ಕ್ಯೂಆರ್‌ ಕೋಡ್‌ನ‌ಲ್ಲಿ ಪೊಲೀಸರ ಕಾರ್ಯವೈಖರಿ ತಿಳಿಸಿ


Team Udayavani, Feb 23, 2023, 2:45 PM IST

tdy-9

ಬೆಂಗಳೂರು: ಪೊಲೀಸ್‌ ಇಲಾಖೆಯನ್ನು ಇನ್ನಷ್ಟು ಜನಸ್ನೇಹಿಯಾಗಿಸಲು ಆಗ್ನೇಯ ವಿಭಾಗದ ಪೊಲೀಸರು ಹೊಸ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡಿದ್ದಾರೆ. ಈ ತಂತ್ರಜ್ಞಾನಕ್ಕೆ “ಲೋಕಸ್ಪಂದನ’ “ನಿಮ್ಮ ನುಡಿ, ನಮ್ಮ ನಡೆ’ ಎಂಬ ಹೆಸರಿಡಲಾಗಿದೆ.

ಪೊಲೀಸ್‌ ಠಾಣೆಗಳಿಗೆ ದೂರು ಹೊತ್ತು ಬರುವ ಸಾರ್ವಜನಿಕರಿಗೆ ಪೊಲೀಸರು ಯಾವ ರೀತಿ ಸ್ಪಂದಿಸಿದರು? ಹೇಗೆ ನಡೆಸಿಕೊಂಡರು? ಎಂಬ ಬಗ್ಗೆ ದೂರುದಾರರು ಠಾಣೆ ಹೊರಭಾಗದಲ್ಲಿರುವ ಕ್ಯೂಆರ್‌ ಕೋಡ್‌ ಸ್ಕ್ಯಾನ್‌ ಮಾಡಿ, ಪೊಲೀಸರ ಬಗ್ಗೆ ಅಭಿಪ್ರಾಯ ತಿಳಿಸಬಹುದು. ಜತೆಗೆ ಸ್ಟಾರ್‌ ಮೂಲಕ ಪೊಲೀಸರ ಕರ್ತವ್ಯವನ್ನು ಶ್ಲಾಘಿಸಬಹುದು. ಈ ಮೂಲಕ ಪೊಲೀಸರು ಮತ್ತು ಸಾರ್ವಜನಿಕರ ನಡುವಿನ ಬಾಂಧವ್ಯ ಹೆಚ್ಚಾಗಲಿದೆ.

ಜತೆಗೆ ಠಾಣಾ ಮಟ್ಟದ ಪೊಲೀಸರ ಕಾರ್ಯವೈಖರಿ ಹಿರಿಯ ಅಧಿಕಾರಿಗಳಿಗೆ ನೇರವಾಗಿ ದೊರೆಯಲಿದೆ. ಅದರಿಂದ ತಪ್ಪೆಸಗಿದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕ್ಕೂ ನೆರವಾಗುತ್ತದೆ. ಕಳೆದ ಆರು ತಿಂಗಳಿಂದ ಈ ವ್ಯವಸ್ಥೆ ಜಾರಿಯಲ್ಲಿದ್ದು, ಆಗ್ನೇಯ ವಿಭಾಗ ಡಿಸಿಪಿ ಸಿ.ಕೆ.ಬಾಬಾರ ಈ ಹೊಸ ಪ್ರಯೋಗಕ್ಕೆ ಉತ್ತಮ ಸ್ಪಂದನೆ ದೊರೆಯುತ್ತಿದೆ.

ಬೇಸಿಕ್‌ ಮೊಬೈಲ್‌ ಬಳಕೆದಾರರಿಂದಲೂ ಪ್ರತಿಕ್ರಿಯೆ: ಹ್ಯಾಂಡ್ರೈಡ್‌ ಮೊಬೈಲ್‌ ಬಳಕೆದಾರರು ಮಾತ್ರವಲ್ಲ, ಬೇಸಿಕ್‌ ಮೊಬೈಲ್‌ ಬಳಕೆದಾರರು ಅಥವಾ ಬಳಸದವರು ಕೂಡ ಪೊಲೀಸರ ಬಗ್ಗೆ ಅಭಿಪ್ರಾಯವ್ಯಕ್ತಪಡಿಸಿದರು. ಠಾಣೆ ಹೊರಭಾಗದಲ್ಲಿ ಕ್ಯೂಆರ್‌ಕೋಡ್‌ ಅಂಟಿಸಿರುವ ಬಾಕ್ಸ್‌ ಕೆಳಗಡೆ ಕನ್ನಡ ಮತ್ತು ಇಂಗ್ಲಿಷ್‌ ಭಾಷೆಯಲ್ಲಿ ಚಲನ್‌ ಮಾದರಿಯಲ್ಲಿ ನಮೂನೆಗಳು ಇದೆ. ಅದರಲ್ಲಿ ಹತ್ತಾರು ಪ್ರಶ್ನೆಗಳು ಇದ್ದು, ಸರಿ/ಇಲ್ಲ ಎಂದು ಟಿಕ್‌ ಮಾಡಿ, ಲೆಟರ್‌ ಬಾಕ್ಸ್‌ನಲ್ಲಿ ಚಲನ್‌ ಹಾಕಬೇಕು. ಡಿಸಿಪಿ ಕಚೇರಿಯಲ್ಲಿರುವ ಸಿಬ್ಬಂದಿ ತಮ್ಮ ಬಳಿಯಿರುವ ಕೀ ಬಳಸಿ ಬಾಕ್ಸ್‌ನಲ್ಲಿರುವ ಚಲನ್‌ ಪಡೆದು ಡಿಸಿಪಿಗೆ ನೇರವಾಗಿ ನೀಡಲಿದ್ದಾರೆ.

ಡಿಪಿಗೆ ಕ್ಯೂಆರ್‌ಕೋಡ್‌ ಹಾಕಿ!: ಡಿಸಿಪಿ ಸೇರಿ ಆಗ್ನೇಯ ವಿಭಾಗದ ಪೊಲೀಸ್‌ ಅಧಿಕಾರಿಗಳು ತಮ್ಮ ಡಿಪಿಯಲ್ಲಿ ಕ್ಯೂಆರ್‌ಕೋಡ್‌ ಹಾಕಿಕೊಳ್ಳಬೇಕು. ರಾತ್ರಿ 10 ಅಥವಾ 11 ಗಂಟೆಯಿಂದ ಮರು ದಿನ ಮುಂಜಾನೆ 5 ಗಂಟೆ ಅವಧಿಯಲ್ಲಿ ಯಾವುದಾದರೂ ಅವಘಢ ಅಥವಾ ಬೇರೆ ಘಟನೆ ನಡೆಯಬಹುದು. ಈ ಅವಧಿಯಲ್ಲಿ ಅಧಿಕಾರಿಗಳು ವಿಶ್ರಾಂತಿ(ರಾತ್ರಿ ಪಾಳಿ ಹೊರತುಪಡಿಸಿ) ಪಡೆಯುತ್ತಿರುತ್ತಾರೆ. ಆಗ ಡಿಸಿಪಿ ಅಥವಾ ಠಾಣಾಧಿಕಾರಿಯ ಮೊಬೈಲ್‌ ಡಿಪಿ ಯನ್ನು ಸ್ಕ್ಯಾನ್‌ ಮಾಡುವ ಮೂಲಕ ದೂರುಗಳು ಅಥವಾ ಘಟನೆಯನ್ನು ಡಿಸಿಪಿಗೆ ಸಲ್ಲಿಸಬಹುದಾಗಿದೆ. ಅದರಿಂದ ಸಾರ್ವಜನಿಕರ ದೂರುಗಳು ಕಾಲ ವಿಳಂಬವಿಲ್ಲದೆ ಸಕಾಲದಲ್ಲಿ ಇತ್ಯರ್ಥವಾಗಲು ಅನುಕೂಲವಾಗುತ್ತದೆ.

6812 ಮಂದಿ ಅಭಿಪ್ರಾಯ ಸಂಗ್ರಹ : ಕಳೆದ ನವೆಂಬರ್‌ನಿಂದ ವಿಭಾಗದ 14 ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ಕ್ಯೂಆರ್‌ಕೋಡ್‌ ಅಳವಡಿಸಲಾಗಿತ್ತು. ಇದುವರೆಗೂ 8662 ಮಂದಿ ಠಾಣೆಗಳಿಗೆ ಭೇಟಿ ನೀಡಿದ್ದರು. ಅದರಲ್ಲಿ 6812 ಮಂದಿ ಅಭಿಪ್ರಾಯ ನೀಡಿದ್ದಾರೆ. ಆಡುಗೋಡಿ-438, ಬಂಡೇ ಪಾಳ್ಯ-203, ಬೇಗೂರು-939, ಬೊಮ್ಮನಹಳ್ಳಿ-482, ಎಲೆಕ್ಟ್ರಾನಿಕ್‌ ಸಿಟಿ-421, ಎಚ್‌ಎಸ್‌ಆರ್‌ ಲೇಔಟ್‌- 197, ಹುಳಿಮಾವು-254, ಕೋರಮಂಗಲ-445, ಮಡಿವಾಳ-323, ಮೈಕೋ ಲೇಔಟ್‌-879, ಪರಪ್ಪನ ಅಗ್ರಹಾರ 422, ಸೆನ್‌ ಪೊಲೀಸ್‌ ಠಾಣೆ 787, ಸದ್ದುಗುಂಟೆಪಾಳ್ಯ 470, ತಿಲಕನಗರ 552 ಮಂದಿ ಇದುವರೆಗೂ ಪ್ರತಿಕ್ರಿಯಿಸಿದ್ದಾರೆ.

ಜನಸ್ನೇಹಿ ಪೊಲೀಸ್‌ ವ್ಯವಸ್ಥೆಯನ್ನು ಇನ್ನಷ್ಟು ಬಲಗೊಳಿಸಲು “ಲೋಕ ಸ್ಪಂದನ’ “ನಿಮ್ಮ ನುಡಿ, ನಮ್ಮ ನಡೆ’ ಎಂಬ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಅದರಿಂದ ಪೊಲೀಸರ ಕಾರ್ಯವೈಖರಿಯನ್ನು ಸಾರ್ವಜನಿಕರು ನೇರವಾಗಿ ಡಿಸಿಪಿ ಕಚೇರಿಗೆ ತಲುಪಿಸಬಹುದು. – ಸಿ.ಕೆ.ಬಾಬಾ, ಆಗ್ನೇಯ ವಿಭಾಗ ಡಿಸಿಪಿ 

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.