ತಡೆಹಿಡಿದ ಮುಂಬಡ್ತಿ ಕೈ ಬಿಡುವಂತೆ ಸಿಎಂಗೆ ಮನವಿ
Team Udayavani, Jul 31, 2018, 7:35 AM IST
ಬೆಂಗಳೂರು: ಬಡ್ತಿ ಮೀಸಲಾತಿಗೆ ಸಂಬಂಧಿಸಿದ ಬಿ.ಕೆ. ಪವಿತ್ರಾ ಪ್ರಕರಣದ ಹಿನ್ನೆಲೆಯಲ್ಲಿ ತಡೆ ಹಿಡಿಯಲಾದ ತಮ್ಮ
ಮುಂಬಡ್ತಿ ಕೈಬಿಡುವಂತೆ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 75ಕ್ಕೂ ಹೆಚ್ಚು
ಪಿಎಸ್ಐ ಹಾಗೂ ಎಸ್ಐ ಗಳು ಸೋಮವಾರ ಸಿಎಂಗೆ ಮನವಿ ಸಲ್ಲಿಸಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಪಿಎಸ್ಐ ಹಾಗೂ ಎಸ್ಐಗಳು ಇಲಾಖೆಯಲ್ಲಿ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದೆ. ಅಷ್ಟರೊಳಗೆ ತಮ್ಮ ಸಮಸ್ಯೆಗೆ ಪರಿಹಾರ ದೊರಕಿಸಿಕೊಡಿ ಎಂದು ಮನವಿ ಸಲ್ಲಿಸಿದರು. ಬಿ.ಕೆ. ಪವಿತ್ರಾ ಪ್ರಕರಣಕ್ಕೂ ನಮಗೂ ಸಂಬಂಧವಿಲ್ಲ. ಆದರೂ, ಇದೇ ಪ್ರಕರಣದ ಕಾರಣ ಹೇಳಿ ಕಳೆದ 2 ವರ್ಷಗಳಿಂದ ನಮ್ಮ ಮುಂಬಡ್ತಿ ತಡೆ ಹಿಡಿಯಲಾಗಿದೆ. ಈ ಮಧ್ಯೆ ಬೇರೆ ಇಲಾಖೆಗಳಲ್ಲಿ ಮುಂಬಡ್ತಿ, ಪದೋನ್ನತಿ ನೀಡಲಾಗಿದೆ. ಆದರೆ, ನಮ್ಮ ಇಲಾಖೆಯಲ್ಲಿ ಮಾತ್ರ ತಡೆ ಹಿಡಿಯಲಾಗಿದೆ. ಸಾಮಾನ್ಯ ವರ್ಗಾವಣೆ ಆರಂಭಗೊಂಡರೆ ನಮಗೆ ಅನ್ಯಾಯವಾಗುತ್ತದೆ. ಆದ್ದರಿಂದ ವರ್ಗಾವಣೆ ಸಂದರ್ಭದಲ್ಲಿ ಸೇವಾ ಜೇಷ್ಠತೆ ಅನುಸಾರ ನಮಗೆ ಸಿಪಿಐ ಹುದ್ದೆಗಳಿಗೆ ಬಡ್ತಿ ನೀಡುವಂತೆ ಸಿಎಂಗೆ ಮನವಿ ಸಲ್ಲಿಸಲಾಗಿದೆ ಎಂದು ಹೆಸರು ಹೇಳಲಿಚ್ಛಿಸದ ಪಿಎಸ್ಐಯೊಬ್ಬರು “ಉದಯವಾಣಿ’ಗೆ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ