ಬ್ರಿಟಿಷರ ಕಾನೂನು ತ್ಯಜಿಸಿ ಸಂವಿಧಾನ ರಚಿಸಿದ ದಿನ


Team Udayavani, Jan 27, 2019, 11:21 AM IST

chamaraj.jpg

ಚಾಮರಾಜನಗರ: ರಾಜ ಮಹಾರಾಜರು ಹಾಗೂ ಪಾಳೇಯಗಾರರ ಸಂಸ್ಥಾನಗಳಲ್ಲಿ ಹರಿದು ಹಂಚಿ ಹೋಗಿದ್ದ ಭಾರತವನ್ನು ಒಗ್ಗೂಡಿಸಿ ಒಕ್ಕೂಟ ರಾಷ್ಟ್ರವ ನ್ನಾಗಿ ಮಾಡಿದ ಗಣರಾಜ್ಯೋತ್ಸವ ದಿನ ಭಾರತದ ಇತಿಹಾಸದಲ್ಲಿ ಮಹತ್ವದ ದಿನವಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ಹೇಳಿದರು.

ನಗರದ ಅಂಬೇಡ್ಕರ್‌ ಕ್ರೀಡಾಂಗಣದಲ್ಲಿ ಜಿಲ್ಲಾಡ ಳಿತದಿಂದ ಆಯೋಜಿಸಿದ್ದ 70ನೇ ಗಣರಾಜೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಬ್ರಿಟಿಷರ ವಿರುದ್ಧ 90 ವರ್ಷಗಳು ಹೋರಾಟ ನಡೆಸಿದ ಫ‌ಲವಾಗಿ 1947ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ಲಭಿಸಿತು. 26 ಜನವರಿ 1950ರಲ್ಲಿ ಬ್ರಿಟಿಷರ ಕಾನೂನು ಗಳನ್ನು ತ್ಯಜಿಸಿ ಅಂಬೇಡ್ಕರ್‌ ರಚಿಸಿದ ಸಂವಿಧಾನವನ್ನು ಅಳವಡಿಸಿಕೊಂಡ ದಿನ. ನಮ್ಮ ಸಂವಿಧಾನ ಸಮಾನತೆ, ಸೋದರತ್ವ, ಸಾಮಾಜಿಕ ನ್ಯಾಯದ ಮೇಲೆ ರಚನೆ ಯಾಗಿದೆ. 700ಕ್ಕೂ ಹೆಚ್ಚು ರಾಜರ ಆಳ್ವಿಕೆಯಲ್ಲಿ ಹಂಚಿ ಹೋಗಿದ್ದ 6 ಸಾವಿರಕ್ಕೂ ಹೆಚ್ಚು ಭಾಷಾ ವೈವಿಧ್ಯತೆ ಹೊಂದಿದ್ದ ದೇಶವನ್ನು ಆಡಳಿತಾತ್ಮಕವಾಗಿ ಒಗ್ಗೂಡಿ ಸುವ ಕಾರ್ಯ ಸುಲಭವಾಗಿರಲಿಲ್ಲ. ವೈವಿಧ್ಯತೆ ನಡುವೆ ಏಕತೆ ಸ್ಥಾಪಿಸಿ ಎಲ್ಲರಿಗೂ ಒಂದೇ ತರಹದ ಹಕ್ಕು ಮತ್ತು ಕರ್ತವ್ಯಗಳನ್ನು ಪ್ರತಿಪಾದಿಸುವ ಸಂವಿಧಾನ ‌ವನ್ನು ಅಂಬೇಡ್ಕರ್‌ ನೀಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಾಲಮನ್ನಾ: ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರ ಸಾಧನೆಗಳನ್ನು ತಿಳಿಸಿದ ಅವರು, ಸರ್ಕಾರದ ಮಹತ್ತರ ಯೋಜನೆಯಾದ ರೈತರ ಬೆಳೆ ಸಾಲ ಮನ್ನಾ ಯೋಜನೆಯಲ್ಲಿ ಸಹಕಾರ ಸಂಘಗಳಿಗೆ 191 ಕೋಟಿ ಮತ್ತು ಬ್ಯಾಂಕ್‌ಗಳಿಗೆ 131 ಕೋಟಿ ರೂ. ಬಿಡುಗಡೆಯಾಗ್ದಿದು, ಈಗಾಗಲೇ ಶೇಕಡಾ 90ರಷ್ಟು ಡೇಟಾ ಎಂಟ್ರಿ ಮತ್ತು ಪರಿಶೀಲನಾ ಕಾರ್ಯ ಪೂರ್ಣಗೊಂಡಿದೆ ಎಂದರು.

ಕೃಷಿ ಭಾಗ್ಯ ಯೋಜನೆ, ಕೃಷಿ ಯಾಂತ್ರೀಕರಣ, ಲಘು ನೀರಾವರಿ, ಮಣ್ಣು ಆರೋಗ್ಯ ಅಭಿಯಾನ ಮುಂತಾದ ಯೋಜನೆಗಳಡಿ ರೈತರಿಗೆ ಕಾಲಕಾಲಕ್ಕೆ ಉಪಯೋಗವಾಗುವಂತಹ 376.49 ಲಕ್ಷ ರೂ.ವೆಚ್ಚದಲ್ಲಿ 486 ಕೃಷಿ ಹೊಂಡಗಳ ನಿರ್ಮಾಣ, 229.38 ಲಕ್ಷ ರೂ.ವೆಚ್ಚದಲ್ಲಿ 2889 ವಿವಿಧ ಕೃಷಿ ಯಂತ್ರೋಪಕರಣಗಳ ವಿತರಣೆ, 79.76 ಲಕ್ಷ ರೂ.ಮೌಲ್ಯದ 305 ರೈತರಿಗೆ ಲಘು ನೀರಾವರಿ ಉಪಕರಣ ವಿತರಣೆ ಮಾಡಲಾಗಿದೆ ಎಂದರು.

ಉದ್ಯೋಗ ಖಾತ್ರಿ: ಉದ್ಯೋಗ ಖಾತ್ರಿಯಡಿ ಜಿಲ್ಲೆಗೆ 23.53 ಲಕ್ಷ ಮಾನವ ದಿನಗಳ ಸೃಜನೆಯ ಗುರಿಯನ್ನು ನಿಗದಿಪಡಿಸಲಾಗಿದೆ. ಈ ಪೈಕಿ 16.86 ಲಕ್ಷ ಮಾನವ ದಿನ ಸೃಜಿಸಲಾಗಿದ್ದು, 64.12 ಕೋಟಿ ರೂ.ವ್ಯಯಿಸಲಾಗಿದೆ ಎಂದು ತಿಳಿಸಿದರು.

ಮಾತೃ ಪೂರ್ಣ: ಮಾತೃ ಪೂರ್ಣ ಯೋಜನೆಯಡಿ 5,009 ಗರ್ಭಿಣಿಯರು ಮತ್ತು 6,114 ಬಾಣಂತಿ ಯರು ಹಾಗೂ 1,421 ಅಂಗನವಾಡಿ ಕಾರ್ಯಕರ್ತೆ ಯರು ಮತ್ತು 1,371 ಅಂಗನವಾಡಿ ಸಹಾಯಕಿ ಯರು ಈ ಯೋಜನೆಯ ಪ್ರಯೋಜನ ಪಡೆಯು ತ್ತಿದ್ದಾರೆ. ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆ ಯಡಿ ಗರ್ಭಿಣಿಯರಿಗೆ ಆನ್‌ಲೈನ್‌ ಅರ್ಜಿಗಳ ಮೂಲಕ 5 ಸಾವಿರ ಸಹಾಯಧನ ನೀಡಲಾಗುತ್ತಿದ್ದು, ಜಿಲ್ಲೆಯಲ್ಲಿ 8,454 ಫ‌ಲಾನುಭವಿಗಳು ಆರ್ಥಿಕ ಪ್ರಯೋಜನ ಪಡೆದಿದ್ದಾರೆ. ಅಲ್ಲದೇ ಮುಖ್ಯ ಮಂತ್ರಿಗಳ ಮಹತ್ವಾಕಾಂಕ್ಷಿ ಯೋಜನೆಯಾದ ಮಾತೃಶ್ರೀ ಯೋಜನೆಯಡಿ ಆದ್ಯತಾ ಕುಟುಂಬದ ಫ‌ಲಾನುಭವಿಗಳಿಗೆ 6 ಸಾವಿರ ಸಹಾಯಧನ ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು.

ಸಮಾರಂಭದಲ್ಲಿ ಸಂಸದ ಆರ್‌. ಧ್ರುವ ನಾರಾಯಣ, ಜಿಪಂ ಅಧ್ಯಕ್ಷೆ ಶಿವಮ್ಮ, ಉಪಾಧ್ಯಕ್ಷ ಜೆ. ಯೋಗೀಶ್‌, ತಾಪಂ ಅಧ್ಯಕ್ಷೆ ದೊಡ್ಡಮ್ಮ, ಉಪಾಧ್ಯಕ್ಷ ಬಸವಣ್ಣ, ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ, ಎಸ್ಪಿ ಧರ್ಮೇಂದರ್‌ ಕುಮಾರ್‌ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆನಂದ್‌, ಜಿಪಂ ಸಿಇಒ ಡಾ. ಕೆ. ಹರೀಶ್‌ ಕುಮಾರ್‌ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.