ಖಾಸಗಿ ಶಾಲೆಗಳ ವಿರುದ್ಧ ಕ್ರಮಕ್ಕೆ ಆಗ್ರಹ


Team Udayavani, Sep 1, 2018, 4:25 PM IST

blore-6.jpg

ಬೆಂಗಳೂರು: ಸರ್ಕಾರದಿಂದ ಒಂದು ಶಾಲೆಗೆ ಪರವಾನಗಿ ಪಡೆದು ಅನೇಕ ಕಡೆ ಶಾಲೆಗಳನ್ನು ನಡೆಸುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಶುಕ್ರವಾರ ಕೇಳಿಬಂದಿದೆ.

ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಜಿಲ್ಲಾ ಪಂಚಾಯಿತಿ ಸದಸ್ಯ ಚೊಕ್ಕನಹಳ್ಳಿ ವೆಂಕಟೇಶ್‌, ಆಂಧ್ರಪ್ರದೇಶ ಮೂಲದ ಶಿಕ್ಷಣ ಸಂಸ್ಥೆಯೊಂದು ಈ ರೀತಿ ಶಾಲೆಗಳನ್ನು ನಡೆಸುತ್ತಿದೆ. ಆದರೂ, ಬೆಂಗಳೂರು ಮತ್ತು ದಕ್ಷಿಣ ಜಿಲ್ಲೆ ಉಪ
ನಿರ್ದೇಶಕರು ತಮ್ಮ ವ್ಯಾಪ್ತಿಯಲ್ಲಿ ಇಂತಹ ಪ್ರಕರಣಗಳೇ ಗಮನಕ್ಕೆ ಬಂದಿಲ್ಲ ಎಂದು ಹೇಳುತ್ತಿದ್ದಾರೆ. ಹೀಗಾಗಿ ಖಾಸಗಿ ಶಾಲೆಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ಒತ್ತಾಯಿಸಿದರು. ಈ ವೇಳೆ ಸ್ಪಷ್ಟನೆ ನೀಡಿದ ಜಿಲ್ಲಾ ಉಪನಿರ್ದೇಶಕರು, ಬಿಐಒಗಳು ನೀಡಿದ ಮಾಹಿತಿ ಆಧಾರದ ಮೇಲೆ ಉತ್ತರ ನೀಡಲಾಗಿದೆ. ಮತ್ತೂಮ್ಮೆ ಪರಿಶೀಲನೆ ನಡೆಸುವುದಾಗಿ ಹೇಳಿದರು.

ಬಿಲ್ಲುಗಳ ಅವ್ಯವಹಾರ: ಬೆಂಗಳೂರು ಉತ್ತರ ತಾಲೂಕಿನ ಸಿಂಗನಾಯಕನಹಳ್ಳಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಸುತ್ತಿರುವ ಆರ್‌ಎಫ್ಒ ಒಬ್ಬರು, ಬಿಲ್ಲುಗಳ ಅವ್ಯವಹಾರ ನಡೆಸಿರುವುದು ಕೂಡ ಸಭೆಯಲ್ಲಿ ಚರ್ಚೆಯಾಯಿತು. ಒಂದು ವರ್ಷದಲ್ಲಿ
ಆಗಬೇಕಾಗಿರುವ ಕೆಲಸವನ್ನು ಒಂದೇ ರಾತ್ರಿಯಲ್ಲಿ ಮಾಡಿರುವ ಆರ್‌ಎಫ್ಒ, ಎಂ.ಬಿ.ಬುಕ್‌ ಕೂಡ ಕಳೆದಿದ್ದಾರೆ. ಉಚಿತ ಸಸಿ ವಿತರಣೆ ಮಾಡುವ ಬದಲು ಜನರಿಂದ ಹಣ ಪಡೆದು ಸಸಿ ವಿತರಣೆ ಮಾಡಿದ್ದಾರೆ. ಇವರ ವಿರುದ್ಧ ಕ್ರಮಕೈಗೊಳ್ಳುವಂತೆ ಸದಸ್ಯೆ ಲಾವಣ್ಯ ಆಗ್ರಹಿಸಿದರು. ಇದಕ್ಕೆ ಉಪ ಅರಣ್ಯ ಸಂರಕ್ಷಕರು, ಈ ಬಗ್ಗೆ ಲೋಕಾಯುಕ್ತ
ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದರು.

ಕಾಮಗಾರಿ ಮಾಡದೇ ಬಿಲ್ಲು: ಅಂಚೇಪಾಳ್ಯ ಮತ್ತು ಮಾದಾವರದಲ್ಲಿ 3054 ಯೋಜನೆಯಡಿ ರಸ್ತೆ ಕಾಮಗಾರಿಗಾಗಿ 60 ಲಕ್ಷ ರೂ. ಅನುದಾನ ಮಂಜೂರಾಗಿದ್ದು, ಕಾಮಗಾರಿಯನ್ನು ಮಾಡದೇ ಬಿಲ್ಲು ಮಾಡಿಕೊಳ್ಳಲಾಗಿರುವುದನ್ನು ಜಿ.ಪಂ ಸದಸ್ಯ ಚಂದ್ರಪ್ಪ ಸಭೆ ಗಮನಕ್ಕೆ ತಂದರು. ಅಲ್ಲದೆ, ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹಿಸಿದರು. 
ಇದೇ ವೇಳೆ ಕೃಷಿ ಪರಿಕರಗಳ ವಿತರಣೆಯಲ್ಲಿ ಅಕ್ರಮ ನಡೆದಿದೆ ಎಂದು ಸದಸ್ಯರು ಆರೋಪಿಸಿದರು. ರೈತರಿಗೆ ನೀಡುವ ಟಾರ್ಪಲಿನ್‌, ಪಂಪ್‌ ಸೆಟ್‌ ಹಾಗೂ ಇತರ ಪರಿಕರ ವಿತರಣೆಯಲ್ಲಿ ಅವ್ಯವಹಾರದ ಆರೋಪ ಕೇಳಿ ಬಂದಿದೆ.

ಅಧಿಕಾರಿಗಳು- ಬ್ರೋಕರ್‌ಗಳ ಮಧ್ಯಸ್ಥಿಕೆಯಿಂದಾಗಿ ಈ ಅಕ್ರಮ ನಡೆಯುತ್ತಿದೆ ಎಂಬ ಆರೋಪ ಸಾರ್ವಜನಿಕ ವಲಯದಿಂದ ವ್ಯಕ್ತವಾಗುತ್ತಿದ್ದು, ಸರ್ಕಾರಿ ಸವಲತ್ತುಗಳು ನಿಜವಾದ ರೈತರ ಕೈ ಸೇರದೆ, ಅನುಕೂಲವಾದಿಗಳ ಕೈ ಸೇರುತ್ತಿವೆ ಎಂದರು. 

ಈ ವೇಳೆ ಮಾತನಾಡಿದ ಜಿ.ಪಂ ಅಧ್ಯಕ್ಷ ಮುನಿರಾಜು, ಕೃಷಿ ಪರಿಕರ ಸಮರ್ಪಕ ವಿತರಣೆ ಸಂಬಂಧ 3-4 ದಿನಗಳಲ್ಲಿ ಕಾರ್ಯನಿರ್ವಹಣಾ ಧಿಕಾರಿ, ಆಯಾ ಜಿ.ಪಂ ಸದಸ್ಯರಿಗೆ ಮಾಹಿತಿ ನೀಡುವಂತೆ ಕೃಷಿ ಅಧಿಕಾರಿಗಳಿಗೆ ಸೂಚಿಸಿದರು.

“ಬ್ಯಾಂಕ್‌ ಕನ್ನಡಮಯವಾಗಬೇಕು’: ಫ‌ಸಲ್‌ ಬಿಮಾ ಯೋಜನೆ ಮಾಹಿತಿ ಪಡೆಯಲು ರೈತರು ಬ್ಯಾಂಕ್‌ಗಳಿಗೆ ತೆರಳಿದರೆ, ಅಲ್ಲಿನ ಸಿಬ್ಬಂದಿ ಹಿಂದಿಯಲ್ಲಿ ಮಾತನಾಡುತ್ತಾರೆ. ಹೀಗಾಗಿ, ಹಿಂದಿ ಬಾರದ ರೈತರು ಬ್ಯಾಂಕ್‌ಗಳಿಗೆ ಅಲೆಯುವ ಸ್ಥಿತಿ ನಿರ್ಮಾಣವಾಗಿದೆ. ಈ ಸಂಬಂಧ ಬ್ಯಾಂಕ್‌ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಕೆಲ ಸದಸ್ಯರು ಆಗ್ರಹಿಸಿದರು. 

ಅಧಿಕಾರಿಗಳಿಗೆ ಮೊಬೈಲ್‌ ಗೀಳು
ಸಭೆಯಲ್ಲಿ ಕೃಷಿ, ಶಿಕ್ಷಣ, ತೋಟಗಾರಿಕೆ, ತೆರಿಗೆ ಸೇರಿದಂತೆ ಹಲವು ಗಂಭೀರ ವಿಚಾರಗಳ ಬಗ್ಗೆ ಚರ್ಚೆ ನಡೆಯುತ್ತಿದ್ದರೂ ಅಧಿಕಾರಿಗಳು ಮಾತ್ರ ಮೊಬೈಲ್‌ನಲ್ಲಿ ತಲ್ಲೀನರಾಗಿದ್ದರು.ಇದು ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ಕೋಪಕ್ಕೆ ಕಾರಣವಾಯಿತು. ಜನರ ಸಮಸ್ಯೆಯ ಬಗ್ಗೆ ಗಂಭೀರ ಚರ್ಚೆ ನಡೆಯುತ್ತಿದ್ದರೂ, ಅಧಿಕಾರಿಗಳು ಇದನ್ನು
ಆಲಿಸುತ್ತಿಲ್ಲ. ಕೆಲವು ಅಧಿಕಾರಿಗಳು ಗ್ರಾಮ ಸಭೆಯಲ್ಲಿ ಪಾಲ್ಗೊಳ್ಳುತ್ತಿಲ್ಲ. ಇಂತಹ ಅಧಿಕಾರಿಗಳಿಗೆ ನೀತಿ ಪಾಠ ಹೇಳಿ, ಮುಂದಿನ ಸಭೆಗಳಲ್ಲಿ ಮೊಬೈಲ್‌ ತರದಂತೆ ಕ್ರಮ ಕೈಗೊಳ್ಳಿ ಎಂದು ಜಿಲ್ಲಾ ಪಂಚಾಯತ್‌ ಕಾರ್ಯ  ನಿರ್ವಹಣಾಧಿಕಾರಿಗಳಿಗೆ ತಾಕೀತು ಮಾಡಿದರು.

ಟಾಪ್ ನ್ಯೂಸ್

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.