ಅಕ್ರಮ ಸಂಬಂಧ; ಅಂದಗೆಟ್ಟ ವಿವಾಹ ಬಂಧ; ಮೂರೂವರೆ ವರ್ಷದಲ್ಲಿ 981 ಕೇಸ್‌


Team Udayavani, Aug 21, 2022, 12:52 PM IST

ಅಕ್ರಮ ಸಂಬಂಧ; ಅಂದಗೆಟ್ಟ ವಿವಾಹ ಬಂಧ; ಮೂರೂವರೆ ವರ್ಷದಲ್ಲಿ 981 ಕೇಸ್‌

ಬೆಂಗಳೂರು: ವರದಕ್ಷಿಣೆ ಕಿರುಕುಳ, ಸಮನ್ವಯತೆ ಕೊರತೆ, ದಂಪತಿ ನಡುವಿನ ಜಗಳ, ಪ್ರತಿಷ್ಠೆಗೆ ವಿವಾಹ ವಿಚ್ಛೇದನಗಳು ನಡೆಯುತ್ತಿರುವುದು ಒಂದೆಡೆಯಾದರೆ ಇತ್ತೀಚೆಗೆ ಅಕ್ರಮ ಸಂಬಂಧ ದಿಂದಾಗಿ ವಿವಾಹ ಬಂಧದಲ್ಲಿ ಬಿರುಕು ಮೂಡುತ್ತಿರುವ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚಾಗುತ್ತಿದೆ.

ಅತಿಯಾದ ಸಾಮಾಜಿಕ ಜಾಲತಾಣ ಬಳಕೆ ಇದಕ್ಕೆ ಕಾರಣ ಎಂಬುದು ಆತಂಕಕಾರಿ ವಿಷಯ ವಾಗಿದೆ. ಈ ಪೈಕಿ ಫೇಸ್‌ಬುಕ್‌, ಇನ್‌ಸ್ಟಾ ಗ್ರಾಂನಂತಹ ಸಾಮಾಜಿಕ ಜಾಲತಾಣಗಳಲ್ಲಿ ಪರಿಚಯವಾಗುವ ಅಪರಿಚಿತರ ಮೇಲೆ ಆಕರ್ಷಣೆಗೊಳಗಾಗಿ ಸಂಬಂಧ ಹೊಂದುವುದು, ಪತಿಯಿಂದ ನಿರ್ಲಕ್ಷ್ಯ, ದಂಪತಿ ನಡುವೆ ಸಾಮ ರಸ್ಯದ ಕೊರತೆ, ಕೆಲ ವೈಯಕ್ತಿಕ ಸಮಸ್ಯೆಗಳಿಂದ 3ನೇ ವ್ಯಕ್ತಿ ಜತೆಗೆ ದೈಹಿಕ ಸಂಬಂಧ ಹೊಂದುವ ಪ್ರಕರಣಗಳೇ ಅಧಿಕವಾಗಿದೆ. ಕಳೆದ ಮೂರೂವರೆ ವರ್ಷಗಳಲ್ಲಿ ಅಕ್ರಮ ಸಂಬಂಧದಿಂದ ವಿಚ್ಛೇದನ ಹಂತ ತಲುಪಿದ 981 ಪ್ರಕರಣಗಳು ಪರಿಹಾರ್‌ ವನಿತಾ ಸಹಾಯವಾಣಿ ಕೇಂದ್ರದ ಮೆಟ್ಟಿಲೇರಿವೆ.

ವಿವಾಹಪೂರ್ವ ಹಾಗೂ ವಿವಾಹ ನಂತರದ ಅಕ್ರಮ ಸಂಬಂಧ ಬೆಳಕಿಗೆ ಬಂದು ಸಂಗಾತಿಗಳು ಪ್ರತ್ಯೇಕವಾಗುವ ಪ್ರಮಾಣ ಹೆಚ್ಚುತ್ತಿದೆ. ಕೋರ್ಟ್‌ನಲ್ಲಿ ವಿಚಾರಣಾ ಹಂತದಲ್ಲಿರುವ ಸಾವಿರಾರು ವಿಚ್ಛೇದನ ಪ್ರಕರಣಗಳ ಪೈಕಿ ಶೇ.50 ಕೇಸ್‌ಗಳಲ್ಲಿ ದಾಂಪತ್ಯ ಕಡಿದುಕೊಳ್ಳಲು ಅಕ್ರಮ ಸಂಬಂಧವೇ ಪ್ರಮುಖ ಕಾರಣ ಎಂದು ಮಹಿಳಾ ಸಹಾಯವಾಣಿಯ ಆಪ್ತ ಸಮಾಲೋಚಕಿಯೊಬ್ಬರು ತಿಳಿಸಿದ್ದಾರೆ.

ವಿವಿಧ ಪ್ರಕರಣಗಳು :

ಪತಿಗೆ ಕಾಣದಂತೆ ಗೋವಾದಲ್ಲಿ ಮೀಟಿಂಗ್‌ :

ಬೆಂಗಳೂರಿನ ವಿವಾಹಿತ ಶಿಕ್ಷಕಿಯೊಬ್ಬರು ಫೇಸ್‌ ಬುಕ್‌ನಲ್ಲಿ ಪರಿಚಯವಾದ ರಾಜಸ್ಥಾನ ಮೂಲದ ವ್ಯಕ್ತಿಯ ಜತೆ ಸಲುಗೆ ಬೆಳೆಸಿಕೊಂಡಿದ್ದಳು. ಆತನೇ ಸ್ವತಃ ಶಿಕ್ಷಕಿಗೆ ವಿಮಾನದ ಟಿಕೆಟ್‌ ಬುಕ್‌ ಮಾಡಿ ಗೋವಾಕ್ಕೆ ಕರೆಸಿಕೊಳ್ಳುತ್ತಿದ್ದ. ಆತನೂ ರಾಜಸ್ಥಾನದಿಂದ ವಿಮಾನದಲ್ಲಿ ಗೋವಾಕ್ಕೆ ಬರುತ್ತಿದ್ದ. ಶಾಲಾ ಕೆಲಸದ ಮೀಟಿಂಗ್‌ ನೆಪ ಹೇಳಿ 2-3 ದಿನ ಮನೆಗೆ ಬಾರದ ಶಿಕ್ಷಕಿ ನಡೆಯಿಂದ ಅನುಮಾನಗೊಂಡ ಪತಿ, ಆಕೆಯನ್ನು ಹಿಂಬಾಲಿಸಿಕೊಂಡು ವಿಮಾನ ನಿಲ್ದಾಣಕ್ಕೆ ಹೋದಾಗ ಕೃತ್ಯ ಬಯಲಾಗಿದ್ದು ಪತಿ ವಿಚ್ಛೇದನ ಕೊಡಲು ಮುಂದಾಗಿದ್ದಾರೆ.

ಮೊಬೈಲ್ಚಾಟಿಂಗ್ಅಧಿಕಾರಿಗೆ ತಂದ ಆಪತ್ತು : ಸರ್ಕಾರದ ಉನ್ನತ ಹುದ್ದೆಯಲ್ಲಿರುವ ವಿವಾಹಿತ ಅಧಿಕಾರಿಯೊಬ್ಬರು ಮಹಿಳಾ ಸಹಪಾಠಿ ಜತೆಗೆ ಅಕ್ರಮ ಸಂಬಂಧ ಹೊಂದಿದ್ದರು. ಸದಾ ಮೊಬೈಲ್‌ ಹಿಡಿದು ಚಾಟ್‌ ಮಾಡುತ್ತಿದ್ದರು. ಅಧಿಕಾರಿಯ ವರ್ತನೆಯಿಂದ ಅನುಮಾನಗೊಂಡ ಪತ್ನಿ, ಅವರು ನಿದ್ದೆಗೆ ಜಾರಿದ ಸಮಯದಲ್ಲಿ ಮೊಬೈಲ್‌ ಪರಿಶೀಲಿಸಿದ್ದರು. ಆಗ ಅಧಿಕಾರಿಯ ಅಕ್ರಮ ಸಂಬಂಧ ಬೆಳಕಿಗೆ ಬಂದಿದೆ. ಇದೀಗ ಪತ್ನಿ ಸಹಾಯವಾಣಿ ಸಹಕಾರ ಪಡೆದು ಪತಿಗೆ ವಿಚ್ಛೇದನ ನೀಡಲು ಕೋರ್ಟ್‌ ಮೊರೆ ಹೋಗಿದ್ದಾರೆ.

ಅಕ್ರಮ ಪತ್ತೆ; ಪತ್ನಿಗೆ ಕಿರುಕುಳ : ಕೆಲ ವರ್ಷಗಳ ಹಿಂದೆ ಬೆಂಗಳೂರಿನ ಖಾಸಗಿ ಕಂಪನಿ ಉದ್ಯೋಗಿಯೊಬ್ಬ 34 ವರ್ಷದ ಮಹಿಳೆಯನ್ನು ವಿವಾಹವಾಗಿದ್ದ. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಕಾರ್ಯಕ್ರಮ ವೊಂದರಲ್ಲಿ ಪರಿಚಯವಾದ ಮಹಿಳೆಯ ಜತೆ ಪತಿ ಅಕ್ರಮ ಸಂಬಂಧ ಹೊಂದಿದ್ದ. ಈ ವಿಚಾರ ಪತ್ನಿಯ ಗಮನಕ್ಕೆ ಬಂದು ಪ್ರಶ್ನಿಸಿದ್ದಳು. ಇದೀಗ ಪತ್ನಿಗೆ ಮಾರಣಾಂತಿಕ ಹಲ್ಲೆ ನಡೆಸಿ ಮನೆಯಿಂದ ಹೊರ ಹಾಕಿದ್ದಾನೆ. ಇದೀಗ ಪತ್ನಿ ನ್ಯಾಯಕ್ಕಾಗಿ ಮಹಿಳಾ ಠಾಣೆ ಮೆಟ್ಟಿಲೇರಿದ್ದಾಳೆ.

3 ತಿಂಗಳಲ್ಲಿ 86 ದಂಪತಿ ಸಹಾಯವಾಣಿ ಮೊರೆ : 2019 ರಿಂದ 2022ಜುಲೈವರೆಗೆ 323 ವಿವಾಹ ಪೂರ್ವ ಹಾಗೂ 638 ವಿವಾಹದ ನಂತರದ ಅಕ್ರಮ ಸಂಬಂಧದ ಕೇಸ್‌ಗಳು ಪರಿಹಾರ್‌-ವನಿತಾ ಸಹಾಯವಾಣಿಯಲ್ಲಿ ದಾಖಲಾಗಿವೆ. ಕಳೆದ ಏಪ್ರಿಲ್‌ ನಿಂದ-ಜುಲೈವರೆಗೆ 3 ತಿಂಗಳಲ್ಲಿ ಅಕ್ರಮ ಸಂಬಂಧದಿಂದ ಪ್ರತ್ಯೇಕವಾಗಿರುವ 86 ದಂಪತಿ ಸಮಸ್ಯೆ ಪರಿಹಾರಕ್ಕೆ ಸಹಾಯವಾಣಿ ಮೊರೆ ಹೋಗಿದ್ದಾರೆ. ದಂಪತಿ ತಾಳ್ಮೆಯಿಂದ ತಮ್ಮ ಸಮಸ್ಯೆಗಳನ್ನು ಪರಸ್ಪರ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು. ಪತಿ- ಪತ್ನಿಯರ ನಡುವಿನ ಬಿರುಕುಗಳಿಗೆ ಕೂಸು ಬಡವಾಗಬಾರದು. ಪ್ರಮಿಳಾ ನಾಯ್ಡು, ಅಧ್ಯಕ್ಷೆ, ಕರ್ನಾಟಕ ಮಹಿಳಾ ಆಯೋಗ

ಅವಿನಾಶ್ಮೂಡಂಬಿಕಾನ

ಟಾಪ್ ನ್ಯೂಸ್

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.