ಶಿಕ್ಷೆ ಪುನರ್ ಪರಿಶೀಲಿಸಲು ಮುಖ್ಯಮಂತ್ರಿಗೆ ಮನವಿ
Team Udayavani, Jun 25, 2017, 1:08 AM IST
ಬೆಂಗಳೂರು: ಇಬ್ಬರು ಪತ್ರಕರ್ತರಿಗೆ ಶಿಕ್ಷೆ ವಿಧಿಸಿರುವ ವಿಧಾನಸಭೆ ಸ್ಪೀಕರ್ ಅವರ ತೀರ್ಮಾನವನ್ನು ಪುನರ್ಪರಿಶೀಲಿಸುವಂತೆ ಬೆಂಗಳೂರು ಪ್ರಸ್ಕ್ಲಬ್ ಹಾಗೂ ಬೆಂಗಳೂರು ವರದಿಗಾರರ ಕೂಟ ಮುಖ್ಯಮಂತ್ರಿಯವರನ್ನು ಮನವಿ ಮಾಡಿದೆ.
ಈ ಸಂಬಂಧ ಮುಖ್ಯಮಂತ್ರಿಯವರಿಗೆ ಜಂಟಿಯಾಗಿ ಮನವಿ ಪತ್ರ ಸಲ್ಲಿಸಿರುವ ಬೆಂಗಳೂರು ಪ್ರಸ್ಕ್ಲಬ್ ಹಾಗೂ ಬೆಂಗಳೂರು ವರದಿಗಾರರ ಕೂಟದ ಪದಾಧಿಕಾರಿಗಳು, ನಾವು ಸ್ಪೀಕರ್ ಅವರ ತೀರ್ಮಾನ ಪ್ರಶ್ನಿಸುತ್ತಿಲ್ಲ. ಆದರೆ, ಈ ತೀರ್ಪನ್ನು ಪುನರ್ಪರಿಶೀಲಿಸಿ ಪತ್ರಕರ್ತರಿಗೆ ರಕ್ಷಣೆ ಕೊಡುವ ನಿಟ್ಟಿನಲ್ಲಿ ತಾವು ತಮ್ಮ ರಾಜಕೀಯ ಮುತ್ಸದ್ದಿತನ ಪ್ರದರ್ಶಿಸಿ, ಪತ್ರಿಕಾರಂಗದ ಈ ಅಭದ್ರತೆ ಗೊಂದಲ ನಿವಾರಿಸಬೇಕು ಎಂದು ಮನವಿ ಮಾಡಿದ್ದಾರೆ.
ಬೆಂಗಳೂರು ಪ್ರಸ್ಕ್ಲಬ್, ಬೆಂಗಳೂರು ವರದಿಗಾರರ ಕೂಟ ಸೇರಿದಂತೆ ಕರ್ನಾಟಕದ ಎಲ್ಲ ಪತ್ರಕರ್ತರ ಸಂಘಟನೆಗಳ ಸದಸ್ಯರು ಪ್ರಜಾಪ್ರಭುತ್ವ ವ್ಯವಸ್ಥೆಯ ಅತ್ಯುನ್ನತ ಅಂಗವಾಗಿರುವ ಸಂಸದೀಯ ವ್ಯವಸ್ಥೆಯನ್ನು ಅತ್ಯಂತ ಗೌರವದಿಂದ ಕಾಣುತ್ತಾರೆ. ಅದರಲ್ಲೂ ಕರ್ನಾಟಕದ ವಿಧಾನಮಂಡಲಕ್ಕೆ ತನ್ನದೇ ಆದ ವರ್ಚಸ್ಸು, ಗೌರವ ಮತ್ತು ಇತಿಹಾಸವಿದೆ. ಆದರೆ, ಇತ್ತಿಚಿನ ಕೆಲವು ಬೆಳವಣಿಗೆಗಳು ಪತ್ರಿಕಾರಂಗಕ್ಕೆ ದೊಡ್ಡ ಆತಂಕವನ್ನು ಉಂಟುಮಾಡಿದೆ. ಮುಖ್ಯವಾಗಿ ಕಳೆದ ವಿಧಾನಸಭಾ ಅಧಿವೇಶನದಲ್ಲಿ ಸದನದ ಹಕ್ಕುಬಾಧ್ಯತಾ ಸಮಿತಿಯ ವರದಿ ಪ್ರಕಾರ ಸ್ಪೀಕರ್ ಅವರು ಇಬ್ಬರು ಪತ್ರಕರ್ತರಿಗೆ ಶಿಕ್ಷೆ ಪ್ರಕಟಿಸಿರುವುದು ಇಡೀ ಪತ್ರಿಕಾ ಬಳಗವನ್ನು ಆತಂಕಕ್ಕೀಡು ಮಾಡಿದೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸ್ಪೀಕರ್ ಅವರು ನೀಡಿದ ತೀರ್ಪನ್ನು ನಾವು ಗೌರವಿಸುತ್ತೇವೆ. ಆದರೆ, ಇಂತಹ ಬೆಳವಣಿಗೆಗಳು ಅನೇಕ ದಶಕಗಳಿಂದ ಶಾಸಕಾಂಗ ಮತ್ತು ಪತ್ರಿಕಾರಂಗದ ನಡುವೆ ಇರುವ ಉತ್ತಮ ಬಾಂಧವ್ಯ, ಸೌಹಾರ್ದತೆ ಧಕ್ಕೆ ತಂದಾಗುತ್ತಿದೆ ಅನ್ನುವುದು ನಮ್ಮ ಅನಿಸಿಕೆ. ಆದ್ದರಿಂದ ತೀರ್ಪು ಪುನರ್ಪರಿಶೀಲಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ನಿಯೋಗದಲ್ಲಿ ಪ್ರಸ್ಕ್ಲಬ್ ಅಧ್ಯಕ್ಷ ಸದಾಶಿವ ಶೆಣೈ, ಪ್ರಧಾನ ಕಾರ್ಯದರ್ಶಿ ಎಚ್.ವಿ.ಕಿರಣ್, ವರದಿಗಾರರ ಕೂಟದ ಪ್ರಧಾನ ಕಾರ್ಯದರ್ಶಿ ಎಂ.ಚಂದ್ರಶೇಖರ್, ಉಪಾಧ್ಯಕ್ಷ ಆರ್.ಟಿ.ವಿಠಲ್ವುೂರ್ತಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ