“ಬಾಡಿಗೆಗಿದೆ’ ಜಾಹೀರಾತು ನೀಡಿ ವಂಚನೆ: ಬಂಧನ


Team Udayavani, Mar 15, 2019, 6:15 AM IST

badigegide.jpg

ಬೆಂಗಳೂರು: ಫ್ಲ್ಯಾಟ್‌ ಬಾಡಿಗೆ ಹಾಗೂ ಭೋಗ್ಯಕ್ಕೆ ಕೊಡುವುದಾಗಿ ವೈಬ್‌ಸೈಟ್‌ಗಳಲ್ಲಿ ಜಾಹೀರಾತು ನೀಡಿ ಸಾರ್ವಜನಿಕರಿಂದ ಹಣ ಪಡೆದು ವಂಚಿಸುತ್ತಿದ್ದ ಆರೋಪಿಯನ್ನು ಮಾರತ್ತಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಮಾರತ್ತಹಳ್ಳಿ ನಿವಾಸಿ ಮೊಹಮ್ಮದ್‌ ಅಬ್ದುಲ್‌ ರಹೀಂ ಅಲಿಯಾಸ್‌ ಯಾಸೀರ್‌ (46) ಬಂಧಿತ. ಆರೋಪಿ ವಿರುದ್ಧ 2017ರಿಂದ ಇದುವರೆಗೂ ಮಾರತ್ತಹಳ್ಳಿ ಪೊಲೀಸ್‌ ಠಾಣೆಯಲ್ಲಿ ಎಂಟು ವಂಚನೆ ಪ್ರಕರಣಗಳು ದಾಖಲಾಗಿದ್ದು, ಸುಮಾರು 25 ಲಕ್ಷ ರೂ.ಗೂ ಹೆಚ್ಚು ವಂಚನೆ ಮಾಡಿದ್ದಾನೆ ಎಂದು ಪೊಲೀಸರು ಹೇಳಿದರು.

ಆಂಧ್ರಪ್ರದೇಶ ಮೂಲದ ಅಬ್ದುಲ್‌ ರಹೀಂ ನಾಲ್ಕೈದು ವರ್ಷಗಳಿಂದ ಮಾರತ್ತಹಳ್ಳಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಮನೆಗಳ ಬಾಡಿಗೆ ಹಾಗೂ ಭೋಗ್ಯಕ್ಕೆ ಕೊಡಿಸುವ ಮಧ್ಯವರ್ತಿ ಕೆಲಸ ಮಾಡುತ್ತಿದ್ದ. ಈ ಮಧ್ಯೆ “99 ಎಕರ್ಸ್‌’, “ಕಾಮನ್‌ ಫ್ಲೋರ್‌ ಡಾಟ್‌ ಕಾಂ’, “ಮ್ಯಾಜಿಕ್‌ ಬ್ರಿಕ್ಸ್‌’ ರೀತಿಯ ರಿಯಲ್‌ ಎಸ್ಟೇಟ್‌ ಸಂಬಂಧಿ ವೈಬ್‌ಸೈಟ್‌ಗಳಲ್ಲಿ ನಗರ ಹಾಗೂ ನಗರದ ಹೊರವಲಯದ ವಿವಿಧೆಡೆ ತನ್ನ ಮಾಲೀಕತ್ವದಲ್ಲಿ ಹತ್ತಾರು ಅಪಾರ್ಟ್‌ಮೆಂಟ್‌ಗಳಿವೆ.

ನೂರಾರು ಫ್ಲಾಟ್‌ಗಳಿವೆ. ಅವುಗಳನ್ನು ಬಾಡಿಗೆ ಹಾಗೂ ಭೋಗ್ಯಕ್ಕೆ ಕೊಡುತ್ತಿದ್ದೇವೆ ಎಂದು ಜಾಹೀರಾತು ಕೊಡುತ್ತಿದ್ದ. ಇದನ್ನು ಗಮನಿಸಿ ಆರೋಪಿಯನ್ನು ಸಂಪರ್ಕಿಸುತ್ತಿದ್ದ ಸಾರ್ವಜನಿಕರಿಗೆ ಕೆಲ ಫ್ಲಾಟ್‌ಗಳನ್ನು ತೋರಿಸಿ ಮುಂಗಡ ಹಣ ಎಂದು ಲಕ್ಷಾಂತರ ರೂ. ತನ್ನ ಖಾತೆಗೆ ವರ್ಗಾವಣೆ ಮಾಡಿಸಿಕೊಂಡು ವಂಚನೆ ಮಾಡುತ್ತಿದ್ದ ಎಂದು ಪೊಲೀಸರು ಹೇಳಿದರು.

ತಾನೇ ಮಾಲೀಕ ಎಂದು ಸುಳ್ಳು ಹೇಳುತ್ತಿದ್ದ: ಜಾಹೀರಾತು ನೋಡಿ ಆರೋಪಿಯನ್ನು ಸಂಪರ್ಕಿಸುತ್ತಿದ್ದ ಗ್ರಾಹಕರು ಫ್ಲ್ಯಾಟ್‌ ತೋರಿಸುವಂತೆ ಆರೋಪಿಗೆ ದುಂಬಾಲು ಬಿಳುತ್ತಿದ್ದರು. ಹೀಗಾಗಿ ಆರೋಪಿ, ನಗರ ಅಥವಾ ನಗರದ ಹೊರವಲಯದಲ್ಲಿರುವ ಕೆಲ ಅಪಾರ್ಟ್‌ಮೆಂಟ್‌ಗಳ ಮಾಲೀಕರನ್ನು ಸಂಪರ್ಕಿಸಿ, “ತನಗೆ ಪರಿಚಯ ಇರುವ ಕೆಲ ವ್ಯಕ್ತಿಗಳು ಫ್ಲ್ಯಾಟ್‌ಗಳನ್ನು ಬಾಡಿಗೆ ಪಡೆಯಲು ಮುಂದಾಗಿದ್ದು, ತಾವು ಒಪ್ಪಿದರೆ, ಕರೆ ತರುತ್ತೇನೆ’ ಎಂದು ಮೊದಲೇ ಮನೆಯ ಕೀಗಳನ್ನು ಪಡೆದುಕೊಳ್ಳುತ್ತಿದ್ದ. ನಂತರ ತನ್ನ ಗ್ರಾಹಕರನ್ನು ಕರೆದೊಯ್ದು ಈ ಫ್ಲ್ಯಾಟ್‌ಗಳು ತನ್ನ ಹೆಸರಿನಲ್ಲೇ ಇವೆ ಎಂದು ನಂಬಿಸುತ್ತಿದ್ದ.

ಫ್ಲ್ಯಾಟ್‌ ಒಪ್ಪಿಕೊಳ್ಳುತ್ತಿದ್ದ ವ್ಯಕ್ತಿಗಳು ಆರೋಪಿ ಖಾತೆಗೆ ಮುಂಗಡ ಹಣ ಎಂದು ಒಂದರಿಂದ ಮೂರು ಲಕ್ಷ ರೂ.ವರೆಗೆ ವರ್ಗಾವಣೆ ಮಾಡುತ್ತಿದ್ದರು. ನಂತರ ಫ್ಲ್ಯಾಟ್‌ ಕೊಡಿಸದೆ, ಹಣವನ್ನೂ ಹಿಂದಿರುಗಿಸದೆ ಮೊಬೈಲ್‌ ಸ್ವಿಚ್‌ ಆಫ್ ಮಾಡಿಕೊಂಡು ತಲೆಮರೆಸಿಕೊಳ್ಳುತ್ತಿದ್ದ ಎಂದು ಪೊಲೀಸರು ಹೇಳಿದರು. ಆರೋಪಿಯ ವಿರುದ್ಧ ಸುಮಾರು ಎಂಟು ಪ್ರಕರಣಗಳು ದಾಖಲಾದ ಹಿನ್ನೆಲೆಯಲ್ಲಿ ಗಂಭೀರವಾಗಿ ತೆಗೆದುಕೊಂಡ ಪೊಲೀಸರು, ಆರೋಪಿಯ ಮೊಬೈಲ್‌ ನಂಬರ್‌ ಹಾಗೂ ಬ್ಯಾಂಕ್‌ ಖಾತೆಯ ವಿವರ ಪಡೆದು ಬಂಧಿಸಿದ್ದಾರೆ.

ವಿವಿಧ ಹೆಸರುಗಳಲ್ಲಿ ವಂಚನೆ: ಆರೋಪಿಯ ತನ್ನ ಹೆಸರನ್ನು ಮೊಹಮ್ಮದ್‌ ಅಬ್ದುಲ್‌ ರಹೀಂ ಅಲಿಯಾಸ್‌ ಯಾಸೀರ್‌, ರಾಹುಲ್‌ ರಾಹೀಲ್‌, ಎಂ.ಎ.ಆರ್‌.ನೌಮಾನ್‌ ಸಲ್ಮಾನ್‌, ಎಂ.ಎ.ಆರ್‌.ಸಾರೀಕ್‌, ರಾಕೀಬ್‌, ರಿಶಾನ್‌, ಫೈಜೀ ಎಂಬ ಹೆಸರುಗಳಿಂದ ಗ್ರಾಹಕರನ್ನು ಪರಿಚಯಿಸಿಕೊಳ್ಳುತ್ತಿದ್ದ ಎಂಬುದು ತನಿಖೆಯಿಂದ ತಿಳಿದು ಬಂದಿದೆ.

ಆರೋಪಿಯ ವಿರುದ್ಧ ಬೇರೆ ಬೇರೆ ಠಾಣೆಗಳಲ್ಲಿ ವಂಚನೆ ಪ್ರಕರಣಗಳು ದಾಖಲಾಗಿರುವ ಮಾಹಿತಿ ಇದ್ದು, ವಂಚನೆಗೊಳಗಾದ ಸಾರ್ವಜನಿಕರು ಮಾರತ್ತಹಳ್ಳಿ ಠಾಣೆ-080-25639999, 9480801615 ಅಥವಾ ವೈಟ್‌ಫೀಲ್ಡ್‌ ಪೊಲೀಸ್‌ ನಿಯಂತ್ರಣ ಕೊಠಡಿ-080-22942959 ಸಂಪರ್ಕಿಸಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.