ಸಿಎಂ ನಿವಾಸಕ್ಕೆ ದೌಡಾಯಿಸಿದ ಹೊರಟ್ಟಿ; ಸಭಾಪತಿ ಸ್ಥಾನ ಜೆಡಿಎಸ್ ಗೆ ಬಿಟ್ಟುಕೊಡುವಂತೆ ಮನವಿ
Team Udayavani, Jan 27, 2021, 10:50 AM IST
ಬೆಂಗಳೂರು: ಕಾವೇರಿ ನಿವಾಸದಲ್ಲಿ ಸಿಎಂ ಯಡಿಯೂರಪ್ಪ ಭೇಟಿ ಮಾಡಿದ ಬಸವರಾಜ ಹೊರಟ್ಟಿ, ಸಭಾಪತಿ ಸ್ಥಾನ ಜೆಡಿಎಸ್ ಗೆ ಬಿಟ್ಟುಕೊಡುವಂತೆ ಮನವಿ ಮಾಡಿದರು.
ಜೆಡಿಎಸ್ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಸಿಎಂ ಬಿಎಸ್ ವೈ, ಇಂದು ಸಂಜೆ ಸಭೆ ನಡೆಸಿ ಪಕ್ಷದ ತೀರ್ಮಾನ ಮಾಡುತ್ತೇವೆಂದು ತಿಳಿಸಿದರು. ಆ ಮೂಲಕ ಜೆಡಿಎಸ್ ಗೆ ಸಭಾಪತಿ ಸ್ಥಾನ, ಬಿಜೆಪಿಗೆ ಉಪ ಸಭಾಪತಿ ಸ್ಥಾನ ಬಹುತೇಕ ಖಚಿತವಾದಂತಾಗಿದೆ.
ಸಿಎಂ ಭೇಟಿ ಬಳಿಕ ಮಾತನಾಡಿದ ಬಸವರಾಜ ಹೊರಟ್ಟಿ, ಸಭಾಪತಿ ಸ್ಥಾನದ ವಿಚಾರವಾಗಿ ಸಿಎಂ ಭೇಟಿ ಮಾಡಿದ್ದೆ. ಈ ವೇಳೆ ಜೆಡಿಎಸ್ ಗೆ ಸಭಾಪತಿ ಸ್ಥಾನ ಬಿಟ್ಟು ಕೊಡುವಂತೆ ಮನವಿ ಮಾಡಿದ್ದೇವೆ. ಇದಕ್ಕೆ ಸಿಎಂ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಇಂದು ಸಂಜೆ ಸಭೆ ಸೇರಿ ತೀರ್ಮಾನ ಮಾಡುತ್ತಾರೆ. ಉಪ ಸಭಾಪತಿ ಸ್ಥಾನ ಬಿಜೆಪಿಗೆ ಬಿಟ್ಟು ಕೊಡಲಿದ್ದೇವೆ ಎಂದರು.
ಇದನ್ನೂ ಓದಿ: ಪತ್ನಿ ದೂರವಾದಳೆಂದು 18 ಮಹಿಳೆಯರ ಸರಣಿ ಹತ್ಯೆ: ಪೊಲೀಸರಿಂದ ಆರೋಪಿಯ ಬಂಧನ
29 ರಂದು ಉಪ ಸಭಾಪತಿ ಚುನಾವಣೆ ಇದೆ. ಇದರ ಬಳಿಕ ಸಭಾಪತಿ ಪ್ರತಾಪ ಚಂದ್ರ ಶೆಟ್ಟಿ ಅವರು ಉಪ ಸಭಾಪತಿ ಅವರಿಗೆ ರಾಜೀನಾಮೆ ನೀಡಬಹುದು ! ನಂತರ ರಾಜ್ಯಪಾಲರು ಸಭಾಪತಿ ಚುನಾವಣೆಗೆ ದಿನ ನಿಗದಿ ಮಾಡಬೇಕಾಗುತ್ತದೆ.
ಅವರು ಇದೇ ಅಧಿವೇಶನದಲ್ಲಿ ಸಭಾಪತಿ ಚುನಾವಣೆಗೆ ದಿನ ನಿಗದಿ ಮಾಡಿದರೆ, ಸಭಾಪತಿಯಾಗಿ ಆಯ್ಕೆ ಆಗುತ್ತೇನೆ. ಇಲ್ಲದಿದ್ದರೆ ಮುಂದಿನ ಅಧಿವೇಶನದಲ್ಲಿ ಸಭಾಪತಿ ಆಯ್ಕೆ ಆಗಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ: 4 ವರ್ಷದ ಜೈಲುವಾಸ ಅಂತ್ಯ; ಜ.27ರಂದು ಎಐಎಡಿಎಂಕೆ ಮಾಜಿ ನಾಯಕಿ ಶಶಿಕಲಾ ಬಿಡುಗಡೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
Rural Life: ಗ್ರಾಮೀಣ ಬದುಕಿನ ಮೆಲುಕು