ಕೆಎಸ್ಆರ್ಟಿಸಿ ಪ್ರಯಾಣ ದರ ಶೆ.10 ಇಳಿಸಲು ಮನವಿ
Team Udayavani, Jan 28, 2018, 11:20 AM IST
ಬೆಂಗಳೂರು: ಕೆಎಸ್ಆರ್ಟಿಸಿ ಪ್ರಯಾಣ ದರವನ್ನು ಶೇ.10 ರಷ್ಟು ಇಳಿಸಲು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ 4 ಸಾರಿಗೆ ನಿಗಮಗಳು ನಷ್ಟದಲ್ಲಿವೆ. ಆದರೂ ಪ್ರಯಾಣಿಕರ ಹಿತದೃಷ್ಟಿಯಿಂದ ಪ್ರಯಾಣ ದರ ಇಳಿಸಲು ಕೋರಲಾಗುವುದು ಎಂದು ಹೇಳಿದರು. ಬಜೆಟ್ ಕುರಿತು ಭಾನುವಾರ ಮುಖ್ಯಮಂತ್ರಿ ಸಭೆ ಕರೆದಿದ್ದಾರೆ. ಈ ಬಗ್ಗೆ ನಾನು ಇಲಾಖೆ ಅಧಿಕಾರಿಗಳ ಜತೆ ಪೂರ್ವಭಾವಿ ಸಭೆ ನಡೆಸಿದ್ದೇನೆ. ಸಭೆಯಲ್ಲಿ ಪ್ರಯಾಣ ದರ ಇಳಿಕೆಗೆ ಮನವಿ ಮಾಡಲಾಗುವುದು ಎಂದರು.
ಈ ಬಾರಿಯ ಬಜೆಟ್ನಲ್ಲಿ ಹಲವು ಯೋಜನೆ ಪ್ರಕಟಿಸಲು ತೀರ್ಮಾನಿಸಲಾಗಿದ್ದು, ಸಾರಿಗೆ ಇಲಾಖೆಗೆ 1000 ಕೋಟಿ ರೂ. ಬಜೆಟ್ನಲ್ಲಿ ಮೀಸಲಿಡಲು ಬೇಡಿಕೆ ಇಡಲಾಗುವುದು ಎಂದು ಹೇಳಿದರು.
ರಿಯಾಯಿತಿ ಬಸ್ ಪಾಸ್ ಬಾಕಿ ಹಣ 341 ಕೋಟಿ ರೂ. ಸರ್ಕಾರದ ಬಳಿಯೇ ಇದೆ. ಇದನ್ನು ಕೊಡುವಂತೆ ಒತ್ತಾಯ ಮಾಡುತ್ತೇವೆ. ರೈತರಿಗೆ ಟ್ರ್ಯಾಕ್ಟರ್ ಲೈಸೆನ್ಸ್ ಮತ್ತು ಡ್ರೈವಿಂಗ್ ತರಬೇತಿ ಉಚಿತ ನೀಡುವ ಪ್ರಸ್ತಾವನೆಯೂ ಇದ್ದು ಮುಖ್ಯಮಂತ್ರಿಯವರ ಜತೆ ಚರ್ಚಿಸಲಾಗುವುದು.
ಎಚ್ಟಿವಿ (ಹೆವಿ ಟ್ರಾನ್ಸ್ಪೊàರ್ಟ್ ವೆಹಿಕಲ್) ಲೈಸೆನ್ಸ್ ಪಡೆಯಲು ಮುಂದಾಗುವ ಎಸ್ಸಿ-ಎಸ್ಟಿ ಅಭ್ಯರ್ಥಿಗಳಿಗೆ ಉಚಿತ ಲೈಸೆನ್ಸ್ ನೀಡಲು ಮುಖ್ಯಮಂತ್ರಿಯವರಿಗೆ ಮನವಿ ಮಾಡಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
MUST WATCH
ಹೊಸ ಸೇರ್ಪಡೆ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್