ಕೆಂಪಾಂಬುದಿ ಕೆರೆಗೆ ಹೊಸ ಕಳೆ
Team Udayavani, Mar 15, 2018, 12:21 PM IST
ಬೆಂಗಳೂರು: ನಾಡಪ್ರಭು ಕೆಂಪೇಗೌಡರು 16ನೇ ಶತಮಾನದಲ್ಲಿ ನಿರ್ಮಿಸಿದ ಐತಿಹಾಸಿಕ “ಕೆಂಪಾಂಬುದಿ ಕೆರೆ’ಗೆ ಕಾಯಕಲ್ಪ ಸಿಕ್ಕಿದೆ. ಸಿಎಂ ನಗರೋತ್ಥಾನ ಯೋಜನೆ ಮತ್ತು ಬಿಬಿಎಂಪಿ ವತಿಯಿಂದ ಕೆರೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿದ್ದು, ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಬುಧವಾರ ಕೆರೆಯನ್ನು ಸಾರ್ವಜನಿಕ ಬಳಕೆಗೆ ಸಮರ್ಪಿಸಿದರು.
ಒತ್ತುವರಿ, ದುರ್ವಾಸನೆ, ಕೊಳಚೆ ನೀರು ಮತ್ತು ತ್ಯಾಜ್ಯಗಳಿಂದ ತುಂಬಿ ನಿರ್ಜೀವಗೊಂಡಿದ್ದ ಗವಿಪುರ ಬಳಿಯ ಕೆರೆ ಈಗ ಜೀವ ತುಂಬಿಕೊಂಡಿದೆ. ಕೆರೆಯನ್ನು ಸಾರ್ವಜನಿಕರ ಬಳಕೆಗೆ ಸಮರ್ಪಿಸಿದ ಬಳಿಕ ಮಾತನಾಡಿದ ಸಚಿವ ಕೆ.ಜೆ.
ಜಾರ್ಜ್, ಕುಡಿಯುವ ನೀರಿಗೆಂದು ಕೆಂಪೇಗೌಡರು ಈ ಕೆರೆ ಕಟ್ಟಿಸಿದ್ದರು. ಕೆರೆಗೆ ಶತಮಾನಗಳ ಇತಿಹಾಸವಿದೆ. ಆದರೆ,
ಕಾಲಕ್ರಮೇಣ ಒತ್ತುವರಿ, ತ್ಯಾಜ್ಯ ನೀರು ಸೇರ್ಪಡೆ ಇತ್ಯಾದಿ ಕಾರಣಗಳಿಂದಾಗಿ ಕೆರೆ ತನ್ನ ಮೂಲ ಸ್ವರೂಪ ಮತ್ತು ಮಹತ್ವ ಕಳೆದುಕೊಂಡಿತ್ತು. ಇದೀಗ ಕೆರೆಗೆ ಕಾಯಕಲ್ಪ ನೀಡಲಾಗಿದೆ ಎಂದರು. ಶಾಸಕ ಆರ್.ವಿ.ದೇವರಾಜ್ ಇತರರು ಇದ್ದರು.
ಗಿಮಿಕ್ ಅನಿವಾರ್ಯತೆ ನಮಗಿಲ್ಲ: ಬೆಂಗಳೂರನ್ನು ಲೂಟಿ ಮಾಡಿದವರು ಇಂದು ಬೆಂಗಳೂರು ರಕ್ಷಿಸಿ ಎಂದು ಹೋರಾಟ ಮಾಡುತ್ತಿದ್ದಾರೆ ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್, ಪರೋಕ್ಷವಾಗಿ ಬಿಜೆಪಿ ವಿರುದ್ಧ ಹರಿಹಾಯ್ದರು. “ಕೆರೆ ಹಬ್ಬ’ದ ನೆಪದಲ್ಲಿ ಕಾಂಗ್ರೆಸ್ ಪಕ್ಷದ ಪ್ರಚಾರದ ಗಿಮಿಕ್ ಮಾಡುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಗಿಮಿಕ್ ಮಾಡುವ ಅನಿವಾರ್ಯತೆ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ