ನಿರಾಶ್ರಿತರ ಕೇಂದ್ರಗಳಿಗೇ ಇಲ್ಲ ಆಶ್ರಯ!


Team Udayavani, Apr 21, 2019, 3:00 AM IST

nirashrita

ಬೆಂಗಳೂರು: ನಗರದ ರಸ್ತೆ ಬದಿಗಳಲ್ಲಿ ಜೀವನ ಸಾಗಿಸುತ್ತಿದ್ದ ಹಲವು ನಿರಾಶ್ರಿತರಿಗೆ ಸ್ವಯಂ ಸೇವಾ ಸಂಸ್ಥೆಗಳು ನಿರಾಶ್ರಿತರ ಕೇಂದ್ರ ತೆರೆಯುವ ಮೂಲಕ ನೆಮ್ಮದಿಯ ಬದುಕು ಕಟ್ಟಿಕೊಟ್ಟಿವೆ. ಆದರೆ, ಈ ನಿರಾಶ್ರಿತರ ಕೇಂದ್ರಗಳಿಗೆ ಒಂದುವರೆ ವರ್ಷದಿಂದ ಸರ್ಕಾರ ಸಹಾಯಧನ ನೀಡಿಲ್ಲ. ಒಂದು ಲೆಕ್ಕದಲ್ಲಿ ನಿರಾಶ್ರಿತರ ಕೇಂದ್ರಗಳಿಗೇ ಆಶ್ರಯ ಇಲ್ಲದಂತಾಗಿದೆ.

ಬೆಂಗಳೂರಿನಲ್ಲಿ ನಾಲ್ಕು ಸ್ವಯಂ ಸೇವಾ ಸಂಸ್ಥೆಗಳು ನಿರಾಶ್ರಿತರ ಕೇಂದ್ರಗಳನ್ನು ನಡೆಸುತ್ತಿವೆ. ಈ ಕೇಂದ್ರಗಳಿಗೆ ಬಿಬಿಎಂಪಿಯಿಂದ ಲಕ್ಷಾಂತರ ರೂ. ಬಾಕಿ ಬರಬೇಕಿದೆ. ಗೂಡ್‌ಶೆಡ್‌ ರಸ್ತೆ, ರಾಜಾಜಿನಗರ, ಬೊಮ್ಮನಹಳ್ಳಿ ಮತ್ತು ಹಲಸೂರಿನಲ್ಲಿ ನಿರಾಶ್ರಿತರ ಕೇಂದ್ರಗಳಿದ್ದು, ಕಾರ್ಡ್ಸ್‌, ಸುರಭಿ ಮತ್ತು ಸ್ಪರ್ಶ ಸ್ವಯಂ ಸೇವಾ ಸಂಸ್ಥೆಗಳು ಈ ಕೇಂದ್ರಗಳನ್ನು ನಡೆಸುತ್ತಿವೆ.

“ಸರಿಯಾದ ಸಮಯದಲ್ಲಿ ಹಣ ಸಂದಾಯವಾಗದೆ ಇರುವುದರಿಂದಲೇ ಸ್ವಯಂ ಸೇವಾ ಕೇಂದ್ರಗಳು ನಡೆಸುತ್ತಿದ್ದ ಹಲವು ನಿರಾಶ್ರಿತ ಕೇಂದ್ರಗಳನ್ನು ನಿಲ್ಲಿಸಲಾಗಿದೆ. ಮುನ್ನಡೆಸಿಕೊಂಡು ಹೋಗುವ ಇಚ್ಛಾಶಕ್ತಿ ಇರುವ ಮತ್ತು ಆರ್ಥಿಕವಾಗಿ ಸದೃಢವಾಗಿರುವವರು ಮಾತ್ರ ಕೇಂದ್ರಗಳನ್ನು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ’ ಎನ್ನುತ್ತಾರೆ ಸುರಭಿ ಸ್ವಯಂ ಸೇವಾ ಸಂಸ್ಥೆಯ ಅಧ್ಯಕ್ಷ ಪಾಟೀಲ್‌.

ಪ್ರಸ್ತಾವನೆ ಸಲ್ಲಿಸದ ಬಿಬಿಎಂಪಿ: ನಿರಾಶ್ರಿತರ ಕೇಂದ್ರಗಳಿಗೆ ಕೇಂದ್ರ ಸರ್ಕಾರದ ರಾಷ್ಟ್ರೀಯ ನಗರ ಜೀವನೋಪಾಯ ಮಿಷನ್‌ ಸಹಾಧನ ನೀಡುತ್ತದೆ. ಆದರೆ ಈ ಹಣವನ್ನು ಅಲ್ಲಿಂದ ನೇರವಾಗಿ ಪಡೆಯಲು ಸಾಧ್ಯವಿಲ್ಲ. ನಗರದಲ್ಲಿರುವ ನಿರಾಶ್ರಿತರ ಕೇಂದ್ರಗಳಿಗೆ ಹಣ ಬಿಡುಗಡೆ ಮಾಡುವಂತೆ ಬಿಬಿಎಂಪಿ ರಾಷ್ಟ್ರೀಯ ನಗರ ಜೀವನೋಪಾಯ ಮಿಷನ್‌ಗೆ ಪ್ರಸ್ತಾವನೆ ಸಲ್ಲಿಸಬೇಕು. ಬಿಬಿಎಂಪಿ ಸಕಾಲದಲ್ಲಿ ಪ್ರಸ್ತಾವನೆ ಸಲ್ಲಿಸದೆ ಇರುವುದರಿಂದಲೇ ಸಮಸ್ಯೆ ಉದ್ಬವಿಸಿದೆ ಎಂದು ಸ್ವಯಂ ಸೇವಾ ಸಂಸ್ಥೆಗಳು ಆರೋಪ ಮಾಡಿವೆ.

ಸಮೀಕ್ಷೆ ವರದಿಯಲ್ಲಿ ಏನಿದೆ?: ನಗರದಲ್ಲಿರುವ ನಿರಾಶ್ರಿತರ ಪತ್ತೆಗಾಗಿ ಮತ್ತು ಅವರಿಗೆ ಸೂಕ್ತ ಆಶ್ರಯ ಕಲ್ಪಿಸುವ ಉದ್ದೇಶದಿಂದ ಬೆಂಗಳೂರಿನ 250 ಸ್ವಯಂ ಸೇವಾ ಸಂಸ್ಥೆಗಳು “ಇಂಪ್ಯಾಕ್ಟ್ ಇಂಡಿಯಾ’ ತಂಡ ರಚಿಸಿಕೊಂಡು ಸಮೀಕ್ಷೆ ನಡೆಸಿದ್ದವು. ಈ ವೇಳೆ ನಗರದಲ್ಲಿ 6 ಸಾವಿರ ನಿರಾಶ್ರಿತರು ಇರುವ ಬಗ್ಗೆ ಬಿಬಿಎಂಪಿ ಆಯುಕ್ತರಿಗೆ ದಾಖಲೆ ಸಹಿತ ವರದಿ ಸಲ್ಲಿಸಲಾಗಿತ್ತು.

10 ತಂಡಗಳು, 9 ವಲಯಗಳಲ್ಲಿ, ಎರಡು ಹಂತದಲ್ಲಿ ಸಮೀಕ್ಷೆ ನಡೆಸಿವೆ. ರಾತ್ರಿ 10 ರಿಂದ ಬೆಳಗ್ಗೆ 3 ಗಂಟೆವರೆಗೆ ಸಿಟಿ ಮಾರ್ಕೆಟ್‌, ರೈಲು ನಿಲ್ದಾಣ ಮತ್ತು ನಗರದ ರಸ್ತೆ ಬದಿಗಳಲ್ಲಿ ವಾಸವಾಗಿದ್ದ ನಿರಾಶ್ರಿತರ ಬಗ್ಗೆ ಈ ತಂಡಗಳ ಸದಸ್ಯರು ಸಮೀಕ್ಷೆ ನಡೆಸಿದ್ದರು.

ಹುಸಿಯಾದ ಬಿಬಿಎಂಪಿ ಭರವಸೆ: ನಿರಾಶ್ರಿತರಿಗೆ ಕನಿಷ್ಠ 10 ಸಹಾಯ ಕೇಂದ್ರಗಳನ್ನದರೂ ಸ್ಥಾಪಿಸಬೇಕು ಎಂದು ಸ್ವಯಂ ಸೇವಾ ಸಂಸ್ಥೆಗಳು ಮನವಿ ಮಾಡಿದ್ದವು. ಇದಕ್ಕೆ ಸ್ಪಂದಿಸಿದ್ದ ಬಿಬಿಎಂಪಿ, ಈ 2019ರ ಮಾರ್ಚ್‌ 30ರ ಒಳಗೆ 10 ನಿರಾಶ್ರಿತರ ಕೇಂದ್ರಗಳನ್ನು ತೆರೆಯವ ಭರವಸೆ ನೀಡಿತ್ತು. ಆದರೆ, ಇದುವರೆಗೆ ಒಂದೂ ಕೇಂದ್ರ ತೆರೆದಿಲ್ಲ.

ಸಮೀಕ್ಷೆ ವೇಳೆ ಸಿಕ್ಕ ಒಂಟಿ ಮಹಿಳೆಯರು ಮತ್ತು ವೃದ್ಧೆಯರಿಗೆ ಶಾಂತಿನಗರದ ನೈಟಿಂಗೇಲ್‌ ಸ್ವಯಂ ಸೇವಾ ಸಂಸ್ಥೆ ಆಶ್ರಯ ನೀಡಿದೆ. ನಿರಾಶ್ರಿತರ ಕೇಂದ್ರಗಳನ್ನು ತೆರೆಯವುದಕ್ಕೆ ಮೆಜೆಸ್ಟಿಕ್‌, ಕಲಾಸಿಪಾಳ್ಯ, ರಾಜರಾಜೇಶ್ವರಿ ನಗರ, ದಾಸರಹಳ್ಳಿ, ಯಲಹಂಕ ಮತ್ತು ಕ್ವೀನ್ಸ್‌ ರಸ್ತೆಯಲ್ಲಿನ ಬಿಬಿಎಂಪಿಯ ಖಾಲಿ ಕಟ್ಟಡಗಳನ್ನು ಕೂಡ ಸ್ವಯಂ ಸೇವಾ ಸಂಸ್ಥೆಗಳೇ ಗುರುತಿಸಿ ಬಿಬಿಎಂಪಿಗೆ ಪಟ್ಟಿ ನೀಡಿವೆ. ಆದರೆ, ಯಾವುದೂ ಕಾರ್ಯರೂಪಕ್ಕೆ ಬಂದಿಲ್ಲ.

ಸಮೀಕ್ಷೆ ವೇಳೆ 400ರಿಂದ 600 ಮಂದಿ, 16ರಿಂದ 18 ವರ್ಷದ ಒಳಗಿನ ನಿರಾಶ್ರಿತರು ಪತ್ತೆಯಾಗಿದ್ದಾರೆ. ವರೆಲ್ಲಾ ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಇವರ ಭವಿಷ್ಯ, ವಿದ್ಯಾಭ್ಯಾಸದ ದೃಷ್ಟಿಯಿಂದ ನಿರಾಶ್ರಿತರ ಕೇಂದ್ರ ಅತ್ಯಗತ್ಯ.
-ಉದಯ್‌ ಕುಮಾರ್‌, ಇಂಪ್ಯಾಕ್ಟ್ ಇಂಡಿಯಾ ನಿರ್ದೇಶಕ

ನಿರಾಶ್ರಿತ ಕೇಂದ್ರ ತೆರೆಯಲು ಬಿಬಿಎಂಪಿ ಒಪನ್‌ ಟೆಂಡರ್‌ ಕರೆಯುತ್ತದೆ. ಆದರೆ ಈ ಪ್ರಕ್ರಿಯೆಯಲ್ಲಿ ಅನುಭವ ಇಲ್ಲದವರು ಭಾಗವಹಿಸುತ್ತಾರೆ. ಅದಕ್ಕೆ ಬದಲಾಗಿ ಅನುಭವಿ ಸ್ವಯಂ ಸೇವಾ ಸಂಸ್ಥೆಗಳನ್ನು ಪಟ್ಟಿ ಮಾಡಿ ಟೆಂಡರ್‌ ಕರೆಯಬೇಕು.
-ಸಂಪತ್‌, ಇಂಪ್ಯಾಕ್ಟ್ ಇಂಡಿಯಾ ಸಂಯೋಜಕ

* ಹಿತೇಶ್‌ ವೈ

ಟಾಪ್ ನ್ಯೂಸ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.