ಕ್ಕೆ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಈ ಆರೂ ಜಿಲ್ಲೆಗಳು ಅಕ್ಟೋಬರ್‌ನಲ್ಲಿ ಈ ಹಿಂದೆ ಇದ್ದ ಅತಿ ಕನಿಷ್ಠ ಉಷ್ಣಾಂಶದ ಎಲ್ಲ ದಾಖಲೆಗಳನ್ನೂ ಸರಿಗಟ್ಟಿವೆ. ಅದರಲ್ಲೂ ವಿಜಯಪುರ 121 ವರ್ಷಗಳ ಇತಿಹಾಸವನ್ನು ನುಚ್ಚುನೂರು ಮಾಡಿದೆ. ಅಲ್ಲಿ ಮಂಗಳವಾರ ಕನಿಷ್ಠ 11.8 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇತ್ತು. ಈ ಹಿಂದೆ ಅಂದರೆ 1897ರ ಅ. 31ರಂದು 12.2 ಡಿಗ್ರಿ ಸೆಲ್ಸಿಯಸ್‌ ಇತ್ತು. ಇದು ಈವರೆಗೆ ಸಾರ್ವಕಾಲಿಕ ದಾಖಲೆಯಾಗಿತ್ತು. ಅದೇ ರೀತಿ, ಮೈಸೂರಿನಲ್ಲಿ 11.2 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದ್ದು, 1974ರ ಅ. 31ರಂದು ಇಲ್ಲಿ ಅತಿ ಕನಿಷ್ಠ ಉಷ್ಣಾಂಶ 12.9 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿತ್ತು. ಉಳಿದಂತೆ ಚಾಮರಾಜನಗರ 12 ಡಿಗ್ರಿ, ದಾವಣಗೆರೆ 12.3 ಡಿಗ್ರಿ ಮತ್ತು ಹಾವೇರಿ 13 ಡಿಗ್ರಿ ಉಷ್ಣಾಂಶ ಇದ್ದು, 18 ವರ್ಷಗಳ ದಾಖಲೆ ಸರಿಗಟ್ಟಿವೆ.

ಒಣಹವೆ ಕಾರಣ: ಕನಿಷ್ಠ ಉಷ್ಣಾಂಶಕ್ಕೆ ಒಣಹವೆ ಇರುವುದು ಮುಖ್ಯ ಕಾರಣವಾಗಿದ್ದು, ಇದೇ ಹಿನ್ನೆಲೆಯಲ್ಲಿ ಆರು ಜಿಲ್ಲೆಗಳ ಪೈಕಿ ನಾಲ್ಕು ಜಿಲ್ಲೆಗಳು ಅತಿ ಹೆಚ್ಚು ತಾಪಮಾನ ಇರುವ ಉತ್ತರ ಕರ್ನಾಟಕದಲ್ಲೇ ಬರುತ್ತವೆ. ಉಳಿದೆರಡು ದಕ್ಷಿಣ ಒಳನಾಡಿನಲ್ಲಿ ಬರುತ್ತವೆ. ಸುಮಾರು ದಿನಗಳಿಂದ ಮಳೆ ಆಗಿಲ್ಲ; ಮಳೆಗೆ ಪೂರಕವಾದ ಸನ್ನಿವೇಶಗಳೂ ಸೃಷ್ಟಿಯಾಗಿಲ್ಲ. ಇದರಿಂದ ವಾತಾವರಣ ದಲ್ಲಿ ತೇವಾಂಶ ಇಲ್ಲ. ಒಣಹವೆ ಇರುವುದರಿಂದ ಭೂಮಿಗೆ ಬೀಳುವ ಸೂರ್ಯನ ಕಿರಣಗಳು, ಪ್ರತಿಫ‌ಲನಗೊಂಡು ಹೊರಹೋಗುತ್ತವೆ. ಒಂದು ವೇಳೆ ತೇವಾಂಶ ಇದ್ದರೆ, ಈ ಕಿರಣಗಳನ್ನು ಹಿಡಿದಿಡುತ್ತವೆ. ಈ ಕಾರ್ಯ ಆಗದೆ ಇರುವುದು ಕನಿಷ್ಠ ಉಷ್ಣಾಂಶಕ್ಕೆ ಕಾರಣವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಪ್ರಾದೇಶಿಕ ಕಚೇರಿ ನಿರ್ದೇಶಕ ಸಿ.ಎಸ್‌. ಪಾಟೀಲ ಸ್ಪಷ್ಟಪಡಿಸಿದರು. ಈ ಮಧ್ಯೆ ಇಡೀ ರಾಜ್ಯದ ಅಂಕಿ-ಅಂಶಗಳನ್ನು ತೆಗೆದುಕೊಂಡರೆ ಮಂಗಳವಾರ ಮೈಸೂರಿನಲ್ಲಿ ಅತಿ ಕನಿಷ್ಠ 11.2 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದೆ. ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ 36.4 ಡಿಗ್ರಿ ಸೆಲ್ಸಿಯಸ್‌ ಇತ್ತು. ಬುಧವಾರ ಕೂಡ ಇದೇ ವಾತಾವರಣ ಇರಲಿದೆ ಎಂದು ಇಲಾಖೆ ತಿಳಿಸಿದೆ.

ನ. 1ಕ್ಕೆ ಹಿಂಗಾರು ಪ್ರವೇಶ?: ಈ ನಡುವೆ ನವೆಂಬರ್‌ 1ರಂದು ರಾಜ್ಯಕ್ಕೆ ಈಶಾನ್ಯ ಮಾರುತಗಳು ಪ್ರವೇಶಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮುಂದಿನ ಎರಡು-ಮೂರು ದಿನಗಳಲ್ಲಿ ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಒಳನಾಡಿನ ಆಯ್ದ ಭಾಗಗಳಲ್ಲಿ ಹಗುರವಾದ ಮಳೆ ಆಗಲಿದೆ ಎಂದು ಸಿ.ಎಸ್‌. ಪಾಟೀಲ ತಿಳಿಸಿದ್ದಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.