ನೆರವಿಗೆ ಚಲನಚಿತ್ರ ಕಾರ್ಮಿಕರ ಮನವಿ


Team Udayavani, Mar 5, 2018, 12:03 PM IST

neravu.jpg

ಬೆಂಗಳೂರು: ತನ್ನ ಕೆಲವು ತುರ್ತು ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ಚಲನಚಿತ್ರ ಕಾರ್ಮಿಕರ, ಕಲಾವಿದರ, ತಂತ್ರಜ್ಞರ ಒಕ್ಕೂಟವು ಬಿಬಿಎಂಪಿಯನ್ನು ಕೋರಿದೆ. ಒಕ್ಕೂಟದ ಕಟ್ಟಡದಲ್ಲಿ ಭಾನುವಾರ ನಡೆದ ರಾಜಕೀಯ ಹಾಗೂ ಚಿತ್ರರಂಗದ ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷ ಬಿ.ಎಂ.ಕೃಷ್ಣಮೂರ್ತಿ, ಶಾಸಕ ದಿನೇಶ್‌ ಗುಂಡೂರಾವ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಮೇಯರ್‌ ಸಂಪತ್‌ರಾಜ್‌ರನ್ನೂ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿತ್ತು. ಅವರು ಗೈರಾಗಿದ್ದರು.

ಕಾರ್ಮಿಕರ ಒಕ್ಕೂಟದ ಕಚೇರಿ ಕಳೆದ ಹಲವು ವರ್ಷಗಳಿಂದ ಗಾಂಧಿನಗರದಲ್ಲಿನ ಬಿಬಿಎಂಪಿಗೆ ಸೇರಿದ ಜಾಗದಲ್ಲಿದೆ. ಹಾಗಾಗಿ, ಮುಂದಿನ 30 ವರ್ಷಗಳವರೆಗೆ ಕನಿಷ್ಠ ಮೊತ್ತಕ್ಕೆ ಈ ಜಾಗವನ್ನು ಒಕ್ಕೂಟಕ್ಕೆ ಭೋಗ್ಯಕ್ಕೆ ನೀಡಬೇಕು ಹಾಗೂ ಕಾರ್ಮಿಕರು ಮೃತಪಟ್ಟಾಗ ಅಥವಾ ನಿವೃತ್ತರಾದಾಗ ಅವರ ನಿರವಿಗಾಗಿ ಕಲ್ಯಾಣ ನಿಧಿಗೆ ಬಿಬಿಎಂಪಿ ಐದು ಕೋಟಿ ರೂ. ನೀಡಬೇಕು ಎಂಬ ಮನವಿಯನ್ನು ಸಲ್ಲಿಸಲಾಯಿತು. 

ಈ ಬಗ್ಗೆ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಬಿ.ಎಂ.ಕೃಷ್ಣಮೂರ್ತಿ, “ಕಾರ್ಮಿಕರು ಹಲವು ವರ್ಷಗಳಿಂದ ಚಿತ್ರರಂಗಕ್ಕಾಗಿ ದುಡಿಯುತ್ತಿದ್ದೇವೆ. ನಮಗೆ ಸ್ವಂತ ಮನೆಯಿಲ್ಲ. ಒಕ್ಕೂಟದ ಕಚೇರಿಗೂ ಸ್ವಂತ ಜಾಗವಿಲ್ಲ. ಈಗಿರುವ ಜಾಗ ಬಿಬಿಎಂಪಿಗೆ ಸೇರಿದೆ. ಭೋಗ್ಯದ ಅವಧಿ ಮುಗಿಯುತ್ತಾ ಬಂದಿದ್ದು, ಹೆಚ್ಚಿನ ಹಣ ನೀಡುವ ಶಕ್ತಿ ಒಕ್ಕೂಟಕ್ಕಿಲ್ಲ. ಕಾರಣ, ಮುಂದಿನ 30 ವರ್ಷಗಳವರೆಗೆ ಕಡಿಮೆ ಮೊತ್ತಕ್ಕೆ ಈ ಜಾಗವನ್ನು ಒಕ್ಕೂಟಕ್ಕೆ ಭೋಗ್ಯಕ್ಕೆ ನೀಡಬೇಕು,’ ಎಂದರು.

ಸಮಂಜಸ ಬೇಡಿಕೆ: ಮನವಿ ಸ್ವೀಕರಿಸಿ ಮಾತನಾಡಿದ ಶಾಸಕ ದಿನೇಶ್‌ ಗುಂಡೂರಾವ್‌, “ಒಕ್ಕೂಟದ ಬೇಡಿಕೆ ಸಮಂಜಸವಾಗಿದೆ. ಮೇಯರ್‌ ಸಮಾರಂಭದಲ್ಲಿ ಭಾಗಿಯಾಗಿದ್ದರೆ ಅವರೇದುರೇ ಸಮಸ್ಯೆ ಪರಿಹಾರವಾಗುತ್ತಿತ್ತು. ಆದರೆ, ಅವರು ಮುಖ್ಯಮಂತ್ರಿಗಳ ಜೊತೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಆದರೂ ನಮ್ಮ ಮನವಿಯನ್ನು ಅವರು ತಿರಸ್ಕರಿಸುವುದಿಲ್ಲ ಎಂಬ ವಿಶ್ವಾಸವಿದೆ. ಭೋಗ್ಯಕ್ಕೆ ಸಂಬಂಧಿಸಿದ ಒಕ್ಕೂಟದ ಬೇಡಿಕೆಯನ್ನು ಖಂಡಿತ ಮಾಡಿಸಿಕೊಡುತ್ತೇನೆ. ಇದಕ್ಕೆ ಯಾರೂ ವಿರೋಧ ವ್ಯಕ್ತಪಡಿಸುವುದಿಲ್ಲ ಎಂಬ ನಂಬಿಕೆ ಇದೆ.

ಐದು ಕೋಟಿ ಅನುದಾನದ ವಿಚಾರವಾಗಿಯೂ ಚರ್ಚಿಸುತ್ತೇನೆ’ ಎಂದರು. ಕಾರ್ಯಕ್ರಮದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು, ನಿರ್ಮಾಪಕರಾದ ರಾಕ್‌ಲೈನ್‌ ವೆಂಕಟೇಶ್‌, ಸೂರಪ್ಪ ಬಾಬು, ಹಿರಿಯ ನಟ ದೊಡ್ಡಣ್ಣ ಹಾಗೂ ಇತರರು ಭಾಗವಹಿಸಿದ್ದರು. ಇದೇ ವೇಳೆ ಅತಿಥಿಗಳನ್ನು ಸನ್ಮಾನಿಸಲಾಯಿತು.

ಮೇಯರ್‌ ನಿಧಿಯಲ್ಲಿ 5 ಕೋಟಿ ಕೊಡಿ: “ಐದು ಕೋಟಿ ನೀಡುವುದು ಬಿಬಿಎಂಪಿಗೇನು ದೊಡ್ಡ ವಿಚಾರವಲ್ಲ. ಮೇಯರ್‌ ನಿಧಿಯಲ್ಲಿ 150 ಕೋಟಿ ರೂ. ಇದೆ. ಅದರಲ್ಲಿ ಐದು ಕೋಟಿ ಕೊಡೋಕೆ ಹೇಳಿ’ ಎಂದು ತಮ್ಮದೇ ಧಾಟಿಯಲ್ಲಿ ದಿನೇಶ್‌ ಗುಂಡೂರಾವ್‌ ಅವರತ್ತ ನೋಡುತ್ತಾ ಹೇಳಿದ ಅಂಬರೀಷ್‌, ವಸತಿ ಯೋಜನೆಯಡಿ ಕಾರ್ಮಿಕರಿಗೆ ಮನೆ ನೀಡುವ ಬಗ್ಗೆಯೂ ಮುತುವರ್ಜಿ ವಹಿಸುವಂತೆ ಕೋರಿದರು. ಹಾಗೇ “ಹಲವು ವರ್ಷಗಳಿಂದ ಕಾರ್ಮಿಕರನ್ನು ತುಂಬಾ ಹತ್ತಿರದಿಂದ ನೋಡುತ್ತಿದ್ದೇನೆ. ಕಾರ್ಮಿಕರು ಮೊದಲು ಸ್ವಂತ ಮನೆ ಮಾಡಿಕೊಳ್ಳಲು ಪ್ರಯತ್ನಿಸಬೇಕು. ಸರ್ಕಾರದ ವಸತಿ ಯೋಜನೆ ಬಳಸಿಕೊಂಡು ಮನೆ ಮಾಡಿಕೊಳ್ಳಿ,’ ಎಂದು ಸಲಹೆ ನೀಡಿದರು.

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.