ಡಿ.15ರಿಂದ ಸುಮನಹಳ್ಳಿ ಮೇಲ್ಸೇತುವೆ ದುರಸ್ತಿ


Team Udayavani, Dec 11, 2019, 3:05 AM IST

15rinda

ಬೆಂಗಳೂರು: ಸಮನಹಳ್ಳಿ ಮೇಲ್ಸೇತುವೆಯಲ್ಲಿ ತಾಂತ್ರಿಕ ಸಮಸ್ಯೆ ಇದೆ ಎಂದು ಸಿವಿಲ್‌ -ಎಡ್‌ ಟೆಕ್ನೋಕ್ಲಿನಿಕ್‌ ಎಂಬ ಸಂಸ್ಥೆ ವರದಿ ನೀಡಿರುವ ಹಿನ್ನೆಲೆಯಲ್ಲಿ ಮೇಯರ್‌ ಎಂ.ಗೌತಮ್‌ ಕುಮಾರ್‌ ಅವರು ಅಧಿಕಾರಿಗಳೊಂದಿಗೆ ಮಂಗಳವಾರ ಸುಮನಹಳ್ಳಿ ಮೇಲ್ಸೇತುವೆ ಪರಿಶೀಲನೆ ನಡೆಸಿದರು.

ಸೇತುವೆ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮನಹಳ್ಳಿ ಮೇಲ್ಸೇತುವೆಯಲ್ಲಿ ಕೆಲವು ಲೋಪದೋಷಗಳು ಕಂಡು ಬಂದಿದೆ ಎಂದು ಸಿವಿಲ್‌ -ಎಡ್‌ ಟೆಕ್ನೋಕ್ಲಿನಿಕ್‌ ಸಂಸ್ಥೆಯು ಮೇಲ್ಸೇತುವೆಗೆ ಸಂಬಂಧಿಸಿದಂತೆ ವರದಿ ನೀಡಿದೆ. ಈ ಹಿನ್ನೆಲೆಯಲ್ಲಿ ಡಿ.15ರಿಂದ 40 ಲಕ್ಷ ರೂ. ವೆಚ್ಚದಲ್ಲಿ ಮೇಲ್ಸೇತುವೆ ನಿರ್ವಹಣೆ ಮಾಡಲಾಗುವುದು ಎಂದರು.

ಸೇತುವೆ ಬಿಡಿಎಯಿಂದ ಬಿಬಿಎಂಪಿಗೆ ಹಸ್ತಾಂತರವಾದ ಮೇಲೆ ಇದರ ನಿರ್ವಹಣೆ ಹೊಣೆ ಬಿಬಿಎಂಪಿಯದ್ದಾಗಿರುತ್ತೆ. ಹೀಗಾಗಿ, ನಿರ್ವಹಣೆ ವೆಚ್ಚವನ್ನು ಬಿಬಿಎಂಪಿಯೇ ಭರಿಸಲಿದೆ. ಸಂಸ್ಥೆ ಪತ್ತೆ ಮಾಡಿರುವ ಲೋಪದೋಷಗಳನ್ನು 40 ಲಕ್ಷ ವೆಚ್ಚದಲ್ಲಿ ಸರಿ ಪಡಿಸಲಾಗುವುದು ಎಂದರು. ಮೇಲ್ಸೇತುವೆ ನಿರ್ಮಾಣದ ಸಮಯದಲ್ಲಿ ಸಿಮೆಂಟ್‌ ಮಿಶ್ರಣದಲ್ಲಿ ಲೋಪವಾಗಿದೆ.

ಆದರೆ, ಒಟ್ಟಾರೆ ಮೇಲ್ಸೇತುವೆ ಸುರಕ್ಷಿತವಾಗಿದ್ದು, ಆತಂಕಪಡುವ ಅಗತ್ಯ ಇಲ್ಲ. ಸುರಕ್ಷತೆಯ ದೃಷ್ಟಿಯಿಂದ ತುರ್ತು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು. ಸೇತುವೆಯ ಬೇರಿಂಗ್‌ನಲ್ಲಿ ಕಂಡು ಬಂದಿರುವ ದೋಷ ಸರಿಪಡಿಸುವ ತಜ್ಞರು ರಾಜ್ಯದಲ್ಲಿ ಇಲ್ಲವಾಗಿರುವುದರಿಂದ ಮುಂಬೈ ಮತ್ತು ದೆಹಲಿಯಿಂದ ವಿವಿಧ ತಜ್ಞರ ಸಂಸ್ಥೆಗೆ ಬಿಬಿಎಂಪಿ ಆಹ್ವಾನ ನೀಡಿದಲಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬದಲಾವಣೆ ಅಗತ್ಯ ಎಂದ ವರದಿ: ಇತ್ತೀಚೆಗೆ ಮೇಲ್ಸೇತುವೆಯಲ್ಲಿ ಗುಂಡಿ ಸೃಷ್ಟಿಯಾದ ಹಿನ್ನೆಲೆಯಲ್ಲಿ ಸೇತುವೆಯ ಗುಣಮಟ್ಟದ ಬಗ್ಗೆ ಅನುಮಾನ ವ್ಯಕ್ತವಾಗಿತ್ತು. ಹೀಗಾಗಿ, ಬಿಬಿಎಂಪಿ ಇಡೀ ಸೇತುವೆಯ ಸದೃಢತೆ ಪರೀಕ್ಷೆ ನಡೆಸುವುದಕ್ಕೆ ಸಿವಿಲ್‌ -ಎಡ್‌ ಟೆಕ್ನೋಕ್ಲಿನಿಕ್‌ ಎಂಬ ಸಂಸ್ಥೆಯನ್ನು ನಿಯೋಜಿಸಲಾಗಿತ್ತು. ಸಂಸ್ಥೆಯ ವರದಿಯಲ್ಲಿ ಸೇತುವೆ ಅತ್ಯಂತ ಕಳಪೆ ಗುಣಮಟ್ಟದಿಂದ ಕೂಡಿದೆ. ಹಲವು ಬೀಮ್‌ ಹಾಗೂ ಸ್ಲಾéಬ್‌ಗಳಲ್ಲಿ ಹನಿಕೂಂಬ್‌ ಸೃಷ್ಟಿಯಾಗಿದ್ದು, ಸೇತುವೆ ರ್‍ಯಾಂಪ್‌ ಮತ್ತು ಪಿಲ್ಲರ್‌ ಮಧ್ಯೆಅಳವಡಿಸಿರುವ ಬೇರಿಂಗ್‌ ದೋಷವಿದೆ. ಅಲ್ಲದೆ,ಇದು ಸೇತುವೆ ಸುರಕ್ಷತೆಯ ದೃಷ್ಟಿಯಿಂದ ಇದನ್ನು ಬದಲಾಯಿಸಬೇಕು ಎಂದು ವರದಿ ತಿಳಿಸಿದೆ.

ಬಿಡಿಎ ತಪ್ಪಿಗೆ ಬೆಲೆತೆತ್ತ ಬಿಬಿಎಂಪಿ: ಸುಮನಹಳ್ಳಿ ಮೇಲ್ಸೇತುವೆಯನ್ನು 2010ರಲ್ಲಿ ಬಿಡಿಎ ನಿರ್ಮಾಣ ಮಾಡಿದ್ದು, 2016ರಲ್ಲಿ ಬಿಬಿಎಂಪಿಗೆ ಹಸ್ತಾಂತರಿಸಿದೆ. ಬಿಡಿಎ ಸೇತುವೆ ನಿರ್ಮಾಣದ ವೇಳೆ ಕಳಪೆ ಕಾಮಗಾರಿಯನ್ನು ತಡೆಯುವಲ್ಲಿ ವಿಫ‌ಲವಾದ ಪರಿಣಾಮ ಬಿಬಿಎಂಪಿ ಈಗ 50 ಲಕ್ಷ ಈಗ ಇದರ ದುರಸ್ತಿಗೆ ಬಳಸುತ್ತಿದೆ. ಈಗಾಗಲೇ ಈ ಸೇತುವೆ ನಿರ್ಮಿಸಿದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ. ಹೀಗಾಗಿ, ಗುತ್ತಿಗೆದಾರರ ಮೇಲೆ ಕ್ರಮ ತೆಗೆದುಕೊಳ್ಳುವ ಅವಕಾಶವೂ ಇಲ್ಲ.

ಈ ಸೇತುವೆ ಪರಿಶೀಲನೆ ನಡೆಸುವುದಕ್ಕೆ ಸಿವಿಲ್‌ -ಎಡ್‌ ಟೆಕ್ನೋಕ್ಲಿನಿಕ್‌ ಎಂಬ ಸಂಸ್ಥೆಗೆ ಅಂದಾಜು 10 ಲಕ್ಷರೂ. ಬಿಬಿಎಂಪಿ ನೀಡಿದ್ದು, ದುರಸ್ತಿಗೆ ಅಂದಾಜು 40 ಲಕ್ಷ ರೂ. ಆಗಲಿದೆ. ಹಸ್ತಾಂತರ ಮಾಡುವ ಸಂದರ್ಭದಲ್ಲಿ ಬಿಬಿಎಂಪಿ ಅಧಿಕಾರಿಗಳು ಅಥವಾ ಸೇತುವೆ ನಿರ್ಮಾಣದ ಸಂದರ್ಭದಲ್ಲಿ ಬಿಡಿಎ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರೆ, ವೆಚ್ಚ ಮತ್ತು ಸಾರ್ವಜನಿಕರಲ್ಲಿ ಮೂಡುತ್ತಿರುವ ಆತಂಕವನ್ನು ತಪ್ಪಿಸಬಹುದಿತ್ತು.

ಸೇತುವೆಯ ಪರಿಶೀಲನೆಗೆ ನೇಮಿಸಲಾಗಿದ್ದ ಸಿವಿಲ್‌ -ಎಡ್‌ ಟೆಕ್ನೋಕ್ಲಿನಿಕ್‌ ಸಂಸ್ಥೆಯು ಸೇತುವೆ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿರುವುದು ಖಚಿತಪಡಿಸಿದೆ. ಈಗ ಸೇತುವೆ ಬಿಬಿಎಂಪಿ ಅಧೀನದಲ್ಲಿ ಇರುವುದರಿಂದ ಬಿಬಿಎಂಪಿಯೇ ಇದರ ನಿರ್ವಹಣೆ ವೆಚ್ಚ ಭರಿಸಲಿದೆ.
-ಬಿ.ಎಚ್‌.ಅನಿಲ್‌ಕುಮಾರ್‌, ಬಿಬಿಎಂಪಿ ಆಯುಕ್ತ

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.