ಕಿತ್ತು ಬಂದ ಬೋಲ್ಟ್ಗಳು: ವಾಹನ ಸವಾರರ ಪರದಾಟ
Team Udayavani, Nov 23, 2022, 12:31 PM IST
ಬೆಂಗಳೂರು: ಮೈಸೂರು ರಸ್ತೆ ಮೇಲ್ಸೇತುವೆ ನಿರ್ವಹಣೆ ಕೊರತೆಯಿಂದಾಗಿ ಮೇಲ್ಸೇತುವೆಯ ಜಾಯಿಂಟ್ಗಳಲ್ಲಿನ ಬೋಲ್ಟ್ಗಳು ಮೇಲೆ ಬಂದಿದ್ದು ವಾಹನ ಸವಾರರು ಸಮಸ್ಯೆ ಅನುಭವಿಸುವಂತಾಗಿದೆ.
ಸುಮನಹಳ್ಳಿ ಮೇಲ್ಸೇತುವೆಯಲ್ಲಿ ಗುಂಡಿ ಬಿದ್ದ ಪರಿಣಾಮ ಆ ಮೇಲ್ಸೇತುವೆಯಲ್ಲಿ ಸಂಚರಿಸಲು ವಾಹನ ಸವಾರರು ಆತಂಕ ಪಡುವಂತಾಗಿದೆ.
ಅದೇ ರೀತಿ ಇದೀಗ ಮೈಸೂರು ರಸ್ತೆಯಲ್ಲಿ ಅಸಮರ್ಪಕ ನಿರ್ವಹಣೆಯಿಂದಾಗಿ ಕೆ.ಆರ್. ಮಾರುಕಟ್ಟೆಯಿಂದ ಮೈಸೂರು ರಸ್ತೆಗೆ ಮಾರ್ಗದ ಮೈಸೂರು ರಸ್ತೆ ಮೇಲ್ಸೇತುವೆಯ ಜಾಯಿಂಟ್ಗಳಲ್ಲಿ ಬೋಲ್ಟ್ಗಳು ಮೇಲೆ ಬಂದಿವೆ. ಅದರಿಂದಾಗಿ ಮಂಗಳವಾರ 8ಕ್ಕೂ ಹೆಚ್ಚಿನ ವಾಹನಗಳ ಚಕ್ರಕ್ಕೆ ಹಾನಿಯಾಗಿ ಚಾಲಕರು ಪರದಾಡುವಂತಾಗಿತ್ತು. ಇದನ್ನು ಗಮನಿಸಿದ ಸಂಚಾರ ಪೊಲೀಸರು ಬೋಲ್ಟ್ಗಳು ಮೇಲೆ ಬಂದಿದ್ದ ಸ್ಥಳದಲ್ಲಿ ಬ್ಯಾರಿಕೇಡ್ಗಳನ್ನು ಅಳವಡಿಸಿದ್ದರು.
ಆದರೆ, ಬಿಬಿಎಂಪಿ ಅಧಿಕಾರಿಗಳು ಮಾತ್ರ ಸ್ಥಳಕ್ಕೆ ಬಂದು ಪರಿಶೀಲಿಸಿ, ಸಮಸ್ಯೆ ನಿವಾರಣೆ ಮಾಡುವ ಕೆಲಸ ಮಾಡಲಿಲ್ಲ. ಹೀಗಾಗಿ ಮಂಗಳವಾರ ಮೈಸೂರು ರಸ್ತೆಯಲ್ಲಿ ಸಂಚಾರ ದಟ್ಟಣೆ ಹೆಚ್ಚುವಂತಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು
Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ
Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು
ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ
LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ