ಕಡೆಗೂ ರೇರಾ ಓಕೆ; ನಿಯಮಾವಳಿ ರೂಪಿಸಲು ರಾಜ್ಯ ಸಂಪುಟ ಅಸ್ತು


Team Udayavani, Jul 6, 2017, 3:45 AM IST

T-B-Jayachandra.jpg

ಬೆಂಗಳೂರು: ರಿಯಲ್‌ ಎಸ್ಟೇಟ್‌ ಸಂಸ್ಥೆಗಳು ಹಾಗೂ ಬಿಲ್ಡರ್‌ಗಳಿಂದ ನಿವೇಶನ, ಮನೆ, ಅಪಾರ್ಟ್‌ಮೆಂಟ್‌ ಖರೀದಿ ಮಾಡುವ ಗ್ರಾಹಕರಿಗೆ ಬಲ ತುಂಬುವ ಕೇಂದ್ರ ಸರ್ಕಾರದ ರಿಯಲ್‌ ಎಸ್ಟೇಟ್‌ ನಿಯಂತ್ರಣ ಕಾಯ್ದೆ (ರೇರಾ)ಗೆ ನಿಯಮಾವಳಿ ರೂಪಿಸಲು ರಾಜ್ಯ ಸಚಿವ ಸಂಪುಟ ಕೊನೆಗೂ ಬುಧವಾರ ಒಪ್ಪಿಗೆ ನೀಡಿದೆ. ಹಲವು ತಿಂಗಳುಗಳಿಂದ ಈ ಪ್ರಸ್ತಾವ ನೆನೆಗುದಿಗೆ ಬಿದ್ದಿತ್ತು.

ಚಾಲ್ತಿಯಲ್ಲಿರುವ ಯೋಜನೆಗಳ ಪೈಕಿ ಶೇ.60ರಷ್ಟು ಸಂಪೂರ್ಣಗೊಳಿಸಿ ಕ್ರಯ ಪತ್ರ ಮಾಡಿಕೊಟ್ಟಿರುವುದಕ್ಕೆ (ಉದಾ: ಹತ್ತು ಬ್ಲಾಕ್‌ಗಳಲ್ಲಿ ಆರು ಬ್ಲಾಕ್‌ ಪೂರ್ಣ)  ವಿನಾಯಿತಿ ನೀಡಲಾಗಿದೆ. ಬಿಡಿಎ ಹಾಗೂ ಗೃಹ ಮಂಡಳಿ ಸಹ  ಈ ಕಾಯ್ದೆಯ ವ್ಯಾಪ್ತಿಗೆ ಬರಲಿದೆ.

ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ, ನಿಯಮಾವಳಿ ಅಧಿಸೂಚನೆ ಹೊರಡಿಸಿದ ತಕ್ಷಣ ಇದು ಜಾರಿಗೆ ಬರಲಿದೆ. ಕ್ರೆಡಾಯ್‌ ಸೇರಿದಂತೆ ರಿಯಲ್‌ ಎಸ್ಟೇಟ್‌ -ಬಿಲ್ಡರ್ ವಲಯದ ಮನವಿ, ಸಲಹೆ ಎಲ್ಲವನ್ನೂ ಪರಿಗಣಿಸಿ ನಿಯಮಾವಳಿ ರೂಪಿಸಲಾಗಿದೆ ಎಂದು ಹೇಳಿದರು.

2016 ರಲ್ಲಿ ಕೇಂದ್ರ ಸರ್ಕಾರ ರೇರಾ ಕಾಯ್ದೆ ತಂದಿತ್ತು. ಆರು ತಿಂಗಳಲ್ಲಿ ರಾಜ್ಯ ಸರ್ಕಾರ ನಿಯಮಾವಳಿ ರೂಪಿಸಿಕೊಳ್ಳಬೇಕಿತ್ತು. ಆದರೆ, ಕಾರಣಾಂತರಗಳಿಂದ ತಡ ಆಗಿದೆ. ಗುಜರಾತ್‌, ರಾಜಸ್ಥಾನ ಸೇರಿ ಬೇರೆ ರಾಜ್ಯಗಳಲ್ಲಿ ರೂಪಿಸಿರುವ ಕಾಯ್ದೆ ಅಧ್ಯಯನ ಮಾಡಿ ನಿಯಮಾವಳಿ ರೂಪಿಸಿದ್ದೇವೆ. ಆದಷ್ಟು ಶೀಘ್ರ ಪ್ರಾಧಿಕಾರ ರಚನೆ ಸೇರಿ ಇತರೆ ಪ್ರಕ್ರಿಯೆಗಳು ನಡೆಯಲಿವೆ ಎಂದು ತಿಳಿಸಿದರು.

ವಿಳಂಬ
ರಾಜ್ಯ ಸರ್ಕಾರ ಸಾಕಷ್ಟು ಹಿಂದೆಯೇ ರೇರಾ ಕಾಯ್ದೆಗೆ ಕರಡು ನಿಯಮಾವಳಿ ರೂಪಿಸಿ ಕ್ರೆಡಾಯ್‌ ಸೇರಿದಂತೆ ರಿಯಲ್‌ ಎಸ್ಟೇಟ್‌ ವಲಯದಿಂದ ಆಕ್ಷೇಪಣೆ, ಸಲಹೆ ಸ್ವೀಕರಿಸಲಾಗಿತ್ತಾದರೂ ಪ್ರಭಾವಿಗಳ ಒತ್ತಡದಿಂದ ಅಂತಿಮ ನಿಯಮಾವಳಿ ರೂಪಿಸಿರಲಿಲ್ಲ. ಚಾಲ್ತಿಯಲ್ಲಿರುವ ಕೆಲವು ಯೋಜನೆಗಳ ಮಾಲೀಕರು ತಾವು ಸ್ವಾಧೀನಾನುಭವ ಪತ್ರ ಪಡೆದ ನಂತರ ನಿಯಮಾವಳಿ ರೂಪಿಸಿ ಎಂದು ಸರ್ಕಾರದ ಮೇಲೆ ಒತ್ತಡ ಹೇರಿದ್ದರು. ಇದರ ನಡುವೆ ಪ್ರತಿಪಕ್ಷಗಳು ಸರ್ಕಾರದ ವಿಳಂಬ ನೀತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದವು. ಗ್ರಾಹಕರ ಸಂಘದಿಂದಲೂ ಆದಷ್ಟು ಬೇಗ ಕಾಯ್ದೆ ಜಾರಿಗೆ ಮನವಿ ಸಲ್ಲಿಸಲಾಗಿತ್ತು.

ಏನಿದು ಕಾಯ್ದೆ?
ರಿಯಲ್‌ ಎಸ್ಟೇಟ್‌ ಸಂಸ್ಥೆಗಳು, ಬಿಲ್ಡರ್‌ಗಳಿಂದ ಮನೆ, ನಿವೇಶನ, ವಸತಿ ಸಮುತ್ಛಯ ಖರೀದಿ ಮಾಡುವ ಗ್ರಾಹಕರಿಗೆ ಒಪ್ಪಂದದಂತೆ ಕಾಲಮಿತಿಯಲ್ಲಿ ಹಂಚಿಕೆ ಹಾಗೂ ಗುಣಮಟ್ಟ ಕಾಯ್ದುಕೊಳ್ಳುವುದು ಕಾಯ್ದೆಯ ಪ್ರಮುಖ ಅಂಶ. ಒಂದು ವೇಳೆ ಉಲ್ಲಂಘನೆಯಾದರೆ ದಂಡ ಹಾಗೂ ಜೈಲು ಶಿಕ್ಷೆಯೂ  ಇದೆ. ಕಾಯ್ದೆ ಪ್ರಕಾರ, ರಾಜ್ಯ ಸರ್ಕಾರ ನಿಯಂತ್ರಣ ಪ್ರಾಧಿಕಾರ ರಚನೆ ಮಾಡಬೇಕು. ಅದಕ್ಕೆ ನಿವೃತ್ತ ನ್ಯಾಯಮೂರ್ತಿ ನೇಮಕಗೊಳಿಸಬೇಕು. ಎಲ್ಲ ರಿಯಲ್‌ ಎಸ್ಟೇಟ್‌ ಸಂಸ್ಥೆ, ಬಿಲ್ಡರ್‌ಗಳು ನೋಂದಣಿ ಮಾಡಿಕೊಳ್ಳುವುದು ಕಡ್ಡಾಯ. ಸ್ಥಳೀಯ ಪ್ರಾಧಿಕಾರಗಳು ಹಾಗೂ ಸಕ್ಷಮ ಸಂಸ್ಥೆಗಳಿಂದ ಅನುಮತಿ ಪಡೆದ ನಂತರವಷ್ಟೇ ಗ್ರಾಹಕರಿಂದ ಮುಂಗಡ ಪಡೆಯಬೇಕು. ನಂತರ ಕಾಲಮಿತಿಯಲ್ಲಿ ಪೂರ್ಣಗೊಳಿಸಿ ಹಸ್ತಾಂತರ ಮಾಡಬೇಕು.

ಜೈಲು ಶಿಕ್ಷೆಯೂ ಇದೆ
ಕಾಲಮಿತಿಯಲ್ಲಿ ಯೋಜನೆ ಪೂರ್ಣಗೊಳಿಸಿ ಹಸ್ತಾಂತರ ಮಾಡದ ಪ್ರಕರಣಗಳಲ್ಲಿ ದಂಡ ಹಾಗೂ ಜೈಲು ಶಿಕ್ಷೆಯೂ ಆಗಲಿದೆ. ಪ್ರತಿ ಗ್ರಾಹಕರ ಸಂಪೂರ್ಣ ಮಾಹಿತಿ ವೆಬ್‌ಸೈಟ್‌ನಲ್ಲಿ ಪ್ರಕಟಿಸುವುದು, ಕಾಮಗಾರಿಯ ಪ್ರಗತಿ ಹಂತ ವೈಬ್‌ಸೈಟ್‌ನಲ್ಲಿ ಪ್ರಕಟಿಸಬೇಕು. ಗ್ರಾಹಕರಿಂದ ಸಂಗ್ರಹ ಮಾಡಿದ ಮುಂಗಡದ ಪೈಕಿ ಶೇ.70 ರಷ್ಟು ರೇರಾ ನಿಯಂತ್ರಣ ಪ್ರಾಧಿಕಾರದಲ್ಲಿ ಠೇವಣಿ ಇಡುವುದು, ದರ ನಿಗದಿಗೆ ಸರ್ಕಾರಿ ಮಾರ್ಗಸೂಚಿ ದರ ಅನ್ವಯವಾಗುವುದು ಸೇರಿದಂತೆ ಕೇಂದ್ರ ಸರ್ಕಾರದ ಕಾಯ್ದೆಯಲ್ಲಿರುವ ನಿಯಮಾವಳಿಗಳನ್ನೇ ಇಲ್ಲೂ ಅಳವಡಿಸಿಕೊಳ್ಳಲಾಗಿದೆ.

ಟಾಪ್ ನ್ಯೂಸ್

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.